AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಪ್ಪನ್ ಜೊತೆ ಇದ್ದು ಮರಳಿ ಬಂದಾಗ ರಾಜ್​ಕುಮಾರ್​ಗೆ ಸಿಕ್ಕ ಸ್ವಾಗತ ಹೇಗಿತ್ತು? ಇಲ್ಲಿದೆ ಹಳೆಯ ವಿಡಿಯೋ

2000ನೇ ಇಸ್ವಿಯ ಜುಲೈ 30ರಂದು ರಾಜ್​ಕುಮಾರ್ ಅವರು ಗಾಜನೂರಿನಲ್ಲಿ ಇದ್ದರು. ಅವರು ಗಾಜನೂರಿನ ಮನೆಯಲ್ಲಿ ಇರುವಾಗ ರಾತ್ರಿ ಅವರನ್ನು ವೀರಪ್ಪನ್ ಕಿಡ್ನ್ಯಾಪ್ ಮಾಡಿದ್ದರು. ಅವರು 108 ದಿನ ಕಸ್ಟಡಿಯಲ್ಲಿ ಇದ್ದರು. ಅದೇ ವರ್ಷ ನವೆಂಬರ್ 15ರಂದು ಅವರನ್ನು ಬಿಡಲಾಯಿತು.

ವೀರಪ್ಪನ್ ಜೊತೆ ಇದ್ದು ಮರಳಿ ಬಂದಾಗ ರಾಜ್​ಕುಮಾರ್​ಗೆ ಸಿಕ್ಕ ಸ್ವಾಗತ ಹೇಗಿತ್ತು? ಇಲ್ಲಿದೆ ಹಳೆಯ ವಿಡಿಯೋ
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 07, 2024 | 7:37 AM

Share

ಕಾಡುಗಳ್ಳ ವೀರಪ್ಪನ್ ನಮ್ಮ ವರನಟ ಡಾಕ್ಟರ್ ರಾಜ್​ಕುಮಾರ್ ಅವರನ್ನು ಅಪಹರಿಸಿಬಿಟ್ಟಿದ್ದರು. ಹಲವು ದಿನಗಳ ಕಾಲ ಕಾಡಲ್ಲಿ ಅವರು ಇದ್ದರು. ಅವರಿಗೆ ವೀರಪ್ಪನ್ ಏನೂ ಮಾಡಿರಲಿಲ್ಲ ಎಂಬುದು ಖುಷಿಯ ವಿಚಾರ. ಬೆಂಗಳೂರಿಗೆ ರಾಜ್​ಕುಮಾರ್ ಬಂದಾಗ ಪರಿಸ್ಥಿತಿ ಹೇಗಿತ್ತು? ಈ ಅಪರೂಪದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನರ ಖುಷಿಯ ಪಾರವನ್ನು ಕಂಟ್ರೋಲ್ ಮಾಡಲು ಯಾರಿಗೂ ಸಾಧ್ಯವೇ ಇರಲಿಲ್ಲ.

2000ನೇ ಇಸ್ವಿಯ ಜುಲೈ 30ರಂದು ರಾಜ್​ಕುಮಾರ್ ಅವರು ಗಾಜನೂರಿನಲ್ಲಿ ಇದ್ದರು. ಅವರು ಗಾಜನೂರಿನ ಮನೆಯಲ್ಲಿ ಇರುವಾಗ ರಾತ್ರಿ ಅವರನ್ನು ವೀರಪ್ಪನ್ ಕಿಡ್ನ್ಯಾಪ್ ಮಾಡಿದ್ದರು. ಅವರು 108 ದಿನ ಕಸ್ಟಡಿಯಲ್ಲಿ ಇದ್ದರು. ಅದೇ ವರ್ಷ ನವೆಂಬರ್ 15ರಂದು ಅವರನ್ನು ಬಿಡಲಾಯಿತು. 100+ ದಿನ ಅವರು ಟೆನ್ಷನ್​ನಲ್ಲಿಯೇ ಇದ್ದರು.

108 ದಿನಗಳು ರಾಜ್​ಕುಮಾರ್ ಅವರು ವೀರಪ್ಪನ್ ಜೊತೆ ಕಾಡಿನಲ್ಲಿ ಇದ್ದರು. ಕಾಡುಗಳಲ್ಲಿ ಸುತ್ತಾಟ ನಡೆಸಿದ್ದರು. ರಾಜ್​ಕುಮಾರ್ ಕಾಡಿನಲ್ಲಿ ಇದ್ದಂಥ ಸಂದರ್ಭದ ವಿಡಿಯೋಗಳು ಮಾಧ್ಯಮಗಳಲ್ಲಿ ಪ್ರಸಾರ ಕಾಣುತ್ತಿದ್ದವು. ಅವರು ಜೈಲಿನಲ್ಲಿ ಇದ್ದಷ್ಟು ದಿನ ಇಡೀ ಕರ್ನಾಟಕ ಆತಂಕ ಒಳಗಾಗಿತ್ತು. ಥಿಯೇಟರ್​ಗಳು ಬಂದ್ ಆಗಿದ್ದವು. ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಇತ್ತು.

ಬಿಡುಗಡೆ ಬಳಿಕ ರಾಜ್​ಕುಮಾರ್ ಅವರು ಹೆಲಿಕ್ಯಾಪ್ಟರ್​ನಲ್ಲಿ ಬಂದು ಇಳಿಯುತ್ತಾರೆ. ಬೆಂಗಳೂರಿನ ಹೈಕೋರ್ಟ್​ ಎದುರು ಜನ ಸಾಗರವೇ ನೆರೆದಿರುತ್ತದೆ. ಪಟಾಕಿ ಸಿಡಿಸಲಾಗುತ್ತದೆ. ರಾಜ್​ಕುಮಾರ್ ಬರುವಾಗ ಶಿವಣ್ಣ ಅವರು ಕ್ಯಾಮೆರಾ ನೋಡುವಂತೆ ಹೇಳುತ್ತಾರೆ. ಆಗ ಅಣ್ಣಾವ್ರು ಕ್ಯಾಮೆರಾ ಕಡೆಗೆ ನೋಡುತ್ತಾರೆ ಮತ್ತು ಕೈ ಮುಗಿಯುತ್ತಾರೆ. ಜನರು ಪಟಾಕಿ ಸಿಡಿಸುತ್ತಾರೆ. ಈ ಅಪರೂಪದ ವಿಡಿಯೋನ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ರಾಜ್​ಕುಮಾರ್ ಅವರ ಅಪಹರಣವು ಅತಿ ದೊಡ್ಡ ಮಟ್ಟದಲ್ಲಿ ಚರ್ಚೆ ಆದ ವಿಚಾರ ಆಗಿತ್ತು. 24 ವರ್ಷಗಳ ಹಿಂದೆ ಈ ಘಟನೆಯು ನಡೆದಿತ್ತು ಎನ್ನಬಹುದು. ಈ ಘಟನೆಯು ಕರ್ನಾಟಕ ಮಾತ್ರವಲ್ಲದೆ ಭಾರತಾದ್ಯಂತ ಚರ್ಚೆ ಆಗಿತ್ತು. ರಾಜ್​​ಕುಮಾರ್ ಅವರು ಕನ್ನಡದಲ್ಲಿ ಆಗ ಬೇಡಿಕೆಯ ಹೀರೋ ಎನಿಸಿಕೊಂಡಿದ್ದರು. ರಾಜ್​ಕುಮಾರ್ ಕುಟುಂಬವು ಹಣವನ್ನು ನೀಡಿ ಬಿಡುಗಡೆ ಆಗಿದೆ ಎನ್ನುವ ಮಾತು ಇತ್ತು. ಆದರೆ, ಇದನ್ನು ರಾಜ್​ಕುಮಾರ್ ಕುಟುಂಬದವರು ಅಲ್ಲಗಳೆದಿದೆ.

ಇದನ್ನೂ ಓದಿ: ಸಿನಿಮಾ ಗೆದ್ದಿದ್ದು ನನ್ನಿಂದಲೇ ಅನ್ನೋ ಹೀರೋಗಳು ರಾಜ್​ಕುಮಾರ್ ಹೇಳಿದ ಈ ಮಾತನ್ನು ಕೇಳಿ

ಪುನೀತ್ ರಾಜ್​​ಕುಮಾರ್ ಅವರು ಈ ಅಪಹರಣದ ಬಗ್ಗೆ ಒಮ್ಮೆ ಮಾತನಾಡಿದ್ದರು. ತಮಗೆ ಸಾಕಷ್ಟು ಭಯ ಆಗಿದ್ದಾಗಿಯೂ, ಜನರ ಬೆಂಬಲ ನೋಡಿ ಸಾಕಷ್ಟು ಖುಷಿಪಟ್ಟಿದ್ದಾಗಿಯೂ ಅವರು ಹೇಳಿಕೊಂಡಿದ್ದರು. ಅವರು ಬಿಡುಗಡೆ ಆದ ಬಳಿಕ ಎಲ್ಲರೂ ಖುಷಿಪಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗ್ರಾಮ ದೇವತೆ ಮೆರವಣಿಗೆ ವೇಳೆ ಗುಂಪು ಘರ್ಷಣೆ: ರಸ್ತೆಯಲ್ಲಿ ಅನಾಥವಾದ ವಿಗ್ರಹ
ಗ್ರಾಮ ದೇವತೆ ಮೆರವಣಿಗೆ ವೇಳೆ ಗುಂಪು ಘರ್ಷಣೆ: ರಸ್ತೆಯಲ್ಲಿ ಅನಾಥವಾದ ವಿಗ್ರಹ
ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ
ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ
ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ
ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ
ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು
ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು
ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ
ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ
50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ?
50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ?
ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ
ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ
ಲಕ್ಕುಂಡಿ: 4ನೇ ದಿನದ ಉತ್ಖನನದಲ್ಲಿ ಪುರಾತನ ಕೊಡಲಿ ಆಕಾರದ ಅವಶೇಷ ಪತ್ತೆ
ಲಕ್ಕುಂಡಿ: 4ನೇ ದಿನದ ಉತ್ಖನನದಲ್ಲಿ ಪುರಾತನ ಕೊಡಲಿ ಆಕಾರದ ಅವಶೇಷ ಪತ್ತೆ
ರೈಲು ಹತ್ತಲು ಹೋಗಿ ಬಿದ್ದ ತಂದೆ-ಮಗನನ್ನು ರಕ್ಷಿಸಿದ ಆರ್​ಪಿಫ್ ಸಿಬ್ಬಂದಿ
ರೈಲು ಹತ್ತಲು ಹೋಗಿ ಬಿದ್ದ ತಂದೆ-ಮಗನನ್ನು ರಕ್ಷಿಸಿದ ಆರ್​ಪಿಫ್ ಸಿಬ್ಬಂದಿ
Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ
Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ