ಕೊಲೆ ಪ್ರಕರಣದ ಬೆನ್ನಲ್ಲೇ ಹೊರಬಿತ್ತು ದರ್ಶನ್ ಮತ್ತೊಂದು ಕೇಸ್; ಪರಿಹಾರ ಕೇಳಲು ಹೋದವರಿಗೆ ಮಾಡಿದ್ದೇನು?

ಹತ್ತು ವರ್ಷಗಳ ಹಿಂದಿನ ಕರಾಳ ಘಟನೆಯನ್ನು ಟಿವಿ9 ಕನ್ನಡದ ಎದುರು ಸಂತ್ರಸ್ತ ಕುಟುಂಬದವರು ರಿವೀಲ್ ಮಾಡಿದ್ದಾರೆ. ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ ಮೆರೆಯಲಾಗಿದೆ. ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ.

ಕೊಲೆ ಪ್ರಕರಣದ ಬೆನ್ನಲ್ಲೇ ಹೊರಬಿತ್ತು ದರ್ಶನ್ ಮತ್ತೊಂದು ಕೇಸ್; ಪರಿಹಾರ ಕೇಳಲು ಹೋದವರಿಗೆ ಮಾಡಿದ್ದೇನು?
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 13, 2024 | 8:29 AM

ನಟ ದರ್ಶನ್ (Darshan) ಅವರಿಗೆ ರೇಣುಕಾಸ್ವಾಮಿ ಕುಟುಂಬದವರು ಹಿಡಿಶಾಪ ಹಾಕುತ್ತಿದ್ದಾರೆ. ದರ್ಶನ್ ಹಾಗೂ ಅವರ ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ದರ್ಶನ್ ಅವರ ಹಳೆಯ ಪ್ರಕರಣಗಳು ಈಗ ಬೆಳಕಿಗೆ ಬರುತ್ತಿವೆ. ಪರಿಹಾರ ಕೇಳಲು ಹೋದ ಸಂತ್ರಸ್ತರ ವಿರುದ್ಧ ದರ್ಶನ್ ಯಾವ ರೀತಿ ನಡೆದುಕೊಂಡಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ಇದರಿಂದ ದರ್ಶನ್ ಹಾಗೂ ಗ್ಯಾಂಗ್​ನ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಹತ್ತು ವರ್ಷಗಳ ಹಿಂದಿನ ಕರಾಳ ಘಟನೆಯನ್ನು ಟಿವಿ9 ಕನ್ನಡದ ಎದುರು ಸಂತ್ರಸ್ತ ಕುಟುಂಬದವರು ರಿವೀಲ್ ಮಾಡಿದ್ದಾರೆ. ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ ಮೆರೆಯಲಾಗಿದೆ. ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬಸ್ಥರು ಟಿವಿ9 ಕನ್ನಡವನ್ನು ಸಂಪರ್ಕಿಸಿದ್ದಾರೆ.

ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಬದುಕು ನರಕಮಯ ಆಗಿದೆ. ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಸಂತ್ರಸ್ತ ವ್ಯಕ್ತಿ. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಬುರುಡೆಯ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿದೆ. ಮಹೇಶ್ ಅವರನ್ನು ದರ್ಶನ್ ಕಡೆಯವರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದಾರೆ. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ.

ಇದನ್ನೂ ಓದಿ: ‘ದರ್ಶನ್ ಕಿವಿಗೆ ಅಶ್ಲೀಲ ಮೆಸೇಜ್ ವಿಚಾರ ಬೀಳಬಾರದಿತ್ತು’; ಜೈಲಿನಲ್ಲಿ ಮರುಗಿದ ಪವಿತ್ರಾ ಗೌಡ  

ಪರಿಹಾರ ಕೇಳಲು ಕಾರ್ಮಿಕನ ಸಂಬಂಧಿಕರು ಫಾರ್ಮ್ ಹೌಸ್​ಗೆ ಹೋದರೆ ಡಿ ಗ್ಯಾಂಗ್ ಸಾಕುನಾಯಿ ಛೂ ಬಿಟ್ಟಿತ್ತಂತೆ. ಬಳಿಕ ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು. ವಿಚಾರ ಹೊರಗಡೆ ಬಾಯಿಬಿಟ್ರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ದರ್ಶನ್ ಹಾಗೂ ಅವರ ಗ್ಯಾಂಗ್ ಬೆದರಿಸಿತ್ತು. ಹತ್ತು ವರ್ಷಗಳಿಂದ ಮಹೇಶ್ ಹಾಸಿಗೆ ಹಿಡಿದಿದ್ದಾರೆ. ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ದರ್ಶನ್​ಗೆ ಹಿಡಿಶಾಪ ಹಾಕುತ್ತಾ ಮಹೇಶ್ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ