AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ

ಪುನೀತ್​ ರಾಜ್​ಕುಮಾರ್​ ಅವರ ಹೃದಯಾಘಾತಕ್ಕೆ ಜಿಮ್ ವರ್ಕೌಟ್ ಕಾರಣ ಎಂಬ ಭಾವನೆ ಹಲವರಲ್ಲಿ ಬೇರೂರಿದೆ. ಹಾಗಾಗಿ ಜಿಮ್​ಗೆ ತೆರಳಲು ಅನೇಕರು ಹಿಂದೇಡು ಹಾಕುತ್ತಿದ್ದಾರೆ.

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ
ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on:Nov 11, 2021 | 10:09 AM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಫಿಟ್ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅಪ್ಪು ವರ್ಕೌಟ್​ ಮಾಡುವ ವಿಡಿಯೋಗಳು (Puneeth Rajkumar workout video) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು. ಅಷ್ಟೊಂದು ಫಿಟ್​ ಆಗಿದ್ದವರು ಹೃದಯಾಘಾತದಿಂದ (Heart Attack) ಮೃತಪಟ್ಟಿರುವುದನ್ನು ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಜಿಮ್​ನಲ್ಲಿ ವರ್ಕೌಟ್​ ಮಾಡುವುದಕ್ಕೂ ಹೃದಯಾಘಾತಕ್ಕೂ ಸಂಬಂಧ ಇದೆ ಎಂಬ ಭಾವನೆ ಅನೇಕರಲ್ಲಿ ಮೂಡಿದೆ. ಹಾಗಾಗಿ ಅಪ್ಪು ನಿಧನದ ಬಳಿಕ ಜಿಮ್​ಗೆ ಬರುವವರ ಸಂಖ್ಯೆಗಳಲ್ಲಿ ಗಣನೀಯ ಇಳಿಕೆ ಆಗಿದೆ. ಜಿಮ್ (Gym) ಮಾಡುವ ಯುವಕರಿಗೆ ಅಪ್ಪು ನಿಧನದ ಸುದ್ದಿ ಬಿಗ್ ಶಾಕ್ ಆಗಿದೆ. ಫಿಟ್ನೆಸ್ ಪ್ರಿಯರು ಕಳೆದ 2 ವಾರದಿಂದ ಜಿಮ್ ಕಡೆ ಮುಖ ಮಾಡುತ್ತಿಲ್ಲ. ಇದು ಜಿಮ್​ ಮಾಲೀಕರ ಆತಂಕಕ್ಕೆ ಕಾರಣ ಆಗಿದೆ.

ಪುನೀತ್​ ರಾಜ್​ಕುಮಾರ್​ ನಿಧನ ಬಳಿಕ ಎರಡು ದಿನ ಹಲವೆಡೆ ಜಿಮ್ ಬಂದ್ ಮಾಡಿ ಸಂತಾಪ ಸೂಚಿಸಲಾಗಿತ್ತು. ಇದೀಗ ಜಿಮ್​ ಓಪನ್ ಆಗಿದ್ದರೂ ಕೂಡ ಜನರು ವರ್ಕೌಟ್​ ಮಾಡಲು ಹೋಗುತ್ತಿಲ್ಲ. ರಾಜ್ಯಾದ್ಯಂತ ಜಿಮ್ ಬಗ್ಗೆ ಯುವಕರ ನಿರ್ಲಕ್ಷ್ಯದ ಮಾತು ಕೇಳಿಬರುತ್ತಿದೆ. ಪೋಷಕರು ಕೂಡ ಜಿಮ್​ಗೆ ಹೋಗದಂತೆ ಮಕ್ಕಳನ್ನು ತಡೆಯುತ್ತಿದ್ದಾರೆ. ಔಟ್ ಡೋರ್ ಫಿಟ್ನೆಸ್​ಗೆ ಆದ್ಯತೆ ಕೊಡವಂತೆ ಸಲಹೆ ನೀಡುತ್ತಿದ್ದಾರೆ.

ರಾಜ್ಯದ್ಯಂತ ಶೇ.50ರಷ್ಟು ಮಂದಿ ಜಿಮ್‌ ಹೋಗಲು ಒಲವು ತೋರುತ್ತಿಲ್ಲ. ಬೆಂಗಳೂರಿನಲ್ಲಿ ಶೇ.60ರಷ್ಟು ಜನರು ಜಿಮ್​ಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಪುನೀತ್​ ಅವರ ಹೃದಯಾಘಾತಕ್ಕೆ ಜಿಮ್ ವರ್ಕೌಟ್ ಕಾರಣ ಎಂಬ ಭಾವನೆ ಹಲವರಲ್ಲಿ ಬೇರೂರಿದೆ. ‘ಪ್ರತಿ ದಿನ 130 ಯುವಕ-ಯುವತಿಯರು ಜಿಮ್​ಗೆ ಬರುತಿದ್ದರು. ಆದರೆ ಈಗ 50ರಿಂದ 70 ಜನರು ಮಾತ್ರ ಬರುತ್ತಿದ್ದಾರೆ. ಕೊರೊನಾ ಸಂಕಷ್ಟದಿಂದ ಈಗಷ್ಟೇ ಹೊರ ಬರುತ್ತಿದ್ದೇವೆ. ಇಂಥ ಹೊತ್ತಿನಲ್ಲಿ ಮತ್ತೆ ತೊಂದರೆಯಾಗುತ್ತಿದೆ’ ಎಂದಿದ್ದಾರೆ ಕತ್ತರಿಗುಪ್ಪೆಯ ಜಿಮ್ ಟ್ರೈನರ್ ಸುರೇಶ್.

ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಹಲವು ಕಡೆಗಳಲ್ಲಿ ಜಿಮ್​ ಪರಿಸ್ಥಿತಿ ಇದೇ ರೀತಿ ಆಗಿದೆ. ಕಲಬುರಗಿ ನಗರದಲ್ಲಿ ಪ್ರತಿ ದಿನ ತುಂಬಿರುತ್ತಿದ್ದ ಜಿಮ್​ಗಳು ಇದೀಗ ಖಾಲಿ ಹೊಡೆಯುತ್ತಿವೆ. ಒಂದು ಶಿಫ್ಟ್​ನಲ್ಲಿ ನಲವತ್ತು ಜನರು ಮೊದಲು ಬರುತ್ತಿದ್ದರು. ಇದೀಗ ಹತ್ತು ಜನ ಬರುತ್ತಿದ್ದಾರೆ. ಹೀಗಾಗಿ ಬಾಡಿಗೆ ಕಟ್ಟೋದು ಹೇಗೆ ಅನ್ನೋ ಚಿಂತೆ ಜಿಮ್ ಮಾಲೀಕರನ್ನು ಕಾಡುತ್ತಿದೆ.

ಸರಿಯಾದ ಕ್ರಮದಲ್ಲಿ ವರ್ಕೌಟ್​ ಮಾಡಿದರೆ ಯಾವುದೇ ತೊಂದರೆ ಇಲ್ಲ ಎಂಬುದು ತಜ್ಞರ ಅಭಿಪ್ರಾಯ. ಜಿಮ್​​ಗೆ ತೆರಳುವ ಮುನ್ನ ಹೃದಯಕ್ಕೆ ಸಂಬಂಧಿಸಿದ ಒಂದಷ್ಟು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂಬ ಸಲಹೆ ವೈದ್ಯರಿಂದ ಕೇಳಿಬರುತ್ತದೆ.

ಇದನ್ನೂ ಓದಿ

‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ

Published On - 9:59 am, Thu, 11 November 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್