ಕೊಲೆ ಪ್ರಕರಣದ ಬೆನ್ನಲ್ಲೇ ಹೊರಬಿತ್ತು ದರ್ಶನ್ ಮತ್ತೊಂದು ಕೇಸ್; ಪರಿಹಾರ ಕೇಳಲು ಹೋದವರಿಗೆ ಮಾಡಿದ್ದೇನು?

ಹತ್ತು ವರ್ಷಗಳ ಹಿಂದಿನ ಕರಾಳ ಘಟನೆಯನ್ನು ಟಿವಿ9 ಕನ್ನಡದ ಎದುರು ಸಂತ್ರಸ್ತ ಕುಟುಂಬದವರು ರಿವೀಲ್ ಮಾಡಿದ್ದಾರೆ. ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ ಮೆರೆಯಲಾಗಿದೆ. ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ.

ಕೊಲೆ ಪ್ರಕರಣದ ಬೆನ್ನಲ್ಲೇ ಹೊರಬಿತ್ತು ದರ್ಶನ್ ಮತ್ತೊಂದು ಕೇಸ್; ಪರಿಹಾರ ಕೇಳಲು ಹೋದವರಿಗೆ ಮಾಡಿದ್ದೇನು?
ದರ್ಶನ್
Edited By:

Updated on: Jun 13, 2024 | 8:29 AM

ನಟ ದರ್ಶನ್ (Darshan) ಅವರಿಗೆ ರೇಣುಕಾಸ್ವಾಮಿ ಕುಟುಂಬದವರು ಹಿಡಿಶಾಪ ಹಾಕುತ್ತಿದ್ದಾರೆ. ದರ್ಶನ್ ಹಾಗೂ ಅವರ ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ದರ್ಶನ್ ಅವರ ಹಳೆಯ ಪ್ರಕರಣಗಳು ಈಗ ಬೆಳಕಿಗೆ ಬರುತ್ತಿವೆ. ಪರಿಹಾರ ಕೇಳಲು ಹೋದ ಸಂತ್ರಸ್ತರ ವಿರುದ್ಧ ದರ್ಶನ್ ಯಾವ ರೀತಿ ನಡೆದುಕೊಂಡಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ಇದರಿಂದ ದರ್ಶನ್ ಹಾಗೂ ಗ್ಯಾಂಗ್​ನ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಹತ್ತು ವರ್ಷಗಳ ಹಿಂದಿನ ಕರಾಳ ಘಟನೆಯನ್ನು ಟಿವಿ9 ಕನ್ನಡದ ಎದುರು ಸಂತ್ರಸ್ತ ಕುಟುಂಬದವರು ರಿವೀಲ್ ಮಾಡಿದ್ದಾರೆ. ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ ಮೆರೆಯಲಾಗಿದೆ. ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬಸ್ಥರು ಟಿವಿ9 ಕನ್ನಡವನ್ನು ಸಂಪರ್ಕಿಸಿದ್ದಾರೆ.

ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಬದುಕು ನರಕಮಯ ಆಗಿದೆ. ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಸಂತ್ರಸ್ತ ವ್ಯಕ್ತಿ. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಬುರುಡೆಯ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿದೆ. ಮಹೇಶ್ ಅವರನ್ನು ದರ್ಶನ್ ಕಡೆಯವರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದಾರೆ. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ.

ಇದನ್ನೂ ಓದಿ: ‘ದರ್ಶನ್ ಕಿವಿಗೆ ಅಶ್ಲೀಲ ಮೆಸೇಜ್ ವಿಚಾರ ಬೀಳಬಾರದಿತ್ತು’; ಜೈಲಿನಲ್ಲಿ ಮರುಗಿದ ಪವಿತ್ರಾ ಗೌಡ  

ಪರಿಹಾರ ಕೇಳಲು ಕಾರ್ಮಿಕನ ಸಂಬಂಧಿಕರು ಫಾರ್ಮ್ ಹೌಸ್​ಗೆ ಹೋದರೆ ಡಿ ಗ್ಯಾಂಗ್ ಸಾಕುನಾಯಿ ಛೂ ಬಿಟ್ಟಿತ್ತಂತೆ. ಬಳಿಕ ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು. ವಿಚಾರ ಹೊರಗಡೆ ಬಾಯಿಬಿಟ್ರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ದರ್ಶನ್ ಹಾಗೂ ಅವರ ಗ್ಯಾಂಗ್ ಬೆದರಿಸಿತ್ತು. ಹತ್ತು ವರ್ಷಗಳಿಂದ ಮಹೇಶ್ ಹಾಸಿಗೆ ಹಿಡಿದಿದ್ದಾರೆ. ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ದರ್ಶನ್​ಗೆ ಹಿಡಿಶಾಪ ಹಾಕುತ್ತಾ ಮಹೇಶ್ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us