AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಇತ್ತೀಚೆಗಷ್ಟೇ ಆ ಸ್ಟಾರ್ ನಟನ‌ ಚಿತ್ರ ಬಿಡುಗಡೆಯಾಗಿತ್ತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ಪಬ್​ನಲ್ಲಿ ಸ್ಟಾರ್ಸ್ ಪಾರ್ಟಿಗೆ ಸೇರಿದ್ದರು. ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ನಡೆದಿತ್ತು.

ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  
ಸಿಸಿಟಿವಿ ದೃಶ್ಯ
Jagadisha B
| Edited By: |

Updated on:Jan 06, 2024 | 8:38 AM

Share

ಸರ್ಕಾರದ ನಿಯಮದ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್​ಗಳು ಕ್ಲೋಸ್ ಆಗಬೇಕು. ಆದರೆ, ಬೆಂಗಳೂರಿನಲ್ಲಿ ಸ್ಟಾರ್ ಹೀರೋಗಾಗಿ ಮುಂಜಾನೆ 5ರವರೆಗೆ ಪಬ್ ಓಪನ್ ಇಡಲಾಗಿತ್ತು. ಇತ್ತೀಚೆಗೆ ರಿಲೀಸ್ ಆಗಿ ಸಕ್ಸಸ್ ಕಂಡ ಸಿನಿಮಾದ ಹೀರೋ ಹಾಗೂ ತಂಡದವರು ಈ ಪಾರ್ಟಿಯಲ್ಲಿದ್ದರು ಎನ್ನಲಾಗಿದೆ. ಸ್ಟಾರ್ ಹೀರೋ ಎನ್ನುವ ಕಾರಣಕ್ಕೆ ಪೊಲೀಸರು ಕಣ್ಮುಚ್ಚಿ ಕುಳಿತರಾ ಎನ್ನುವ ಪ್ರಶ್ನೆ ಮೂಡಿದೆ. ಈಗ ಪಬ್​ (Pub) ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇತ್ತೀಚೆಗಷ್ಟೇ ಆ ಸ್ಟಾರ್ ನಟನ‌ ಚಿತ್ರ ಬಿಡುಗಡೆಯಾಗಿತ್ತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ಪಬ್​ನಲ್ಲಿ ಸ್ಟಾರ್ಸ್ ಪಾರ್ಟಿಗೆ ಸೇರಿದ್ದರು. ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ನಡೆದಿತ್ತು. ನಟ, ನಿರ್ದೇಶಕ, ನಿರ್ಮಾಪಕ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಜನವರಿ‌ 3ರಂದು‌ ರಾತ್ರಿ‌ ಪಬ್​ಗೆ ಸಿನಿಮಾ ತಂಡ ಆಗಮಿಸಿದ ಸಿಸಿಟಿವಿ ದೃಶ್ಯ ವೈರಲ್ ಆಗಿದೆ.

ನಿಯಮಗಳ ಪ್ರಕಾರ ರಾತ್ರಿ 1 ಗಂಟೆಗೆ ಪಬ್ ಕ್ಲೋಸ್ ಆಗಬೇಕಿತ್ತು. ಒಂದು ಗಂಟೆ ಆಗುತ್ತಿದ್ದಂತೆ ಪಾರ್ಟಿ ಪೂರ್ಣಗೊಳಿಸಬೇಕಿತ್ತು. ಆದರೆ, ಮುಂಜಾನೆವರೆಗೂ ಪಾರ್ಟಿ ನಡೆದಿದೆ. ಬೀಟ್​ನಲ್ಲಿದ್ದ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲವೇ? ಮಾಹಿತಿ ಇದ್ದೂ ಸುಮ್ಮನಾದರೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಹೆಚ್ಚಿತು ‘ಕಾಟೇರ’ ಥಿಯೇಟರ್​ ಸಂಖ್ಯೆ

ಸ್ಟಾರ್ ನಟನ ನೋಡಲು ಮುಂಜಾನೆಯೂ ಅಭಿಮಾನಿಗಳು ನೆರೆದಿದ್ದರು. ರಸ್ತೆ ಮೇಲೆಯೇ‌ ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದಾರೆ ಎನ್ನಲಾಗಿದೆ. ಸ್ಟಾರ್ಸ್ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಈ ವಿಚಾರ ನಗರ ಪೊಲೀಸ್ ಆಯುಕ್ತ ದಯಾನಂದ್​​ಗೆ ಗೊತ್ತಾಗುತ್ತಿದ್ದಂತೆ ಅವರು ಕ್ಲಾಸ್ ತೆಗೆದಿಕೊಂಡಿದ್ದಾರೆ ಎನ್ನಲಾಗಿದೆ. ಆ ಬಳಿಕ ತರಾತುರಿಯಲ್ಲಿ ಪಬ್ ಮಾಲೀಕರ ಮೇಲೆ ಎಫ್ಐಆರ್ ಬಿದ್ದಿದೆ ಎನ್ನಲಾಗಿದೆ.

ಜೆಟ್ ಲ್ಯಾಗ್ ಮ್ಯಾನೇಜರ್ ಪ್ರಶಾಂತ್, ಮಾಲೀಕರಾದ ಶಶಿರೇಖಾ ಜಗದೀಶ್ ಮೇಲೆ ಎಫ್ಐಆರ್ ದಾಖಲಾಗಿದೆ. ಅಬಕಾರಿ ಮತ್ತು ಪೊಲೀಸ್ ಕಾಯಿದೆ ಷರತ್ತು‌ ಉಲ್ಲಂಘನೆ ಆರೋಪದಡಿ ಎಫ್ಐಆರ್ ಹಾಕಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Sat, 6 January 24

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ