‘ಐಂದ್ರಿತಾ ದಂಪತಿ ನೆರೆ‘ಹೊರೆ’ಯವರೇ! ಜೋರು ಧ್ವನಿಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು’

ಬೆಂಗಳೂರು: ಸ್ಯಾಂಡಲ್​ವುಡ್ ನಟ-ನಟಿಯರಿಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಐಂದ್ರತಾ ಹಾಗೂ ದಿಗಂತ್​ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಬಗ್ಗೆ ಪರ ವಿರೋಧ ಹೇಳಿಕೆಗಳು ಹೊರ ಬರುತ್ತಿವೆ. ಈ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ. ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದಲ್ಲ. ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ. ಡ್ರಗ್ಸ್ ಜಾಲದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗಿದು ಗೊತ್ತಿಲ್ಲದ ಸಂಗತಿ. […]

‘ಐಂದ್ರಿತಾ ದಂಪತಿ ನೆರೆ‘ಹೊರೆ’ಯವರೇ! ಜೋರು ಧ್ವನಿಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು’
Edited By:

Updated on: Sep 16, 2020 | 12:04 PM

ಬೆಂಗಳೂರು: ಸ್ಯಾಂಡಲ್​ವುಡ್ ನಟ-ನಟಿಯರಿಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಐಂದ್ರತಾ ಹಾಗೂ ದಿಗಂತ್​ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಬಗ್ಗೆ ಪರ ವಿರೋಧ ಹೇಳಿಕೆಗಳು ಹೊರ ಬರುತ್ತಿವೆ. ಈ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ.

ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದಲ್ಲ. ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ. ಡ್ರಗ್ಸ್ ಜಾಲದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗಿದು ಗೊತ್ತಿಲ್ಲದ ಸಂಗತಿ. ಸಾಮಾಜಿಕ ಸ್ವಾಸ್ಥ್ಯವನ್ನು ಇವೆಲ್ಲ ಹಾಳು ಮಾಡುತ್ತಿದೆ.

ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ನನ್ನ ಮನೆ ಪಕ್ಕಾನೇ ಇಬ್ಬರು ಇದ್ದಾರೆ. ಸಂಭ್ರಮದ ಸದ್ದು ಈ ಹಿಂದೆಯೂ ಕೇಳಿಸಿತ್ತು. ಜೋರು ಧ್ವನಿಗೆ ಮಧ್ಯರಾತ್ರಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ರು ಎಂದು ದಿಗಂತ್ ಮನೆ ರಸ್ತೆಯ ಎದುರಿನ ರಸ್ತೆಯಲ್ಲಿರೋ ನಟ ಸುಚೇಂದ್ರ ಪ್ರಸಾದ್ ಹೇಳಿದ್ರು.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us