AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್
TV9 Web
| Edited By: |

Updated on:Mar 01, 2022 | 6:30 PM

Share

ಕಳೆದ ವರ್ಷ ತೆರೆಗೆ ಬಂದ ದುನಿಯಾ ವಿಜಯ್ (Duniya Vijay)​ ನಟನೆಯ ‘ಸಲಗ’ ಸಿನಿಮಾ (Salaga Movie) ಮಾಡಿದ ಹವಾ ಅಷ್ಟಿಷ್ಟಲ್ಲ. ಈ ಚಿತ್ರದಲ್ಲಿ ದುನಿಯಾ ವಿಜಯ್​ ನಟಿಸೋದು ಮಾತ್ರವಲ್ಲ, ಆ್ಯಕ್ಷನ್​ ಕಟ್​ ಕೂಡ ಹೇಳಿದ್ದರು. ಮೊದಲ ನಿರ್ದೇಶನದಲ್ಲೇ ಅವರು ಗೆದ್ದು ಬೀಗಿದ್ದರು. ಇತ್ತೀಚೆಗೆ ಚಿತ್ರತಂಡ ಈ ಸಿನಿಮಾ ಯಶಸ್ಸನ್ನು ಸಂಭ್ರಮಿಸಿತ್ತು. ಸ್ಯಾಂಡಲ್​ವುಡ್​ ಹಿರಿಯ ನಟ ಶಿವರಾಜ್​ಕುಮಾರ್ ಅವರು ಸಕ್ಸಸ್​ ಮೀಟ್​ಗೆ ಆಗಮಿಸಿ ಈ ತಂಡಕ್ಕೆ ಶುಭಕೋರಿದ್ದರು. ಈಗ ‘ಸಲಗ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿಯೋಕೆ ದುನಿಯಾ ವಿಜಯ್​ ರೆಡಿ ಆಗಿದ್ದಾರೆ . ಶಿವರಾತ್ರಿಯಂದು ಹೊಸ ಸಿನಿಮಾದ ಟೈಟಲ್​ ಘೋಷಣೆ ಆಗುವ ಸಾಧ್ಯತೆ ಇದೆ.

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅನೇಕ ಸ್ಟಾರ್​ ನಟರು ಈ ಚಿತ್ರವನ್ನು ಹೊಗಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ವಿಜಯ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಅವರ ನಟನೆಯ 28ನೇ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್​ ಹಾಗೂ ಜಗದೀಶ್​ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಕೈ ಹಾಗೂ ಯಮಹಾ ಆರ್​ಎಕ್ಸ್​ 100 ಬೈಕ್​ ತೋರಿಸಲಾಗಿದೆ. ಪೋಸ್ಟರ್​ನಲ್ಲಿರುವ ಕೈ ರಕ್ತಸಿಕ್ತವಾಗಿದೆ. ಇದರಿಂದ ಇದು ಕೂಡ ರೌಡಿಸಂ ಕಥೆ ಎಂಬುದು ಸ್ಪಷ್ಟವಾಗಿದೆ.

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ.  ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: ‘ಸಲಗ’ ಗೆಲುವಿನ ವೇದಿಕೆಯಲ್ಲಿ ದುನಿಯಾ ವಿಜಯ್​ ಅಳು; ‘ಕರಿಚಿರತೆ’ ಕಣ್ಣೀರಿಗೆ ಕಾರಣ ಏನು?

ಶಿವಣ್ಣನ ಕಾಲಿಗೆ ನಮಸ್ಕರಿಸಿದ ದುನಿಯಾ ವಿಜಯ್​, ಕೀರ್ತಿ; ‘ಸಲಗ’ ಸಕ್ಸಸ್​ ವೇದಿಕೆಯಲ್ಲಿ ‘ಹ್ಯಾಟ್ರಿಕ್​ ಹೀರೋ’

Published On - 8:31 pm, Thu, 24 February 22

Follow Us
TV9 Web
TV9 Web

TV9 Kannada

Read More
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ