AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್
TV9 Web
| Edited By: |

Updated on:Mar 01, 2022 | 6:30 PM

Share

ಕಳೆದ ವರ್ಷ ತೆರೆಗೆ ಬಂದ ದುನಿಯಾ ವಿಜಯ್ (Duniya Vijay)​ ನಟನೆಯ ‘ಸಲಗ’ ಸಿನಿಮಾ (Salaga Movie) ಮಾಡಿದ ಹವಾ ಅಷ್ಟಿಷ್ಟಲ್ಲ. ಈ ಚಿತ್ರದಲ್ಲಿ ದುನಿಯಾ ವಿಜಯ್​ ನಟಿಸೋದು ಮಾತ್ರವಲ್ಲ, ಆ್ಯಕ್ಷನ್​ ಕಟ್​ ಕೂಡ ಹೇಳಿದ್ದರು. ಮೊದಲ ನಿರ್ದೇಶನದಲ್ಲೇ ಅವರು ಗೆದ್ದು ಬೀಗಿದ್ದರು. ಇತ್ತೀಚೆಗೆ ಚಿತ್ರತಂಡ ಈ ಸಿನಿಮಾ ಯಶಸ್ಸನ್ನು ಸಂಭ್ರಮಿಸಿತ್ತು. ಸ್ಯಾಂಡಲ್​ವುಡ್​ ಹಿರಿಯ ನಟ ಶಿವರಾಜ್​ಕುಮಾರ್ ಅವರು ಸಕ್ಸಸ್​ ಮೀಟ್​ಗೆ ಆಗಮಿಸಿ ಈ ತಂಡಕ್ಕೆ ಶುಭಕೋರಿದ್ದರು. ಈಗ ‘ಸಲಗ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿಯೋಕೆ ದುನಿಯಾ ವಿಜಯ್​ ರೆಡಿ ಆಗಿದ್ದಾರೆ . ಶಿವರಾತ್ರಿಯಂದು ಹೊಸ ಸಿನಿಮಾದ ಟೈಟಲ್​ ಘೋಷಣೆ ಆಗುವ ಸಾಧ್ಯತೆ ಇದೆ.

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅನೇಕ ಸ್ಟಾರ್​ ನಟರು ಈ ಚಿತ್ರವನ್ನು ಹೊಗಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ವಿಜಯ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಅವರ ನಟನೆಯ 28ನೇ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್​ ಹಾಗೂ ಜಗದೀಶ್​ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಕೈ ಹಾಗೂ ಯಮಹಾ ಆರ್​ಎಕ್ಸ್​ 100 ಬೈಕ್​ ತೋರಿಸಲಾಗಿದೆ. ಪೋಸ್ಟರ್​ನಲ್ಲಿರುವ ಕೈ ರಕ್ತಸಿಕ್ತವಾಗಿದೆ. ಇದರಿಂದ ಇದು ಕೂಡ ರೌಡಿಸಂ ಕಥೆ ಎಂಬುದು ಸ್ಪಷ್ಟವಾಗಿದೆ.

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ.  ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: ‘ಸಲಗ’ ಗೆಲುವಿನ ವೇದಿಕೆಯಲ್ಲಿ ದುನಿಯಾ ವಿಜಯ್​ ಅಳು; ‘ಕರಿಚಿರತೆ’ ಕಣ್ಣೀರಿಗೆ ಕಾರಣ ಏನು?

ಶಿವಣ್ಣನ ಕಾಲಿಗೆ ನಮಸ್ಕರಿಸಿದ ದುನಿಯಾ ವಿಜಯ್​, ಕೀರ್ತಿ; ‘ಸಲಗ’ ಸಕ್ಸಸ್​ ವೇದಿಕೆಯಲ್ಲಿ ‘ಹ್ಯಾಟ್ರಿಕ್​ ಹೀರೋ’

Published On - 8:31 pm, Thu, 24 February 22

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು