AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajaneesh B Loknath: ಅಜನೀಶ್​ ಲೋಕನಾಥ್​ಗೆ ಯಾಕಿಂಥ ಸ್ಥಿತಿ; ಇದು ಹಾಸ್ಟೆಲ್​ ಹುಡುಗರ ಕಿತಾಪತಿ

Hostel Hudugaru Bekagiddare: ಗಾಂಧಿನಗರದಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿ ಪ್ರೋಮೋವನ್ನು ತುಂಬ ಕ್ರಿಯೇಟಿವ್​ ಆಗಿ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ.

Ajaneesh B Loknath: ಅಜನೀಶ್​ ಲೋಕನಾಥ್​ಗೆ ಯಾಕಿಂಥ ಸ್ಥಿತಿ; ಇದು ಹಾಸ್ಟೆಲ್​ ಹುಡುಗರ ಕಿತಾಪತಿ
ಅಜನೀಶ್ ಬಿ. ಲೋಕನಾಥ್ ವೈರಲ್​ ಫೋಟೋ
TV9 Web
| Edited By: |

Updated on:Nov 24, 2022 | 4:53 PM

Share

ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ (Ajaneesh B Loknath) ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಅನೇಕ ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದಾರೆ. ‘ಕಾಂತಾರ’, ‘ವಿಕ್ರಾಂತ್​ ರೋಣ’ ಸಿನಿಮಾದ ಹಾಡುಗಳ ಯಶಸ್ಸಿನ ಹಿಂದಿನ ಸೂತ್ರಧಾರ ಅವರು. ಅಚ್ಚರಿ ಎಂದರೆ ಅಜನೀಶ್​ ಬಿ. ಲೋಕನಾಥ್​ ಅವರನ್ನು ಕಿಡ್ನಾಪ್ (Kidnap)​ ಮಾಡಿರುವ ರೀತಿಯಲ್ಲಿರುವ ಒಂದು ಫೋಟೋ ವೈರಲ್​ ಆಗಿದೆ. ಇದನ್ನು ಒಮ್ಮೆಲೆ ನೋಡಿದರೆ ಫ್ಯಾನ್ಸ್ ಗಾಬರಿ ಆಗಬಹುದು. ಆದರೆ ಫೋಟೋ ಹಿಂದಿನ ಕಹಾನಿ ಬೇರೆಯೇ ಇದೆ. ಇದು ‘ಹಾಸ್ಟೆಲ್​ ಹುಡುಗರ’ ಕಿತಾಪತಿ! ಹೌದು, ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಚಿತ್ರದ ಪ್ರಚಾರಕ್ಕಾಗಿ ಮಾಡಿದ ಪೋಸ್ಟರ್​ ಇದು.

ವಿಶೇಷ ರೀತಿಯಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರಮೋಷನ್​ ಮಾಡಲಾಗುತ್ತಿದೆ. ಅದಕ್ಕೆ ಅಜನೀಶ್​ ಬಿ. ಲೋಕನಾಥ್​ ಅವರು ಕೈ ಜೋಡಿಸಿದ್ದಾರೆ. ಅವರನ್ನು ಉಗ್ರರು ಅಪಹರಿಸಿದ ರೀತಿಯಲ್ಲಿ ಫೋಟೋಶೂಟ್​ ಮಾಡಿಸಲಾಗಿದೆ. ಈ ಹಿಂದೆ ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರತಂಡಕ್ಕೆ ಬೆಂಬಲ ನೀಡಿದ್ದರು. ವಿಶೇಷವಾದ ಪ್ರೋಮೋದಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ನಟಿ ರಮ್ಯಾ ಕೂಡ ಒಂದು ಪ್ರಮೋಷನಲ್​ ವಿಡಿಯೋದಲ್ಲಿ ನಟಿಸಿದ್ದು, ಅದು ವೈರಲ್​ ಆಗಿತ್ತು. ಅದರ ಬೆನ್ನಲ್ಲೇ ಅಜನೀಶ್​ ಲೋಕನಾಥ್​ ಅವರು ಈ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ. ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣ ಆಗಿರುವ ಮೊದಲ ಚಿತ್ರವಿದು. ಆರಂಭದಿಂದಲೂ ಈ ಸಿನಿಮಾದ ಪ್ರೋಮೋಷನಲ್​ ಕಂಟೆಂಟ್​ಗಳು ಗಮನ ಸೆಳೆಯುತ್ತಿವೆ.

ರಂಗಭೂಮಿಯ ಅನೇಕ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಕೆಲವು ಸ್ಟಾರ್ ನಟರು ಅತಿಥಿ ಪಾತ್ರ ಮಾಡಿದ್ದಾರೆ. ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜನವರಿಯಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಪ್ರೋಮೋಗಳ ಮೂಲಕ ಸಖತ್​ ಹೈಪ್​ ಸೃಷ್ಟಿ ಮಾಡಿರುವ ಈ ಚಿತ್ರದ ಮೇಲೆ ಸಿನಿಪ್ರಿಯರಿಗೆ ನಿರೀಕ್ಷೆ ಮೂಡಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಅವರು ಸಂಕಲನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:53 pm, Thu, 24 November 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ