AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ‘ಕೆಜಿಎಫ್​ 2’ ಪ್ರದರ್ಶನಕ್ಕೆ ಅವಕಾಶ; ಪ್ರತಿಭಟನೆಗೆ ಸಿಕ್ತು ಪ್ರತಿಫಲ

ಚಿಕ್ಕಮಗಳೂರಿನಲ್ಲಿ ಒಟ್ಟು ಮೂರು ಚಿತ್ರಮಂದಿರಗಳಿವೆ. ಆದರೆ, ಯಾವ ಚಿತ್ರಮಂದಿರದಲ್ಲೂ ‘ಕೆಜಿಎಫ್​ 2’ ಪ್ರದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಇದು ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಚಿಕ್ಕಮಗಳೂರಿನಲ್ಲಿ ‘ಕೆಜಿಎಫ್​ 2’ ಪ್ರದರ್ಶನಕ್ಕೆ ಅವಕಾಶ; ಪ್ರತಿಭಟನೆಗೆ ಸಿಕ್ತು ಪ್ರತಿಫಲ
ಯಶ್-ಸಂಜಯ್ ದತ್
TV9 Web
| Edited By: |

Updated on: Apr 13, 2022 | 5:06 PM

Share

‘ಕೆಜಿಎಫ್​ 2’ ಸಿನಿಮಾ (KGF Chapter 2) ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ವಿಶ್ವಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ. ಬೆಂಗಳೂರು ಒಂದರಲ್ಲೇ 500ಕ್ಕೂ ಅಧಿಕ ಶೋಗಳು ಪ್ರದರ್ಶನ ಕಾಣಲಿದೆ. ಯಶ್ (Yash) ಅಭಿಮಾನಿಗಳು ರಾಜ್ಯದ ಮೂಲೆಮೂಲೆಯಲ್ಲಿದ್ದಾರೆ. ಹೀಗಾಗಿ, ರಾಜ್ಯದ ಬಹುತೇಕ ಚಿತ್ರಮಂದಿರಗಳಲ್ಲಿ ‘ಕೆಜಿಎಫ್​ ಚಾಪ್ಟರ್​ 2’ ಪ್ರದರ್ಶನ ಕಾಣಲಿದೆ. ಆದರೆ, ಚಿಕ್ಕಮಗಳೂರು ಮಂದಿಗೆ ಮಾತ್ರ ‘ಕೆಜಿಎಫ್​ 2’ ಸಿನಿಮಾ ನೋಡುವ ಭಾಗ್ಯ ಇರಲಿಲ್ಲ. ಥಿಯೇಟರ್​ ಹಾಗೂ ವಿತರಕರ ನಡುವೆ ಮಾತುಕತೆ ಫೈನಲ್ ಆಗಿರಲಿಲ್ಲ. ಈ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ‘ಕೆಜಿಎಫ್​ 2’ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ. ಇದರಿಂದ ಆಕ್ರೋಶಗೊಂಡ ಫ್ಯಾನ್ಸ್​ ಪ್ರತಿಭಟನೆ ನಡೆಸಿದ್ದರು. ಈಗ ಸಿನಿಮಾ ಪ್ರದರ್ಶನಕ್ಕೆ ಒಪ್ಪಿಗೆ ನೀಡಲಾಗಿದೆ.

ಚಿಕ್ಕಮಗಳೂರಿನಲ್ಲಿ ಒಟ್ಟು ಮೂರು ಚಿತ್ರಮಂದಿರಗಳಿವೆ. ಆದರೆ, ಯಾವ ಚಿತ್ರಮಂದಿರದಲ್ಲೂ ‘ಕೆಜಿಎಫ್​ 2’ ಪ್ರದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಇದು ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಗರದಲ್ಲಿ ಪ್ರದರ್ಶನಕ್ಕೆ ಅವಕಾಶ ಕೊಡುವಂತೆ ಆಗ್ರಹ ಮಾಡಿದ್ದರು. ನಾಗಲಕ್ಷ್ಮಿ ಥಿಯೇಟರ್ ಮುಂಭಾಗದಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ ಜೋರಾಗಿತ್ತು.

ಪ್ರತಿಭಟನೆ ನಡೆಯೋ ಸ್ಥಳಕ್ಕೆ ಶಾಸಕ ಸಿ.ಟಿ.ರವಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಥಿಯೇಟರ್ ಮಾಲೀಕರ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಆ ಬಳಿಕ ಪ್ರತಿಭಟನಾಕಾರರ ಮನವೊಲಿಸಲು ಶಾಸಕ ಸಿ.ಟಿ.ರವಿ. ಯಶಸ್ವಿಯಾಗಿದ್ದರು. ನಟ ಯಶ್ ಹಾಗೂ ವಿತರಕರ ಜೊತೆ ಮಾತನಾಡಿ, ಏಪ್ರಿಲ್​ 14ರಿಂದ ‘ಕೆಜಿಎಫ್ 2’ ಪ್ರದರ್ಶನಕ್ಕೆ ಅವಕಾಶ ಕೊಡಿಸುವ ಭರವಸೆ ನೀಡಿದ್ದರು.

ಹುಟ್ಟೂರಿಗೆ ವಿಜಯ್:

‘ಕೆಜಿಎಫ್ ಚಾಪ್ಟರ್​ 2’ ಸಿನಿಮಾ ತೆರೆಗೆ ಬರೋಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಚಿತ್ರವನ್ನು ಸ್ವಾಗತಿಸೋಕೆ ಭರ್ಜರಿ ಸಿದ್ಧತೆ ನಡೆದಿದೆ. ಕರ್ನಾಟಕ ಸೇರಿ ಇಡೀ ವಿಶ್ವಾದ್ಯಂತ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಳ್ಳುತ್ತಿದೆ. ಜನರು ಈ ಸಿನಿಮಾ ಕಣ್ತುಂಬಿಕೊಳ್ಳಲು ಕಾದು ಕೂತಿದ್ದಾರೆ. ಮಧ್ಯರಾತ್ರಿಯುಂದಲೇ ಶೋಗಳು ಪ್ರದರ್ಶನ ಕಾಣುತ್ತಿವೆ. ಇನ್ನು, ಇಷ್ಟು ದಿನ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದ ಇಡೀ ಟೀಂ ಈಗ ಸ್ವಲ್ಪ ರಿಲ್ಯಾಕ್ಸ್​ ಆಗಿದೆ. ನಿರ್ಮಾಪಕ ವಿಜಯ್ ಅವರ ಊರು ಕಿರಗಂದೂರು. ಕಿರಗಂದೂರಿನ ಮನೆಗೆ ಯಶ್ , ಪ್ರಶಾಂತ್ ನೀಲ್ ಹಾಗೂ ವಿಜಯ್ ಅವರು ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ತೆಗೆದ ಫೋಟೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: Sulthana lyrical video: ಅಬ್ಬರಿಸಲು ಬಂದ ‘ಸುಲ್ತಾನ’: ಹೊಸ ಹಾಡು​ ಬಿಡುಗಡೆ ಮಾಡಿದ ‘ಕೆಜಿಎಫ್​: ಚಾಪ್ಟರ್​ 2’ ತಂಡ

ಪುಣೆಯಲ್ಲಿ ‘ಕೆಜಿಎಫ್​ 2’ ಟಿಕೆಟ್​ ಸಿಗದೇ ವಿಮಾನ ಹತ್ತಿ ಬೆಂಗಳೂರಿಗೆ ಬಂದ ಲೇಡಿ ಫ್ಯಾನ್ಸ್​​: ಆಹಾ ಅಭಿಮಾನ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ