AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುಐ’ ಚಿತ್ರ ರಿಲೀಸ್ ಬೆನ್ನಲ್ಲೇ ಪ್ರೇಕ್ಷಕರಿಗೆ ಸವಾಲು ಹಾಕಿದ ಉಪೇಂದ್ರ; ಚಾಲೆಂಜ್ ಸ್ವೀಕರಿಸುತ್ತೀರಾ?

ಉಪೇಂದ್ರ ನಿರ್ದೇಶನದ ‘UI’ ಚಿತ್ರವು ರಿಲೀಸ್ ಆಗಿದೆ. ಇದು ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ಮತ್ತು ಟೀಸರ್ ಗಳು ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿವೆ. ಉಪೇಂದ್ರರು ಪ್ರೇಕ್ಷಕರಿಗೆ ಚಿತ್ರದಲ್ಲಿನ ದೃಶ್ಯಗಳನ್ನು ಡಿಕೋಡ್ ಮಾಡಲು ಸವಾಲು ಹಾಕಿದ್ದಾರೆ. ಚಿತ್ರದ ಕ್ಲೈಮ್ಯಾಕ್ಸ್ ಅತ್ಯಂತ ಭಿನ್ನವಾಗಿರಲಿದೆ ಎಂದು ಹೇಳಲಾಗಿದೆ.

‘ಯುಐ’ ಚಿತ್ರ ರಿಲೀಸ್ ಬೆನ್ನಲ್ಲೇ ಪ್ರೇಕ್ಷಕರಿಗೆ ಸವಾಲು ಹಾಕಿದ ಉಪೇಂದ್ರ; ಚಾಲೆಂಜ್ ಸ್ವೀಕರಿಸುತ್ತೀರಾ?
ಉಪೇಂದ್ರ
Follow us
ರಾಜೇಶ್ ದುಗ್ಗುಮನೆ
|

Updated on: Dec 20, 2024 | 8:33 AM

ಉಪೇಂದ್ರ ನಿರ್ದೇಶನದ ಸಿನಿಮಾಗಳು ಸಖತ್ ಭಿನ್ನ. ಅವರು ಹೊಸ ರೀತಿಯ ಪ್ರಯೋಗಗಳನ್ನು ಮಾಡಿ ಪ್ರೇಕ್ಷಕರ ಎದುರು ಇಡುವ ಪ್ರಯತ್ನ ಮಾಡುತ್ತಾರೆ. ಅವರ ನಿರ್ದೇಶನದ ‘ಯುಐ’ ಸಿನಿಮಾ ಇಂದು (ಡಿಸೆಂಬರ್ 20) ರಿಲೀಸ್ ಆಗಿದೆ. ಈ ಚಿತ್ರ ನೋಡಿ  ಪ್ರೇಕ್ಷಕರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ‘ಯುಐ’ ಚಿತ್ರ ನೋಡುವ ಪ್ರೇಕ್ಷಕರಿಗೆ ಉಪೇಂದ್ರ ಸವಾಲೊಂದನ್ನು ಹಾಕಿದ್ದಾರೆ.

ಉಪೇಂದ್ರ ಅವರ ಆಲೋಚನೆಗಳೇ ಭಿನ್ನ. ಅವುಗಳನ್ನು ಸಿನಿಮಾಗಳಲ್ಲೂ ತರುವ ಪ್ರಯತ್ನವನ್ನು ಉಪೇಂದ್ರ ಮಾಡುತ್ತಾರೆ. ಈಗ ‘ಯುಐ’ ಚಿತ್ರದ ರಿಲೀಸ್ ಸಂದರ್ಭದಲ್ಲಿ ಅವರು ಟ್ವೀಟ್ ಒಂದನ್ನು ಮಾಡಿ ಸವಾಲು ಹಾಕಿದ್ದಾರೆ. ಇದನ್ನು ಎಷ್ಟು ಮಂದಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಉಪೇಂದ್ರ ಸಿಎಂ ಆದರೆ ಮೊದಲು ಮಾಡೋ ಕೆಲಸ ಏನು? ಅವರೇ ಹೇಳಿದ್ರು ಕೇಳಿ

‘ಕಾತುರದಿಂದ ಕಾಯುತ್ತಿದ್ದೇನೆ. UI ಚಿತ್ರದ ಎಷ್ಟು ಸೀನ್​ಗಳನ್ನು ಡೀಕೋಡ್ ಮಾಡುತ್ತೀರಾ ಮತ್ತು ಕೊನೆಯ ಶಾಟ್ ಡಿಕೋಡ್ ಮಾಡಲು ಎಷ್ಟು ಸಮಯ ತೆಗೆದು ಕೊಳ್ಳುತ್ತೀರಾ ಎಂದು’ ಎಂಬುದಾಗಿ ಉಪೇಂದ್ರ ಬರೆದುಕೊಂಡಿದ್ದಾರೆ. ಈ ಮೂಲಕ ಕ್ಲೈಮ್ಯಾಕ್ಸ್ ಬೇರೆಯದೇ ರೀತಿಯಲ್ಲಿ ಇರಲಿದೆ ಎಂಬ ಸೂಚನೆ ಸಿಕ್ಕಿದೆ.

ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದಲೂ ‘ಯುಐ’ ಚಿತ್ರ ನಿರೀಕ್ಷೆ ಮೂಡಿಸಿದೆ. ಇನ್ನು, ‘ಯುಐ’ ಚಿತ್ರದ ಕಥೆ 2040ರಲ್ಲಿ ಸಾಗಲಿದೆ ಎನ್ನಲಾಗಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ, ತೆಲುಗು, ಹಿಂದಿ ಭಾಷೆಗಳಲ್ಲೂ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಹಾಗೂ ಟೀಸರ್ ಮೂಲಕ ಹುಳ ಬಿಡುವ ಕೆಲಸ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ