AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಚಿತ್ರ ರಿಲೀಸ್ ಬೆನ್ನಲ್ಲೇ ಪ್ರೇಕ್ಷಕರಿಗೆ ಸವಾಲು ಹಾಕಿದ ಉಪೇಂದ್ರ; ಚಾಲೆಂಜ್ ಸ್ವೀಕರಿಸುತ್ತೀರಾ?

ಉಪೇಂದ್ರ ನಿರ್ದೇಶನದ ‘UI’ ಚಿತ್ರವು ರಿಲೀಸ್ ಆಗಿದೆ. ಇದು ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ಮತ್ತು ಟೀಸರ್ ಗಳು ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿವೆ. ಉಪೇಂದ್ರರು ಪ್ರೇಕ್ಷಕರಿಗೆ ಚಿತ್ರದಲ್ಲಿನ ದೃಶ್ಯಗಳನ್ನು ಡಿಕೋಡ್ ಮಾಡಲು ಸವಾಲು ಹಾಕಿದ್ದಾರೆ. ಚಿತ್ರದ ಕ್ಲೈಮ್ಯಾಕ್ಸ್ ಅತ್ಯಂತ ಭಿನ್ನವಾಗಿರಲಿದೆ ಎಂದು ಹೇಳಲಾಗಿದೆ.

‘ಯುಐ’ ಚಿತ್ರ ರಿಲೀಸ್ ಬೆನ್ನಲ್ಲೇ ಪ್ರೇಕ್ಷಕರಿಗೆ ಸವಾಲು ಹಾಕಿದ ಉಪೇಂದ್ರ; ಚಾಲೆಂಜ್ ಸ್ವೀಕರಿಸುತ್ತೀರಾ?
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Dec 20, 2024 | 8:33 AM

Share

ಉಪೇಂದ್ರ ನಿರ್ದೇಶನದ ಸಿನಿಮಾಗಳು ಸಖತ್ ಭಿನ್ನ. ಅವರು ಹೊಸ ರೀತಿಯ ಪ್ರಯೋಗಗಳನ್ನು ಮಾಡಿ ಪ್ರೇಕ್ಷಕರ ಎದುರು ಇಡುವ ಪ್ರಯತ್ನ ಮಾಡುತ್ತಾರೆ. ಅವರ ನಿರ್ದೇಶನದ ‘ಯುಐ’ ಸಿನಿಮಾ ಇಂದು (ಡಿಸೆಂಬರ್ 20) ರಿಲೀಸ್ ಆಗಿದೆ. ಈ ಚಿತ್ರ ನೋಡಿ  ಪ್ರೇಕ್ಷಕರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ‘ಯುಐ’ ಚಿತ್ರ ನೋಡುವ ಪ್ರೇಕ್ಷಕರಿಗೆ ಉಪೇಂದ್ರ ಸವಾಲೊಂದನ್ನು ಹಾಕಿದ್ದಾರೆ.

ಉಪೇಂದ್ರ ಅವರ ಆಲೋಚನೆಗಳೇ ಭಿನ್ನ. ಅವುಗಳನ್ನು ಸಿನಿಮಾಗಳಲ್ಲೂ ತರುವ ಪ್ರಯತ್ನವನ್ನು ಉಪೇಂದ್ರ ಮಾಡುತ್ತಾರೆ. ಈಗ ‘ಯುಐ’ ಚಿತ್ರದ ರಿಲೀಸ್ ಸಂದರ್ಭದಲ್ಲಿ ಅವರು ಟ್ವೀಟ್ ಒಂದನ್ನು ಮಾಡಿ ಸವಾಲು ಹಾಕಿದ್ದಾರೆ. ಇದನ್ನು ಎಷ್ಟು ಮಂದಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಉಪೇಂದ್ರ ಸಿಎಂ ಆದರೆ ಮೊದಲು ಮಾಡೋ ಕೆಲಸ ಏನು? ಅವರೇ ಹೇಳಿದ್ರು ಕೇಳಿ

‘ಕಾತುರದಿಂದ ಕಾಯುತ್ತಿದ್ದೇನೆ. UI ಚಿತ್ರದ ಎಷ್ಟು ಸೀನ್​ಗಳನ್ನು ಡೀಕೋಡ್ ಮಾಡುತ್ತೀರಾ ಮತ್ತು ಕೊನೆಯ ಶಾಟ್ ಡಿಕೋಡ್ ಮಾಡಲು ಎಷ್ಟು ಸಮಯ ತೆಗೆದು ಕೊಳ್ಳುತ್ತೀರಾ ಎಂದು’ ಎಂಬುದಾಗಿ ಉಪೇಂದ್ರ ಬರೆದುಕೊಂಡಿದ್ದಾರೆ. ಈ ಮೂಲಕ ಕ್ಲೈಮ್ಯಾಕ್ಸ್ ಬೇರೆಯದೇ ರೀತಿಯಲ್ಲಿ ಇರಲಿದೆ ಎಂಬ ಸೂಚನೆ ಸಿಕ್ಕಿದೆ.

ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದಲೂ ‘ಯುಐ’ ಚಿತ್ರ ನಿರೀಕ್ಷೆ ಮೂಡಿಸಿದೆ. ಇನ್ನು, ‘ಯುಐ’ ಚಿತ್ರದ ಕಥೆ 2040ರಲ್ಲಿ ಸಾಗಲಿದೆ ಎನ್ನಲಾಗಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ, ತೆಲುಗು, ಹಿಂದಿ ಭಾಷೆಗಳಲ್ಲೂ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಹಾಗೂ ಟೀಸರ್ ಮೂಲಕ ಹುಳ ಬಿಡುವ ಕೆಲಸ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು