AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕರ್ಷಕವಾಗಿದೆ ‘ಅಜ್ಞಾತವಾಸಿ’ ಟ್ರೇಲರ್​; ‘ಗುಳ್ಟು’ ನಿರ್ದೇಶಕನಿಗೆ ಹೇಮಂತ್ ರಾವ್ ಸಾಥ್

ಜನಾರ್ಧನ್ ಚಿಕ್ಕಣ್ಣ ಅವರು ನಿರ್ದೇಶನ ಮಾಡಿರುವ ‘ಅಜ್ಞಾತವಾಸಿ’ ಸಿನಿಮಾ ಏಪ್ರಿಲ್​ 11ರಂದು ರಿಲೀಸ್ ಆಗಲಿದೆ. ರಂಗಾಯಣ ರಘು ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. 2 ನಿಮಿಷ 6 ಸೆಕೆಂಡ್ ಅವಧಿಯ ‘ಅಜ್ಞಾತವಾಸಿ’ ಟ್ರೇಲರ್ ಸದ್ದು ಮಾಡುತ್ತಿದೆ. ಹೇಮಂತ್ ಎಂ. ರಾವ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಆಕರ್ಷಕವಾಗಿದೆ ‘ಅಜ್ಞಾತವಾಸಿ’ ಟ್ರೇಲರ್​; ‘ಗುಳ್ಟು’ ನಿರ್ದೇಶಕನಿಗೆ ಹೇಮಂತ್ ರಾವ್ ಸಾಥ್
Agnyathavasi Movie Poster
Follow us
ಮದನ್​ ಕುಮಾರ್​
|

Updated on: Apr 04, 2025 | 7:46 PM

ಕನ್ನಡ ಚಿತ್ರರಂಗದಲ್ಲಿ ಜನಾರ್ದನ್ ಚಿಕ್ಕಣ್ಣ (Janardhan Chikkanna) ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ಗುಳ್ಟು’ ಸಿನಿಮಾ ಮೂಲಕ ಮೋಡಿ ಮಾಡಿದ ಅವರು ಈಗ ‘ಅಜ್ಞಾತವಾಸಿ’ (Agnyathavasi) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆಯುತ್ತಿದೆ. ಪ್ರೇಕ್ಷಕರು ಮಾತ್ರವಲ್ಲದೇ ಹಲವು ಸೆಲೆಬ್ರಿಟಿಗಳು ಕೂಡ ಈ ಸಿನಿಮಾದ ಟ್ರೇಲರ್​ (Agnyathavasi Movie Trailer) ನೋಡಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ಅಜ್ಞಾತವಾಸಿ’ ಸಿನಿಮಾದಲ್ಲಿ ಒಂದು ಮರ್ಡರ್ ಮಿಸ್ಟರಿ ಕಹಾನಿ ಇದೆ. ಏಪ್ರಿಲ್ 11ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಹೇಮಂತ್ ಎಂ. ರಾವ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ರಂಗಾಯಣ ರಘು, ಪವನಾ ಗೌಡ, ಸಿದ್ದು ಮೂಲಿಮನೆ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಮುಂತಾದವರು ‘ಅಜ್ಞಾತವಾಸಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಮಲೆನಾಡಿನ ಹಿನ್ನೆಲೆಯಲ್ಲಿ ನಡೆಯುವ ಕಥೆ. ಈ ಬಗ್ಗೆ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಅವರು ಮಾತನಾಡಿದರು. ‘ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಕಾಲ್ಪನಿಕ ಕಥೆ ಇದು. ಆ ಹಳ್ಳಿಯಲ್ಲಿ ಪೊಲೀಸ್ ಠಾಣೆ ಸ್ಥಾಪನೆಯಾಗಿ 25 ವರ್ಷ ಆಗಿರುತ್ತದೆ. ಯಾವುದೇ ಸಣ್ಣ ಕೇಸ್ ಸಹ ಅಲ್ಲಿ ದಾಖಲಾಗಿರುವುದಿಲ್ಲ. 1997ರಲ್ಲಿ ಮರ್ಡರ್ ಕೇಸ್ ದಾಖಲಾಗುತ್ತದೆ. ಅನುಭವ ಇಲ್ಲದ ಪೊಲೀಸ್ ಅಲ್ಲಿಗೆ ಬಂದು ಈ ಕೇಸ್ ಬಗೆಹರಿಸುತ್ತಾನೆ. ಗುಳ್ಟು ಚಿತ್ರದ ಬಳಿಕ ಈ ಕಥೆ ನನ್ನನ್ನು ಎಕ್ಸೈಟ್ ಮಾಡಿತು’ ಎಂದು ಅವರು ಹೇಳಿದರು.

ಟ್ರೇಲರ್​ ಬಿಡುಗಡೆ ವೇಳೆ ನಿರ್ಮಾಪಕ ಹೇಮಂತ್ ಎಂ. ರಾವ್ ಮಾತನಾಡಿದರು. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾದ ನಂತರ ನಾನು ಹಾಗೂ ರಕ್ಷಿತ್ ಶೆಟ್ಟಿ ಮಾತಾಡಿಕೊಳ್ಳುತ್ತಿದ್ದೇವು. ಈ ರೀತಿಯ ಚಿತ್ರಗಳನ್ನು ಮಾಡಲು ಯಾಕೆ ಇಷ್ಟು ಒದ್ದಾಡಬೇಕು? ನಾವಿಬ್ಬರು ಈ ರೀತಿಯ ಒಳ್ಳೆಯ ಕಥೆಗೆ ಬಂಡವಾಳ ಹಾಕಲು ಅಂದು ತೀರ್ಮಾನಿಸಿದೆವು. ಹಾಗಾಗಿ, ಅಜ್ಞಾತವಾಸಿ ಸಿನಿಮಾ ಮಾಡಿದ್ದೇನೆ. ಜನಾರ್ಧನ್ ಚಿಕ್ಕಣ್ಣ ನಮ್ಮ ಚಿತ್ರರಂಗದ ಒಳ್ಳೆಯ ನಿರ್ದೇಶಕ. ಜನರನ್ನು ನಂಬಿ ಈ ಸಿನಿಮಾ ಮಾಡಿದ್ದೇವೆ’ ಎಂದರು ಹೇಮಂತ್ ಎಂ. ರಾವ್.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಅಜ್ಞಾತವಾಸಿ ಸಿನಿಮಾ ಟ್ರೇಲರ್:

ಈ ಸಿನಿಮಾದಲ್ಲಿ ನಟಿಸಿದ್ದಕ್ಕೆ ರಂಗಾಯಣ ರಘು ಅವರು ಸಂತಸ ವ್ಯಕ್ತಪಡಿಸಿದರು. ‘ಒಬ್ಬರಿಗೊಬ್ಬರು ನಿರ್ದೇಶಕರು ಬೆಳೆಯಲಿ ಎಂದು ಈ ರೀತಿ ಸಿನಿಮಾಗಳನ್ನು ಮಾಡುತ್ತಿರುವುದು ಸಂತಸದ ವಿಚಾರ. ಜನಾರ್ಧನ್ ಕಥೆ ಹೇಳಿದಾಗ ಎಲ್ಲ ಪಾತ್ರಗಳ ಮೇಲೆ ನನಗೆ ಹೊಟ್ಟೆ ಕಿಚ್ಚು ಬಂದಿತ್ತು. ಅಷ್ಟು ಚೆನ್ನಾಗಿವೆ ಈ ಸಿನಿಮಾದ ಪಾತ್ರಗಳು. ಇದು ಮರ್ಡರ್ ಮಿಸ್ಟರಿ ಇರುವ ಸಿನಿಮಾ’ ಎಂದು ರಂಗಾಯಣ ರಘು ಹೇಳಿದರು.

ಇದನ್ನೂ ಓದಿ: ತುಂಬ ಸಾಲ ಮಾಡಿದ್ದೇನೆ, ಎಲ್ಲವನ್ನೂ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್

ಚರಣ್ ರಾಜ್ ಅವರು ‘ಅಜ್ಞಾತವಾಸಿ’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಅದ್ವೈತ್ ಗುರುಮೂರ್ತಿ ಅವರು ಛಾಯಾಗ್ರಹಣ ಮಾಡಿದ್ದಾರೆ. ‘ದಾಕ್ಷಾಯಿಣಿ ಟಾಕೀಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಕೃಷ್ಣರಾಜ್ ಅವರು ಕಥೆ ಬರೆದ್ದಾರೆ. ಭರತ್ ಎಂ.ಸಿ. ಅವರು ಸಂಕಲನ ಮಾಡಿದ್ದಾರೆ. ಉಲ್ಲಾಸ್ ಹೈದೂರು ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು