AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chetan Ahimsa: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ ನಟ ‘ಆ ದಿನಗಳು’ ಚೇತನ್ ಅರೆಸ್ಟ್​

Aa Dingalu Chetan Arrest: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B  ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

Chetan Ahimsa: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ ನಟ ‘ಆ ದಿನಗಳು’ ಚೇತನ್ ಅರೆಸ್ಟ್​
Follow us
ರಾಜೇಶ್ ದುಗ್ಗುಮನೆ
|

Updated on:Mar 21, 2023 | 12:09 PM

ತಮ್ಮ ನೇರ ಹೇಳಿಕೆ, ಸಿದ್ಧಾಂತಗಳ ಮೂಲಕ ‘ಆ ದಿನಗಳು ಚೇತನ್​’ (Aa Dingalu Chetan) ಸುದ್ದಿ ಆಗುತ್ತಾ ಇರುತ್ತಾರೆ. ಅವರಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಈಗ ಅವರು ಮತ್ತೆ ಅರೆಸ್ಟ್​ ಆಗಿದ್ದಾರೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು.ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡುವ ಕಾರ್ಯ ಆಗಿದೆ. ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಚೇತನ್ ಅವರನ್ನು ಅರೆಸ್ಟ್ ಮಾಡಲಾಗಿತ್ತು.

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B  ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಸದ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಚೇತನ್ ಟ್ವೀಟ್​ನಲ್ಲೇನಿದೆ?

‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಇದು ಒಂದು ಸುಳ್ಳು.

1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ ಇದು ಒಂದು ಸುಳ್ಳು.

ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ’ ಎಂದು ಅವರು ಬರೆದುಕೊಂಡಿದ್ದರು.

ಕಳೆದ ವರ್ಷವೂ ಅರೆಸ್ಟ್ ಆಗಿದ್ದ ಚೇತನ್..

ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಚೇತನ್ ಕುಮಾರ್ ಅವರು ಅರೆಸ್ಟ್ ಆಗಿದ್ದರು. ಚೇತನ್ ಟ್ವೀಟ್​ ಒಂದನ್ನು ಮಾಡಿದ್ದರು. ಹಿಜಾಬ್​ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್​ ಜಡ್ಜ್​​ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಬಂಧನ ಆಗಿತ್ತು.  ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:39 am, Tue, 21 March 23

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ