AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Mar 01, 2022 | 6:30 PM

Share

ಕಳೆದ ವರ್ಷ ತೆರೆಗೆ ಬಂದ ದುನಿಯಾ ವಿಜಯ್ (Duniya Vijay)​ ನಟನೆಯ ‘ಸಲಗ’ ಸಿನಿಮಾ (Salaga Movie) ಮಾಡಿದ ಹವಾ ಅಷ್ಟಿಷ್ಟಲ್ಲ. ಈ ಚಿತ್ರದಲ್ಲಿ ದುನಿಯಾ ವಿಜಯ್​ ನಟಿಸೋದು ಮಾತ್ರವಲ್ಲ, ಆ್ಯಕ್ಷನ್​ ಕಟ್​ ಕೂಡ ಹೇಳಿದ್ದರು. ಮೊದಲ ನಿರ್ದೇಶನದಲ್ಲೇ ಅವರು ಗೆದ್ದು ಬೀಗಿದ್ದರು. ಇತ್ತೀಚೆಗೆ ಚಿತ್ರತಂಡ ಈ ಸಿನಿಮಾ ಯಶಸ್ಸನ್ನು ಸಂಭ್ರಮಿಸಿತ್ತು. ಸ್ಯಾಂಡಲ್​ವುಡ್​ ಹಿರಿಯ ನಟ ಶಿವರಾಜ್​ಕುಮಾರ್ ಅವರು ಸಕ್ಸಸ್​ ಮೀಟ್​ಗೆ ಆಗಮಿಸಿ ಈ ತಂಡಕ್ಕೆ ಶುಭಕೋರಿದ್ದರು. ಈಗ ‘ಸಲಗ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿಯೋಕೆ ದುನಿಯಾ ವಿಜಯ್​ ರೆಡಿ ಆಗಿದ್ದಾರೆ . ಶಿವರಾತ್ರಿಯಂದು ಹೊಸ ಸಿನಿಮಾದ ಟೈಟಲ್​ ಘೋಷಣೆ ಆಗುವ ಸಾಧ್ಯತೆ ಇದೆ.

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅನೇಕ ಸ್ಟಾರ್​ ನಟರು ಈ ಚಿತ್ರವನ್ನು ಹೊಗಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ವಿಜಯ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಅವರ ನಟನೆಯ 28ನೇ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್​ ಹಾಗೂ ಜಗದೀಶ್​ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಕೈ ಹಾಗೂ ಯಮಹಾ ಆರ್​ಎಕ್ಸ್​ 100 ಬೈಕ್​ ತೋರಿಸಲಾಗಿದೆ. ಪೋಸ್ಟರ್​ನಲ್ಲಿರುವ ಕೈ ರಕ್ತಸಿಕ್ತವಾಗಿದೆ. ಇದರಿಂದ ಇದು ಕೂಡ ರೌಡಿಸಂ ಕಥೆ ಎಂಬುದು ಸ್ಪಷ್ಟವಾಗಿದೆ.

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ.  ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: ‘ಸಲಗ’ ಗೆಲುವಿನ ವೇದಿಕೆಯಲ್ಲಿ ದುನಿಯಾ ವಿಜಯ್​ ಅಳು; ‘ಕರಿಚಿರತೆ’ ಕಣ್ಣೀರಿಗೆ ಕಾರಣ ಏನು?

ಶಿವಣ್ಣನ ಕಾಲಿಗೆ ನಮಸ್ಕರಿಸಿದ ದುನಿಯಾ ವಿಜಯ್​, ಕೀರ್ತಿ; ‘ಸಲಗ’ ಸಕ್ಸಸ್​ ವೇದಿಕೆಯಲ್ಲಿ ‘ಹ್ಯಾಟ್ರಿಕ್​ ಹೀರೋ’

Published On - 8:31 pm, Thu, 24 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ