AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ ಸಿದ್ಧವಾಯ್ತು ‘ಅಘೋರ’ ಸಿನಿಮಾ; ಅಘೋರಿ ಪಾತ್ರದಲ್ಲಿ ಹಿರಿಯ ನಟ ಅವಿನಾಶ್​

‘ಅಘೋರ’ ಸಿನಿಮಾದಲ್ಲಿ ಖ್ಯಾತ ನಟ ಅವಿನಾಶ್​ ಅವರು ಇದೇ ಮೊದಲ ಬಾರಿಗೆ ಅಘೋರಿ ಪಾತ್ರ ಮಾಡಿದ್ದಾರೆ. ಮಾ.4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ಬಿಡುಗಡೆಗೆ ಸಿದ್ಧವಾಯ್ತು ‘ಅಘೋರ’ ಸಿನಿಮಾ; ಅಘೋರಿ ಪಾತ್ರದಲ್ಲಿ ಹಿರಿಯ ನಟ ಅವಿನಾಶ್​
‘ಅಘೋರ’ ಚಿತ್ರತಂಡ
TV9 Web
| Edited By: |

Updated on: Feb 16, 2022 | 9:52 PM

Share

ಹಿರಿಯ ನಟ ಅವಿನಾಶ್​ (Actor Avinash), ಅಶೋಕ್​, ರಚನಾ ದಶರತ್​, ದ್ರವ್ಯಾ ಶೆಟ್ಟಿ, ಪುನೀತ್​ ಗೌಡ ಮುಂತಾದವರು ನಟಿಸಿರುವ ‘ಅಘೋರ’ (Aghora Kannada Movie) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ಅಘೋರ’ ಎಂದ ತಕ್ಷಣ ಇದು ಅಘೋರಿಗಳ ಕುರಿತಾದ ಸಿನಿಮಾ ಎಂದು ಸಿನಿಪ್ರಿಯರು ಊಹಿಸುವುದು ಸಹಜ. ಆದರೆ ನಿರ್ದೇಶಕ ಎನ್​.ಎಸ್​. ಪ್ರಮೋದ್​ ರಾಜ್​ ಹೇಳುವುದೇ ಬೇರೆ. ‘ಇದು ಅಘೋರಿಗಳ (Aghori) ಬಗ್ಗೆ ಮಾಡಿರುವ ಸಿನಿಮಾ ಅಲ್ಲ. ಕಾಸ್ಮಿಕ್​ ಎನರ್ಜಿ ಕುರಿತ ಕಥೆ ಇದೆ. ಜಗತ್ತಿನಲ್ಲಿ ಪಂಚಭೂತಗಳು ತುಂಬ ಮುಖ್ಯ. ನಮ್ಮ ದೇಹದಲ್ಲಿಯೂ ಅವು ಮಹತ್ವದ ಪಾತ್ರ ವಹಿಸುತ್ತವೆ. ಈ ವಿಚಾರವನ್ನು ಹಾರರ್​ ಶೈಲಿಯಲ್ಲಿ ಪ್ರಸ್ತುತಪಡಿಸಿದ್ದೇವೆ. ಅಘೋರ ಎಂದರೆ ಒಂದು ಘಟನೆ. ಅದನ್ನು ಆಧರಿಸಿ ಈ ಸಿನಿಮಾ ಇದೆ’ ಎಂದು ನಿರ್ದೇಶಕರು ಹೇಳಿದ್ದಾರೆ. ಉಪೇಂದ್ರ ನಟನೆಯ ‘ಮತ್ತೆ ಬಾ ಉಪೇಂದ್ರ’ ಚಿತ್ರದಲ್ಲಿ ಸಹಾಯಕ ನೃತ್ಯ ನಿರ್ದೇಶಕನಾಗಿ ಪ್ರಮೋದ್​ ರಾಜ್​ ಕೆಲಸ ಮಾಡಿದ್ದರು. ಆ ವೇಳೆ ಭೇಟಿಯಾದ ಸಾಧುವೊಬ್ಬರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದರು. ಅವರು ಹೇಳಿದ ಮಾತುಗಳಿಂದ ಸ್ಫೂರ್ತಿ ಪಡೆದ ಪ್ರಮೋದ್​ ರಾಜ್ ಅವರು ಈ ಸಿನಿಮಾ ನಿರ್ದೇಶಿಸಿದ್ದಾರೆ. ಚಿತ್ರಕಥೆಯಲ್ಲಿ ಹೊಸ ಪ್ರಯತ್ನಗಳನ್ನು ಮಾಡಿರುವುದಾಗಿ ಅವರು ಹೇಳಿದ್ದಾರೆ. ಈ ಪ್ರಯತ್ನಗಳು ಜನರಿಗೆ ಇಷ್ಟ ಆಗುತ್ತವೆ ಎಂಬ ಭರವಸೆ ಚಿತ್ರತಂಡಕ್ಕಿದೆ.

ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಕಾರಣಾಂತರಗಳಿಂದ ಹಿರಿಯ ನಟ ಅವಿನಾಶ್​ ಅವರು ಸುದ್ದಿಗೋಷ್ಠಿಗೆ ಹಾಜರಾಗಿರಲಿಲ್ಲ. ಇದೇ ಮೊದಲ ಬಾರಿಗೆ ಅವಿನಾಶ್​ ಅವರು ಅಘೋರಿ ಪಾತ್ರ ಮಾಡಿದ್ದಾರೆ. ಅಘೋರಿ ವೇಷಕ್ಕಾಗಿ ಮೇಕಪ್​ ಮಾಡಿಕೊಳ್ಳುವುದು ಕಷ್ಟದ ಕೆಲಸ. ಕಥೆ ಇಷ್ಟ ಆಗಿದ್ದರಿಂದ ಅವರು ಈ ಪಾತ್ರ ಒಪ್ಪಿಕೊಂಡರು. ‘ಇದು 24 ಗಂಟೆಯಲ್ಲಿ ನಡೆಯುವ ಕಥೆ. ಹಾಗಾಗಿ ಪೂರ್ತಿ ಚಿತ್ರೀಕರಣವನ್ನು ಬೆಂಗಳೂರಿನ ಒಂದೇ ಮನೆಯಲ್ಲಿ ಮಾಡಿದ್ದೇವೆ. ಕೆಆರ್​ಜಿ ಸ್ಟುಡಿಯೋಸ್​ ಮೂಲಕ ನಮ್ಮ ಸಿನಿಮಾ ಬಿಡುಗಡೆ ಆಗುತ್ತಿರುವುದು ಖುಷಿಯ ವಿಚಾರ’ ಎಂದಿದ್ದಾರೆ ನಿರ್ದೇಶಕರು.

ಪಂಚಭೂತಗಳನ್ನು ಪ್ರತಿನಿಧಿಸುವಂತಹ ಹೆಸರುಗಳನ್ನು ಈ ಚಿತ್ರದ ಮುಖ್ಯ ಪಾತ್ರಗಳಿಗೆ ಇಡಲಾಗಿದೆ. ಯಾಕೆ ಎಂಬುದು ಸಿನಿಮಾ ನೋಡಿದಾಗ ತಿಳಿಯಲಿದೆ ಎಂದಿದ್ದಾರೆ ನಟ ಅಶೋಕ್​. ‘ನನ್ನ ಪಾತ್ರದ ಹೆಸರು ಅಗ್ನಿ. ಅದು ದೀಪವೂ ಆಗಬಹುದು, ಕಾಡ್ಗಿಚ್ಚು ಕೂಡ ಆಗಬಹುದು. ತುಂಬ ಅಧ್ಯಯನ ನಡೆಸಿ ನಮ್ಮ ನಿರ್ದೇಶಕರು ಈ ಕಥೆ ಸಿದ್ಧಪಡಿಸಿದ್ದಾರೆ. ಸಾವು ಮತ್ತು ಪುನರ್ಜನ್ಮದ ನಡುವೆ ಇರುವ ಒಂದು ಅಂತರದಲ್ಲಿ ಏನಾಗುತ್ತದೆ ಎಂಬುದರ ಕುರಿತು ಅಘೋರಿಗಳು ಮತ್ತು ವಿಜ್ಞಾನಿಗಳ ಜೊತೆ ಚರ್ಚಿಸಿ ವಿಷಯ ಸಂಗ್ರಹಿಸಿದ್ದಾರೆ. ಅದನ್ನು ಜನರಿಗೆ ತಲುಪಿಸಲು ಈ ಸಿನಿಮಾ ಮಾಡಲಾಗಿದೆ’ ಎಂಬುದು ಅಶೋಕ್​ ಮಾತುಗಳು.

ಪುನೀತ್​ ಅವರು ಈ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ಒಂದು ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಅವಿನಾಶ್​ ಜೊತೆ ಪುನೀತ್​ ಕೂಡ ಅಘೋರಿಯಾಗಿ ತೆರೆ ಹಂಚಿಕೊಂಡಿದ್ದಾರೆ. ಇಂಥ ಅವಕಾಶ ಸಿಕ್ಕಿದ್ದು ಅವರ ಸಂತಸಕ್ಕೆ ಕಾರಣ ಆಗಿದೆ. ಮಾರ್ಚ್​ 4ರಂದು ‘ಅಘೋರ’ ಚಿತ್ರ ಬಿಡುಗಡೆ ಆಗಲಿದೆ. ‘ಇದು ಬರೀ ಹಾರರ್​ ಸಿನಿಮಾ ಅಲ್ಲ. ಇದರಲ್ಲಿ ಲವ್​, ಸೆಂಟಿಮೆಂಟ್​ ಮತ್ತು ವಿಜ್ಞಾನದ ವಿಷಯಗಳನ್ನೂ ಹೇಳಲಿದ್ದೇವೆ. ಈ ಚಿತ್ರ ಪೂರ್ಣಗೊಂಡು ಎರಡು ವರ್ಷ ಕಳೆದಿದೆ. ಕೊವಿಡ್​ ಕಾರಣದಿಂದ ರಿಲೀಸ್​ ಮಾಡಲು ಆಗಲಿಲ್ಲ. ಈಗ ಸಮಯ ಕೂಡಿಬಂದಿದೆ’ ಎಂದಿದ್ದಾರೆ ಪುನೀತ್​. ದೇವರು ಮತ್ತು ಮೂಢನಂಬಿಕೆಯನ್ನು ಅತಿಯಾಗಿ ನಂಬುವಂತಹ ಪ್ರಕೃತಿ ಎಂಬ ಪಾತ್ರಕ್ಕೆ ದ್ರವ್ಯಾ ಶೆಟ್ಟಿ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ:

‘ಪುನೀತ್​ ಇಲ್ಲದೇ ‘ಜೇಮ್ಸ್​’ ಶೂಟಿಂಗ್​ ಮಾಡೋದು ಕಷ್ಟ ಆಗ್ತಿದೆ’: ನಟ ಅವಿನಾಶ್​ ಭಾವುಕ ನುಡಿ

ಮಾಳವಿಕಾ ಮನೆಗೆ ಶ್ರುತಿ, ಸುಧಾರಾಣಿ ಸರ್ಪ್ರೈಸ್​ ಎಂಟ್ರಿ; ಹೇಗಿತ್ತು ನೋಡಿ ಜನ್ಮದಿನದ ಸೆಲೆಬ್ರೇಷನ್​

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ