AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?

ರಾಜಕೀಯ ವಿಚಾರದಲ್ಲಿ ಯಶ್ ಮುಂದಿನ ನಡೆ ಏನು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇತ್ತು. ಇದಕ್ಕೆ ಅವರ ಆಪ್ತ ಬಳಗದಿಂದ ಉತ್ತರ ಸಿಕ್ಕಿದೆ.

Yash: ಯಶ್​ ಮನೆ ಬಾಗಿಲು ತಟ್ಟಿದ ರಾಜಕೀಯ ಮುಖಂಡರು; ರಾಕಿಂಗ್ ಸ್ಟಾರ್ ನಿರ್ಧಾರ ಏನು?
ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Apr 07, 2023 | 12:15 PM

ವಿಧಾನಸಭೆ ಚುನಾವಣೆಗೆ ತಿಂಗಳು ಬಾಕಿ ಇದೆ. ಮುಂದಿನ 30 ದಿನಗಳಲ್ಲಿ ಮತದಾರರನ್ನು ಸೆಳೆಯಲು ಎಲ್ಲ ರೀತಿಯ ತಯಾರಿಗಳನ್ನು ರಾಜಕೀಯ ಮುಖಂಡರು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆತರಲು ಪ್ಲ್ಯಾನ್ ರೂಪಿಸಿವೆ. ಬಿಜೆಪಿ ಮುಖಂಡರು ಈಗಾಗಲೇ ಸುದೀಪ್ (Sudeep) ಅವರನ್ನು ಕರೆತಂದಿದ್ದಾರೆ. ಬಿಜೆಪಿಯ ಪ್ರಮುಖ ನಾಯಕರ ಪರ ಕಿಚ್ಚ ಪ್ರಚಾರ ಮಾಡಲಿದ್ದಾರೆ. ಯಶ್ ಮುಂದಿನ ನಡೆ ಏನು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇತ್ತು. ಇದಕ್ಕೆ ಅವರ ಆಪ್ತ ಬಳಗದಿಂದ ಉತ್ತರ ಸಿಕ್ಕಿದೆ. ಈ ಬಾರಿ ಯಶ್ (Yash) ರಾಜಕೀಯಕ್ಕೆ ಬರುತ್ತಿಲ್ಲ ಎನ್ನಲಾಗಿದೆ.

ಚುನಾವಣಾ ಪ್ರಚಾರ ಮಾಡಿದ್ದ ಯಶ್

ಈ ಮೊದಲು ವಿಧಾನಸಭೆ ಚುನಾವಣೆಯಲ್ಲಿ ಯಶ್ ಅವರು ಪಕ್ಷ ನೋಡದೆ ಕೆಲ ರಾಜಕಾರಣಿಗಳ ಪರ ಪ್ರಚಾರ ಮಾಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಪರ ದೊಡ್ಡಮಟ್ಟದ ಕ್ಯಾಂಪೇನ್ ಮಾಡಿದ್ದರು. ಸುಮಲತಾ ಗೆಲ್ಲೋಕೆ ಯಶ್ ಅವರ ಹವಾ ಕೂಡ ಕಾರಣ ಆಗಿತ್ತು. ಈಗ ಯಶ್ ಖ್ಯಾತಿ ಹೆಚ್ಚಿದೆ. ‘ಕೆಜಿಎಫ್ 2’ ಮೂಲಕ ಮನೆಮನೆಗೂ ಅವರು ಗೊತ್ತಾಗಿದ್ದಾರೆ. ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಪ್ರಮುಖ ಪಕ್ಷದವರು ಪ್ಲ್ಯಾನ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಯಶ್ ಯಾರ ಪರವೂ ಪ್ರಚಾರ ಮಾಡುತ್ತಿಲ್ಲವಂತೆ.

ಯಶ್ ಭೇಟಿ ಮಾಡಿದ ರಾಜಕಾರಣಿಗಳು

ಯಶ್ ಅವರನ್ನು ಅನೇಕ ರಾಜಕಾರಣಿಗಳು ಭೇಟಿ ಮಾಡಿದ್ದಾರೆ. ಆದರೆ, ಯಾವ ಪಕ್ಷದ ಪರವೂ ಯಶ್ ಪ್ರಚಾರ ಮಾಡುತ್ತಿಲ್ಲ. ಸದ್ಯ ಅವರು ತಮ್ಮ 19ನೇ ಸಿನಿಮಾ ಬಗ್ಗೆ ಸಂಪೂರ್ಣ ಗಮನ ಕೊಟ್ಟಿದ್ದಾರೆ. ಈ ಕಾರಣಕ್ಕೆ ಯಶ್ ಚುನಾವಣೆಯ ಕಡೆ ಗಮನ ನೀಡುತ್ತಿಲ್ಲ ಎನ್ನಲಾಗಿದೆ.

ಈ ತಿಂಗಳೇ ಘೋಷಣೆ ಆಗಲಿದೆ ಯಶ್ ಹೊಸ ಸಿನಿಮಾ?

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿದ್ದು 2022ರ ಏಪ್ರಿಲ್ 14ರಂದು. ಈ ಸಿನಿಮಾ ತೆರೆಗೆ ಬಂದು ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಹೊಸ ಸಿನಿಮಾ ಘೋಷಣೆ ಆಗಿಲ್ಲ. ಮೂಲಗಳ ಪ್ರಕಾರ, ಈ ತಿಂಗಳಾಂತ್ಯಕ್ಕೆ ಯಶ್ ಹೊಸ ಸಿನಿಮಾ ಘೋಷಣೆ ಆಗಲಿದೆಯಂತೆ.

ಇದನ್ನೂ ಓದಿ: ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್; ಸೆಟ್​ನ ಫೋಟೋ ಲೀಕ್

ರಿಷಬ್ ಶೆಟ್ಟಿಯೂ ಪ್ರಚಾರ ಮಾಡಲ್ಲ

‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿ ಖ್ಯಾತಿ ಹೆಚ್ಚಿದೆ. ಆದರೆ, ಅವರು ಕೂಡ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ. ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ