AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪೂರ್ಣ AI ಮೂಲಕವೇ ಸಿದ್ಧವಾಯ್ತು ಕನ್ನಡದ ‘ಲವ್ ಯೂ’ ಸಿನಿಮಾ

ಎಲ್ಲ ಕ್ಷೇತ್ರದಲ್ಲಿಯೂ ಎಐ ತಂತ್ರಜ್ಞಾನ ಬಳಕೆ ಆಗುತ್ತಿದೆ. ವಿಶೇಷ ಏನೆಂದರೆ, ಸಂಪೂರ್ಣ ಎಐ ಮೂಲಕವೇ ಕನ್ನಡದಲ್ಲಿ ‘ಲವ್ ಯೂ’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ಕೂಡ ಸಿಕ್ಕಿದೆ. ಸದ್ಯದಲ್ಲೇ ಬಿಡುಗಡೆ ಆಗಲಿರುವ ‘ಲವ್ ಯೂ’ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ..

ಸಂಪೂರ್ಣ AI ಮೂಲಕವೇ ಸಿದ್ಧವಾಯ್ತು ಕನ್ನಡದ ‘ಲವ್ ಯೂ’ ಸಿನಿಮಾ
Love You Movie Poster
ಮದನ್​ ಕುಮಾರ್​
|

Updated on: Apr 15, 2025 | 9:29 PM

Share

ಕೃತಕ ಬುದ್ಧಿಮತ್ತೆ (AI) ಸಹಾಯದಿಂದ ಎಷ್ಟೋ ಕೆಲಸಗಳು ಸುಲಭವಾಗಿವೆ. ಈ ತಂತ್ರಜ್ಞಾನ ಈಗ ಸಿನಿಮಾ ರಂಗದಲ್ಲೂ ಹೇರಳವಾಗಿ ಬಳಕೆ ಆಗುತ್ತಿದೆ. ಅದಕ್ಕೆ ಬೆಸ್ಟ್ ಉದಾಹರಣೆ ಎಂದರೆ ಕನ್ನಡದ ‘ಲವ್ ಯೂ’ ಸಿನಿಮಾ. ಈ ಸಿನಿಮಾವನ್ನು ಸಂಪೂರ್ಣವಾಗಿ ಎಐ ಮೂಲಕ ನಿರ್ಮಾಣ ಮಾಡಲಾಗಿದೆ. ಕನ್ನಡದಲ್ಲಿ (Kannada Film Industry) ಸಂಪೂರ್ಣ ಎಐ ಮೂಲಕ ಸಿದ್ಧವಾಗಿ, ಸೆನ್ಸಾರ್ ಪ್ರಮಾಣ ಪತ್ರ ಪಡೆದಿರುವ ಮೊದಲ ಸಿನಿಮಾ ಎಂಬ ಖ್ಯಾತಿಗೆ ‘ಲವ್ ಯೂ’ (Love You) ಚಿತ್ರ ಪಾತ್ರವಾಗುತ್ತಿದೆ. ಈ ಬಗ್ಗೆ ನಿರ್ಮಾಪಕ, ನಿರ್ದೇಶಕ ಎಸ್. ನರಸಿಂಹ ಮೂರ್ತಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಲವ್ ಯೂ ಸಿನಿಮಾದ ನಿರ್ದೇಶಕರು ಹಾಗೂ ನಿರ್ಮಾಪಕರನ್ನು ಹೊರತುಪಡಿಸಿದರೆ ಉಳಿದ ಎಲ್ಲ ಕೆಲಸಗಳನ್ನು ಎಐ ತಂತ್ರಜ್ಞಾನವೇ ಮಾಡಿದೆ. ಈ ಸಿನಿಮಾದಲ್ಲಿನ ಪ್ರತಿ ಪಾತ್ರ, ಅವುಗಳ ಡೈಲಾಗ್, ಸಂಗೀತ ಸಂಯೋಜನೆ, ಸೌಂಡ್ ಡಿಸೈನ್, ಛಾಯಾಗ್ರಹಣ, ಹಿನ್ನೆಲೆಯಲ್ಲಿ ಬರುವ ಲೊಕೇಷನ್, ಕಲರಿಂಗ್ ಮುಂತಾದ ಎಲ್ಲಾ ಕೆಲಸಗಳಿಗೂ ಎಐ ಬಳಕೆ ಮಾಡಲಾಗಿದೆ. ನೂತನ್ ಎಂಬ ಎಐ ಇಂಜಿನಿಯರ್ ಅವರ ತಾಂತ್ರಿಕ ನಾಯಕತ್ವ ಹಾಗೂ ಸುಂದರ್ ರಾಜ್ ಗುಂಡೂರಾವ್ ಯೋಜನೆಯ ನೇತೃತ್ವದಲ್ಲಿ ಈ ಸಿನಿಮಾ ಸಿದ್ಧವಾಗಿದೆ’ ಎಂದಿದ್ದಾರೆ ಎಸ್. ನರಸಿಂಹ ಮೂರ್ತಿ.

ಈ ಸಿನಿಮಾದ ಅವಧಿ 95 ನಿಮಿಷಗಳು. ಈ ಚಿತ್ರದಲ್ಲಿ 12 ಹಾಡುಗಳಿವೆ. ಆ ಎಲ್ಲ ಹಾಡುಗಳು ಕೂಡ ಎಐ ಮೂಲಕ ಸಂಯೋಜಿಸಲ್ಪಟ್ಟು, ಮುದ್ರಣಗೊಂಡಿವೆ! ‘ಲವ್ ಯು’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿವೆ. ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ‘ಯು/ಎ’ ಪ್ರಮಾಣಪತ್ರ ನೀಡಿದೆ. ‘ಇದು ಬರೀ ಸಿನಿಮಾ ಅಲ್ಲ, ಇದೊಂದು ಕ್ರಾಂತಿ. ಕಥೆ ಹೇಳುವಿಕೆ ಹಾಗೂ ತಂತ್ರಜ್ಞಾನ ಸರಾಗವಾಗಿ ಬೆರೆಯುವ ಹೊಸ ಯುಗವನ್ನು ನಾವು ಪ್ರವೇಶಿಸುತ್ತಿದ್ದೇವೆ’ ಎಂದು ನಿರ್ದೇಶಕ ಮತ್ತು ನಿರ್ಮಾಪಕ ಎಸ್. ನರಸಿಂಹ ಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ಅಗಲಿದ ತಾರೆಯರ ಹೋಲಿ ಸಂಭ್ರಮ, ಎಐ ಕರಾಮತ್ತಿನ ವಿಡಿಯೋ

‘ಕನ್ನಡ ಸಿನಿಮಾ ಜಾಗತಿಕ ಮಟ್ಟದಲ್ಲಿ ಇಂಥದ್ದೊಂದು ಬದಲಾವಣೆಗೆ ಉದಾಹರಣೆ ಆಗಿದೆ. ಭವಿಷ್ಯದಲ್ಲಿ ಈ ಬದಲಾವಣೆಗೆ ಹೊಂದಿಕೊಂಡು ನಮ್ಮ ಚಿತ್ರರಂಗವು ಉಳಿದ ಭಾಷೆಯ ಚಿತ್ರರಂಗಗಳನ್ನು ಮುನ್ನಡೆಸುತ್ತಿದೆ ಎಂಬ ನಂಬಿಕೆ ನಮಗೆ ಇದೆ. ಇಂಥದ್ದೊಂದು ಕೆಲಸ ಮಾಡಿರುವುದಕ್ಕೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದ್ದಾರೆ ಎಸ್. ನರಸಿಂಹ ಮೂರ್ತಿ. ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದಿರುವ ‘ಲವ್ ಯೂ’ ಸಿನಿಮಾವನ್ನು ಮೇ ಅಥವಾ ಜೂನ್ ತಿಂಗಳಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​