AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ಇತ್ತೀಚೆಗಷ್ಟೇ ಆ ಸ್ಟಾರ್ ನಟನ‌ ಚಿತ್ರ ಬಿಡುಗಡೆಯಾಗಿತ್ತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ಪಬ್​ನಲ್ಲಿ ಸ್ಟಾರ್ಸ್ ಪಾರ್ಟಿಗೆ ಸೇರಿದ್ದರು. ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ನಡೆದಿತ್ತು.

ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  
ಸಿಸಿಟಿವಿ ದೃಶ್ಯ
Follow us
Jagadisha B
| Updated By: ರಾಜೇಶ್ ದುಗ್ಗುಮನೆ

Updated on:Jan 06, 2024 | 8:38 AM

ಸರ್ಕಾರದ ನಿಯಮದ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್​ಗಳು ಕ್ಲೋಸ್ ಆಗಬೇಕು. ಆದರೆ, ಬೆಂಗಳೂರಿನಲ್ಲಿ ಸ್ಟಾರ್ ಹೀರೋಗಾಗಿ ಮುಂಜಾನೆ 5ರವರೆಗೆ ಪಬ್ ಓಪನ್ ಇಡಲಾಗಿತ್ತು. ಇತ್ತೀಚೆಗೆ ರಿಲೀಸ್ ಆಗಿ ಸಕ್ಸಸ್ ಕಂಡ ಸಿನಿಮಾದ ಹೀರೋ ಹಾಗೂ ತಂಡದವರು ಈ ಪಾರ್ಟಿಯಲ್ಲಿದ್ದರು ಎನ್ನಲಾಗಿದೆ. ಸ್ಟಾರ್ ಹೀರೋ ಎನ್ನುವ ಕಾರಣಕ್ಕೆ ಪೊಲೀಸರು ಕಣ್ಮುಚ್ಚಿ ಕುಳಿತರಾ ಎನ್ನುವ ಪ್ರಶ್ನೆ ಮೂಡಿದೆ. ಈಗ ಪಬ್​ (Pub) ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇತ್ತೀಚೆಗಷ್ಟೇ ಆ ಸ್ಟಾರ್ ನಟನ‌ ಚಿತ್ರ ಬಿಡುಗಡೆಯಾಗಿತ್ತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ಪಬ್​ನಲ್ಲಿ ಸ್ಟಾರ್ಸ್ ಪಾರ್ಟಿಗೆ ಸೇರಿದ್ದರು. ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ನಡೆದಿತ್ತು. ನಟ, ನಿರ್ದೇಶಕ, ನಿರ್ಮಾಪಕ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಜನವರಿ‌ 3ರಂದು‌ ರಾತ್ರಿ‌ ಪಬ್​ಗೆ ಸಿನಿಮಾ ತಂಡ ಆಗಮಿಸಿದ ಸಿಸಿಟಿವಿ ದೃಶ್ಯ ವೈರಲ್ ಆಗಿದೆ.

ನಿಯಮಗಳ ಪ್ರಕಾರ ರಾತ್ರಿ 1 ಗಂಟೆಗೆ ಪಬ್ ಕ್ಲೋಸ್ ಆಗಬೇಕಿತ್ತು. ಒಂದು ಗಂಟೆ ಆಗುತ್ತಿದ್ದಂತೆ ಪಾರ್ಟಿ ಪೂರ್ಣಗೊಳಿಸಬೇಕಿತ್ತು. ಆದರೆ, ಮುಂಜಾನೆವರೆಗೂ ಪಾರ್ಟಿ ನಡೆದಿದೆ. ಬೀಟ್​ನಲ್ಲಿದ್ದ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲವೇ? ಮಾಹಿತಿ ಇದ್ದೂ ಸುಮ್ಮನಾದರೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಹೆಚ್ಚಿತು ‘ಕಾಟೇರ’ ಥಿಯೇಟರ್​ ಸಂಖ್ಯೆ

ಸ್ಟಾರ್ ನಟನ ನೋಡಲು ಮುಂಜಾನೆಯೂ ಅಭಿಮಾನಿಗಳು ನೆರೆದಿದ್ದರು. ರಸ್ತೆ ಮೇಲೆಯೇ‌ ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದಾರೆ ಎನ್ನಲಾಗಿದೆ. ಸ್ಟಾರ್ಸ್ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಈ ವಿಚಾರ ನಗರ ಪೊಲೀಸ್ ಆಯುಕ್ತ ದಯಾನಂದ್​​ಗೆ ಗೊತ್ತಾಗುತ್ತಿದ್ದಂತೆ ಅವರು ಕ್ಲಾಸ್ ತೆಗೆದಿಕೊಂಡಿದ್ದಾರೆ ಎನ್ನಲಾಗಿದೆ. ಆ ಬಳಿಕ ತರಾತುರಿಯಲ್ಲಿ ಪಬ್ ಮಾಲೀಕರ ಮೇಲೆ ಎಫ್ಐಆರ್ ಬಿದ್ದಿದೆ ಎನ್ನಲಾಗಿದೆ.

ಜೆಟ್ ಲ್ಯಾಗ್ ಮ್ಯಾನೇಜರ್ ಪ್ರಶಾಂತ್, ಮಾಲೀಕರಾದ ಶಶಿರೇಖಾ ಜಗದೀಶ್ ಮೇಲೆ ಎಫ್ಐಆರ್ ದಾಖಲಾಗಿದೆ. ಅಬಕಾರಿ ಮತ್ತು ಪೊಲೀಸ್ ಕಾಯಿದೆ ಷರತ್ತು‌ ಉಲ್ಲಂಘನೆ ಆರೋಪದಡಿ ಎಫ್ಐಆರ್ ಹಾಕಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Sat, 6 January 24

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ