AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajaneesh B Loknath: ಅಜನೀಶ್​ ಲೋಕನಾಥ್​ಗೆ ಯಾಕಿಂಥ ಸ್ಥಿತಿ; ಇದು ಹಾಸ್ಟೆಲ್​ ಹುಡುಗರ ಕಿತಾಪತಿ

Hostel Hudugaru Bekagiddare: ಗಾಂಧಿನಗರದಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತಂಡ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿ ಪ್ರೋಮೋವನ್ನು ತುಂಬ ಕ್ರಿಯೇಟಿವ್​ ಆಗಿ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ.

Ajaneesh B Loknath: ಅಜನೀಶ್​ ಲೋಕನಾಥ್​ಗೆ ಯಾಕಿಂಥ ಸ್ಥಿತಿ; ಇದು ಹಾಸ್ಟೆಲ್​ ಹುಡುಗರ ಕಿತಾಪತಿ
ಅಜನೀಶ್ ಬಿ. ಲೋಕನಾಥ್ ವೈರಲ್​ ಫೋಟೋ
TV9 Web
| Edited By: |

Updated on:Nov 24, 2022 | 4:53 PM

Share

ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ (Ajaneesh B Loknath) ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಅನೇಕ ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದಾರೆ. ‘ಕಾಂತಾರ’, ‘ವಿಕ್ರಾಂತ್​ ರೋಣ’ ಸಿನಿಮಾದ ಹಾಡುಗಳ ಯಶಸ್ಸಿನ ಹಿಂದಿನ ಸೂತ್ರಧಾರ ಅವರು. ಅಚ್ಚರಿ ಎಂದರೆ ಅಜನೀಶ್​ ಬಿ. ಲೋಕನಾಥ್​ ಅವರನ್ನು ಕಿಡ್ನಾಪ್ (Kidnap)​ ಮಾಡಿರುವ ರೀತಿಯಲ್ಲಿರುವ ಒಂದು ಫೋಟೋ ವೈರಲ್​ ಆಗಿದೆ. ಇದನ್ನು ಒಮ್ಮೆಲೆ ನೋಡಿದರೆ ಫ್ಯಾನ್ಸ್ ಗಾಬರಿ ಆಗಬಹುದು. ಆದರೆ ಫೋಟೋ ಹಿಂದಿನ ಕಹಾನಿ ಬೇರೆಯೇ ಇದೆ. ಇದು ‘ಹಾಸ್ಟೆಲ್​ ಹುಡುಗರ’ ಕಿತಾಪತಿ! ಹೌದು, ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಚಿತ್ರದ ಪ್ರಚಾರಕ್ಕಾಗಿ ಮಾಡಿದ ಪೋಸ್ಟರ್​ ಇದು.

ವಿಶೇಷ ರೀತಿಯಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರಮೋಷನ್​ ಮಾಡಲಾಗುತ್ತಿದೆ. ಅದಕ್ಕೆ ಅಜನೀಶ್​ ಬಿ. ಲೋಕನಾಥ್​ ಅವರು ಕೈ ಜೋಡಿಸಿದ್ದಾರೆ. ಅವರನ್ನು ಉಗ್ರರು ಅಪಹರಿಸಿದ ರೀತಿಯಲ್ಲಿ ಫೋಟೋಶೂಟ್​ ಮಾಡಿಸಲಾಗಿದೆ. ಈ ಹಿಂದೆ ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರತಂಡಕ್ಕೆ ಬೆಂಬಲ ನೀಡಿದ್ದರು. ವಿಶೇಷವಾದ ಪ್ರೋಮೋದಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ನಟಿ ರಮ್ಯಾ ಕೂಡ ಒಂದು ಪ್ರಮೋಷನಲ್​ ವಿಡಿಯೋದಲ್ಲಿ ನಟಿಸಿದ್ದು, ಅದು ವೈರಲ್​ ಆಗಿತ್ತು. ಅದರ ಬೆನ್ನಲ್ಲೇ ಅಜನೀಶ್​ ಲೋಕನಾಥ್​ ಅವರು ಈ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ. ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣ ಆಗಿರುವ ಮೊದಲ ಚಿತ್ರವಿದು. ಆರಂಭದಿಂದಲೂ ಈ ಸಿನಿಮಾದ ಪ್ರೋಮೋಷನಲ್​ ಕಂಟೆಂಟ್​ಗಳು ಗಮನ ಸೆಳೆಯುತ್ತಿವೆ.

ರಂಗಭೂಮಿಯ ಅನೇಕ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಕೆಲವು ಸ್ಟಾರ್ ನಟರು ಅತಿಥಿ ಪಾತ್ರ ಮಾಡಿದ್ದಾರೆ. ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜನವರಿಯಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಪ್ರೋಮೋಗಳ ಮೂಲಕ ಸಖತ್​ ಹೈಪ್​ ಸೃಷ್ಟಿ ಮಾಡಿರುವ ಈ ಚಿತ್ರದ ಮೇಲೆ ಸಿನಿಪ್ರಿಯರಿಗೆ ನಿರೀಕ್ಷೆ ಮೂಡಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಅವರು ಸಂಕಲನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:53 pm, Thu, 24 November 22

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ