AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ ಮುಗಿದು ಕೇಳಿಕೊಳ್ತೀನಿ, ಆ ತಪ್ಪು ಮಾಡಬೇಡಿ’; ಮುಖವಾಡ ಹಾಕಿದ ಫ್ಯಾನ್ಸ್​ಗೆ ಅನಿರುದ್ಧ್ ಎಚ್ಚರಿಕೆ

ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆಯ ಸಮೀಪದಲ್ಲಿ ಹಲವಾರು ವಿವಾದಗಳು ಉದ್ಭವಿಸಿವೆ. ಅವರ ಸಮಾಧಿ ಸ್ಥಳದ ವಿವಾದ ಇನ್ನೂ ಬಗೆಹರಿದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನಕಾರಾತ್ಮಕ ಕಾಮೆಂಟ್‌ಗಳು ಕುಟುಂಬಕ್ಕೆ ಕಳವಳ ಉಂಟುಮಾಡಿವೆ. ಅನಿರುದ್ಧ್ ಅವರು ಸಾಮಾಜಿಕ ಜಾಲತಾಣದಲ್ಲಿ ನಕಾರಾತ್ಮಕ ಕಾಮೆಂಟ್‌ಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದಾರೆ.

‘ಕೈ ಮುಗಿದು ಕೇಳಿಕೊಳ್ತೀನಿ, ಆ ತಪ್ಪು ಮಾಡಬೇಡಿ’; ಮುಖವಾಡ ಹಾಕಿದ ಫ್ಯಾನ್ಸ್​ಗೆ ಅನಿರುದ್ಧ್ ಎಚ್ಚರಿಕೆ
ಅನಿರುದ್ಧ್-ವಿಷ್ಣು
ರಾಜೇಶ್ ದುಗ್ಗುಮನೆ
|

Updated on: Sep 17, 2025 | 2:57 PM

Share

ವಿಷ್ಣುವರ್ಧನ್ (Vishnuvardhan) ಜನ್ಮದಿನ ಸಮೀಪಿಸುತ್ತಿದ್ದಂತೆ ಹಲವು ವಿವಾದಗಳು ಕೂಡ ಸೃಷ್ಟಿ ಆಗಿವೆ. ಈ ಮೊದಲು ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಯನ್ನು ನೆಲಸಮ ಮಾಡುವ ಕೆಲಸ ಮಾಡಲಾಯಿತು. ಆ ಬಳಿಕ ವಿಷ್ಣು ಸಮಾಧಿ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಬೇಡಿಕೆ ಇಟ್ಟರೂ ಯಾವುದೇ ಪ್ರಯೋಜನ ಆಗಿಲ್ಲ. ಮತ್ತೊಂದು ಕಡೆ ಸಮಾಧಿ ಜಾಗದಲ್ಲಿ ಬರ್ತ್​ಡೇ ಆಚರಿಸಬಾರದು ಎಂದು ಸ್ವತಃ ಕೋರ್ಟ್ ಆದೇಶ ನೀಡಿದೆ. ಹೀಗಿರುವಾಗಲೇ ಅನಿರುದ್ಧ್ ಅವರು ಒಂದು ಎಚ್ಚರಿಕೆ ನೀಡಿದ್ದಾರೆ.

‘ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಕುಟುಂಬದ ವಿರುದ್ಧ ನಕಾರಾತ್ಮಕ ಕಾಮೆಂಟ್​ಗಳು ಬರುತ್ತಿವೆ. ನಾನು ಹಿಂದೆ ಕೂಡ ಅಭಿಮಾನಿಗಳ ಸಮ್ಮುಖದಲ್ಲಿ, ಮಾಧ್ಯಮದ ಎದುರು ಎಚ್ಚರಿಕೆ ನೀಡಿದ್ದೆ. ಇದೇ ತರಹದ ಕಾಮೆಂಟ್​ಗಳು ಬರುತ್ತಿದ್ದರೆ ಅಂಥವರ ವಿರುದ್ಧ ದೂರು ದಾಖಲಿಸುತ್ತೇನೆ ಎಂದಿದ್ದೆ. ಆದರೂ ಕೂಡ ಈ ಕಾಮೆಂಟ್​ಗಳು ನಿಲ್ಲುತ್ತಿಲ್ಲ’ ಎಂದು ಅನಿರುದ್ಧ್ ಹೇಳಿದ್ದಾರೆ.

‘ಸೆಪ್ಟೆಂಬರ್ 16ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇನೆ. ಇದನ್ನು ಮತ್ತೆ ಮುಂದುವರಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಇನ್ನೊಂದು ಬಾರಿ ಕೈ ಮುಗಿದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ, ವೇದಿಕೆ ಮೇಲೆ ಈ ರೀತಿ ಕಮೆಂಟ್ ಮಾಡಿ ಸಮಸ್ಯೆ ತಂದುಕೊಳ್ಳಬೇಡಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ
Image
ಊಟದ ವಿಚಾರದಲ್ಲಿ ಸಖತ್ ಮೂಡಿ ಆಗಿದ್ದ ವಿಷ್ಣುವರ್ಧನ್
Image
‘ಪ್ರಿಯಾಂಕಾ ಗಂಭೀರ ಅಫೇರ್ ಹೊಂದಿದ್ದು ನಿಜ’; ನಿರ್ದೇಶಕನ ದೊಡ್ಡ ಹೇಳಿಕೆ
Image
ಒಟಿಟಿಗೆ ಬಂದರೂ ಥಿಯೇಟರ್​​ನಲ್ಲಿ ಪ್ರದರ್ಶನ ಕಾಣುತ್ತಿದೆ ‘ಸು ಫ್ರಮ್ ಸೋ’
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ಅಭಿಮಾನದ ಮುಖವಾಡ ಹಾಕಿಕೊಂಡ ಕೆಲವರು ಕೆಟ್ಟ ಕೆಲಸ ಮಾಡುತ್ತಿದ್ದಾರೆ, ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬರೆಯುತ್ತಿದ್ದಾರೆ ಎಂದು ಅನಿರುದ್ಧ್ ಅವರು ಈ ಮೊದಲು ಹೇಳಿದ್ದರು.

ಇದನ್ನೂ ಓದಿ: ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆಗೆ ಅನುಮತಿ ನಿರಾಕರಣೆ: ಅಡಚಣೆ ಯಾರಿಂದ?

ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಜನ್ಮದಿನ. ಅವರು ಬದುಕಿದ್ದರೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಈ ವಿಶೇಷ ಸಂದರ್ಭದಲ್ಲಿ ‘ಯಜಮಾನರ ಅಮೃತ ಮಹೋತ್ಸವ’ವನ್ನಾಗಿ ಆಚರಿಸಲು ನಿರ್ಧರಸಲಾಗಿತ್ತು. ಆದರೆ, ಆ ಬಳಿಕ ಯಾವುದೇ ಅಪ್​​ಡೇಟ್ ಕೂಡ ಬಂದಿಲ್ಲ. ಇದನ್ನು ಆಚರಿಸೋದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ