AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajaneesh B Loknath: ಅಜನೀಶ್​ ಲೋಕನಾಥ್​ಗೆ ಯಾಕಿಂಥ ಸ್ಥಿತಿ; ಇದು ಹಾಸ್ಟೆಲ್​ ಹುಡುಗರ ಕಿತಾಪತಿ

Hostel Hudugaru Bekagiddare: ಗಾಂಧಿನಗರದಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿ ಪ್ರೋಮೋವನ್ನು ತುಂಬ ಕ್ರಿಯೇಟಿವ್​ ಆಗಿ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ.

Ajaneesh B Loknath: ಅಜನೀಶ್​ ಲೋಕನಾಥ್​ಗೆ ಯಾಕಿಂಥ ಸ್ಥಿತಿ; ಇದು ಹಾಸ್ಟೆಲ್​ ಹುಡುಗರ ಕಿತಾಪತಿ
ಅಜನೀಶ್ ಬಿ. ಲೋಕನಾಥ್ ವೈರಲ್​ ಫೋಟೋ
TV9 Web
| Edited By: |

Updated on:Nov 24, 2022 | 4:53 PM

Share

ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ (Ajaneesh B Loknath) ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಅನೇಕ ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದಾರೆ. ‘ಕಾಂತಾರ’, ‘ವಿಕ್ರಾಂತ್​ ರೋಣ’ ಸಿನಿಮಾದ ಹಾಡುಗಳ ಯಶಸ್ಸಿನ ಹಿಂದಿನ ಸೂತ್ರಧಾರ ಅವರು. ಅಚ್ಚರಿ ಎಂದರೆ ಅಜನೀಶ್​ ಬಿ. ಲೋಕನಾಥ್​ ಅವರನ್ನು ಕಿಡ್ನಾಪ್ (Kidnap)​ ಮಾಡಿರುವ ರೀತಿಯಲ್ಲಿರುವ ಒಂದು ಫೋಟೋ ವೈರಲ್​ ಆಗಿದೆ. ಇದನ್ನು ಒಮ್ಮೆಲೆ ನೋಡಿದರೆ ಫ್ಯಾನ್ಸ್ ಗಾಬರಿ ಆಗಬಹುದು. ಆದರೆ ಫೋಟೋ ಹಿಂದಿನ ಕಹಾನಿ ಬೇರೆಯೇ ಇದೆ. ಇದು ‘ಹಾಸ್ಟೆಲ್​ ಹುಡುಗರ’ ಕಿತಾಪತಿ! ಹೌದು, ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಚಿತ್ರದ ಪ್ರಚಾರಕ್ಕಾಗಿ ಮಾಡಿದ ಪೋಸ್ಟರ್​ ಇದು.

ವಿಶೇಷ ರೀತಿಯಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರಮೋಷನ್​ ಮಾಡಲಾಗುತ್ತಿದೆ. ಅದಕ್ಕೆ ಅಜನೀಶ್​ ಬಿ. ಲೋಕನಾಥ್​ ಅವರು ಕೈ ಜೋಡಿಸಿದ್ದಾರೆ. ಅವರನ್ನು ಉಗ್ರರು ಅಪಹರಿಸಿದ ರೀತಿಯಲ್ಲಿ ಫೋಟೋಶೂಟ್​ ಮಾಡಿಸಲಾಗಿದೆ. ಈ ಹಿಂದೆ ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರತಂಡಕ್ಕೆ ಬೆಂಬಲ ನೀಡಿದ್ದರು. ವಿಶೇಷವಾದ ಪ್ರೋಮೋದಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ನಟಿ ರಮ್ಯಾ ಕೂಡ ಒಂದು ಪ್ರಮೋಷನಲ್​ ವಿಡಿಯೋದಲ್ಲಿ ನಟಿಸಿದ್ದು, ಅದು ವೈರಲ್​ ಆಗಿತ್ತು. ಅದರ ಬೆನ್ನಲ್ಲೇ ಅಜನೀಶ್​ ಲೋಕನಾಥ್​ ಅವರು ಈ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ. ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣ ಆಗಿರುವ ಮೊದಲ ಚಿತ್ರವಿದು. ಆರಂಭದಿಂದಲೂ ಈ ಸಿನಿಮಾದ ಪ್ರೋಮೋಷನಲ್​ ಕಂಟೆಂಟ್​ಗಳು ಗಮನ ಸೆಳೆಯುತ್ತಿವೆ.

ರಂಗಭೂಮಿಯ ಅನೇಕ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಕೆಲವು ಸ್ಟಾರ್ ನಟರು ಅತಿಥಿ ಪಾತ್ರ ಮಾಡಿದ್ದಾರೆ. ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜನವರಿಯಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಪ್ರೋಮೋಗಳ ಮೂಲಕ ಸಖತ್​ ಹೈಪ್​ ಸೃಷ್ಟಿ ಮಾಡಿರುವ ಈ ಚಿತ್ರದ ಮೇಲೆ ಸಿನಿಪ್ರಿಯರಿಗೆ ನಿರೀಕ್ಷೆ ಮೂಡಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಅವರು ಸಂಕಲನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:53 pm, Thu, 24 November 22

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​