AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್
TV9 Web
| Edited By: |

Updated on:Mar 01, 2022 | 6:30 PM

Share

ಕಳೆದ ವರ್ಷ ತೆರೆಗೆ ಬಂದ ದುನಿಯಾ ವಿಜಯ್ (Duniya Vijay)​ ನಟನೆಯ ‘ಸಲಗ’ ಸಿನಿಮಾ (Salaga Movie) ಮಾಡಿದ ಹವಾ ಅಷ್ಟಿಷ್ಟಲ್ಲ. ಈ ಚಿತ್ರದಲ್ಲಿ ದುನಿಯಾ ವಿಜಯ್​ ನಟಿಸೋದು ಮಾತ್ರವಲ್ಲ, ಆ್ಯಕ್ಷನ್​ ಕಟ್​ ಕೂಡ ಹೇಳಿದ್ದರು. ಮೊದಲ ನಿರ್ದೇಶನದಲ್ಲೇ ಅವರು ಗೆದ್ದು ಬೀಗಿದ್ದರು. ಇತ್ತೀಚೆಗೆ ಚಿತ್ರತಂಡ ಈ ಸಿನಿಮಾ ಯಶಸ್ಸನ್ನು ಸಂಭ್ರಮಿಸಿತ್ತು. ಸ್ಯಾಂಡಲ್​ವುಡ್​ ಹಿರಿಯ ನಟ ಶಿವರಾಜ್​ಕುಮಾರ್ ಅವರು ಸಕ್ಸಸ್​ ಮೀಟ್​ಗೆ ಆಗಮಿಸಿ ಈ ತಂಡಕ್ಕೆ ಶುಭಕೋರಿದ್ದರು. ಈಗ ‘ಸಲಗ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿಯೋಕೆ ದುನಿಯಾ ವಿಜಯ್​ ರೆಡಿ ಆಗಿದ್ದಾರೆ . ಶಿವರಾತ್ರಿಯಂದು ಹೊಸ ಸಿನಿಮಾದ ಟೈಟಲ್​ ಘೋಷಣೆ ಆಗುವ ಸಾಧ್ಯತೆ ಇದೆ.

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅನೇಕ ಸ್ಟಾರ್​ ನಟರು ಈ ಚಿತ್ರವನ್ನು ಹೊಗಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ವಿಜಯ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಅವರ ನಟನೆಯ 28ನೇ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್​ ಹಾಗೂ ಜಗದೀಶ್​ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಕೈ ಹಾಗೂ ಯಮಹಾ ಆರ್​ಎಕ್ಸ್​ 100 ಬೈಕ್​ ತೋರಿಸಲಾಗಿದೆ. ಪೋಸ್ಟರ್​ನಲ್ಲಿರುವ ಕೈ ರಕ್ತಸಿಕ್ತವಾಗಿದೆ. ಇದರಿಂದ ಇದು ಕೂಡ ರೌಡಿಸಂ ಕಥೆ ಎಂಬುದು ಸ್ಪಷ್ಟವಾಗಿದೆ.

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ.  ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: ‘ಸಲಗ’ ಗೆಲುವಿನ ವೇದಿಕೆಯಲ್ಲಿ ದುನಿಯಾ ವಿಜಯ್​ ಅಳು; ‘ಕರಿಚಿರತೆ’ ಕಣ್ಣೀರಿಗೆ ಕಾರಣ ಏನು?

ಶಿವಣ್ಣನ ಕಾಲಿಗೆ ನಮಸ್ಕರಿಸಿದ ದುನಿಯಾ ವಿಜಯ್​, ಕೀರ್ತಿ; ‘ಸಲಗ’ ಸಕ್ಸಸ್​ ವೇದಿಕೆಯಲ್ಲಿ ‘ಹ್ಯಾಟ್ರಿಕ್​ ಹೀರೋ’

Published On - 8:31 pm, Thu, 24 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ