AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aviva Bidapa: ವಿವಾಹಕ್ಕೂ ಮುನ್ನ ಸೋಲ್​ಮೇಟ್​ನಿಂದ ಅವಿವಾಗೆ ಸಿಕ್ತು ಚೆಂದದ ಗಿಫ್ಟ್​; ಇದರ ವಿಶೇಷತೆಗಳೇನು?

ಅಭಿಷೇಕ್ ಹಾಗೂ ಅವಿವಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ.

Aviva Bidapa: ವಿವಾಹಕ್ಕೂ ಮುನ್ನ ಸೋಲ್​ಮೇಟ್​ನಿಂದ ಅವಿವಾಗೆ ಸಿಕ್ತು ಚೆಂದದ ಗಿಫ್ಟ್​; ಇದರ ವಿಶೇಷತೆಗಳೇನು?
ಅವಿವಾ
ರಾಜೇಶ್ ದುಗ್ಗುಮನೆ
|

Updated on: Jun 05, 2023 | 8:05 AM

Share

ಅವಿವಾ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ಇಂದು (ಜೂನ್ 5) ಮದುವೆ ಆಗುತ್ತಿದ್ದಾರೆ. ಅನೇಕ ವರ್ಷಗಳ ಪ್ರೀತಿಗೆ ಇವರು ಹೊಸ ಅರ್ಥ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಅದ್ದೂರಿ ಮದುವೆ ನಡೆಯಲಿದೆ. ಇದಕ್ಕೂ ಮೊದಲು ಅವಿವಾಗೆ ಸಖತ್ ಗಿಫ್ಟ್ ಸಿಕ್ಕಿದೆ. ಇದನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ ಈ ಗಿಫ್ಟ್ ಸಿಕ್ಕಿರೋದು ಅವರ ಸೋಲ್​ಮೇಟ್​ನಿಂದ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಈ ಚೈನ್​ಗೆ ಒಂದು ವಿಶೇಷತೆ ಇದೆ.

ಅಭಿಷೇಕ್ ಹಾಗೂ ಅವಿವಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ. ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವಾ ಬಿಡಪ. ಅವರು ಕೂಡ ತಂದೆಯಂತೆ ಫ್ಯಾಷನ್ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಕಾಸ್ಟ್ಯೂಮ್ ಡಿಸೈನರ್ ಆಗಿ ಫ್ಯಾಷನ್ ಕ್ಷೇತ್ರದಲ್ಲಿ ಅವಿವಾ ಬ್ಯುಸಿ ಆಗಿದ್ದಾರೆ. ಇವರಿಗೂ ದೊಡ್ಡ ಅಭಿಮಾನಿ ಬಳಗ ಇದೆ.

ಅಮೆರಿಕದ ಲಾಸ್ ಏಂಜಲೀಸ್​ನಲ್ಲಿರುವ ಅವರ ಗೆಳತಿ ಒಬ್ಬರು ಅವಿವಾಗೆ ಗಿಫ್ಟ್ ಕಳುಹಿಸಿದ್ದಾರೆ. ಚಿನ್ನದ ಸರ ಇದಾಗಿದ್ದು, ಭಾರತ ಹಾಗೂ ಅಮೆರಿಕದ ನಕಾಶೆ ಸರದ ಮೇಲಿದೆ. ಎರಡೂ ದೇಶಗಳ ನಕಾಶೆ ಒಂದೇ ಚೈನ್​​ನಲ್ಲಿರೋದು ಇದರ ವಿಶೇಷತೆ. ಈ ಚೈನ್ ಫೋಟೋ ಸ್ಟೇಟಸ್​ಗೆ ಹಾಕಿಕೊಂಡಿರೋ ಅವಿವಾ, ‘ಅಮೆರಿಕ ಮತ್ತು ಭಾರತ. ಸೋಲ್​ಮೇಟ್ಸ್​. ಐ ಲವ್​ ಯೂ’ ಎಂದು ಅವರ ಫ್ರೆಂಡ್​ನ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಅಭಿಷೇಕ್-ಅವಿವಾ ಮದುವೆಗಾಗಿ ಸಿನಿಮಾ ಮಾದರಿ ಸೆಟ್​ಗಳ ನಿರ್ಮಾಣ, ಭರ್ಜರಿ ತಯಾರಿ

ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಅಂದು ಎಲ್ಲಾ ಸೆಲೆಬ್ರಿಟಿಗಳು ಭಾಗಿ ಆಗಿ ಔತಣ ಸ್ವೀಕರಿಸಲಿದ್ದಾರೆ. ಇಂದು ಆಪ್ತರು ಹಾಗೂ ಕುಟುಂಬದವರು ಮಾತ್ರ ಹಾಜರಿ ಹಾಕುವ ಸಾಧ್ಯತೆ ಇದೆ. ಈಗಾಗಲೇ ಮದುವೆಗೆ ಸಿದ್ಧತೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ