AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೆದರಿ ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ನಟ ಅಜಯ್​ ರಾವ್​ ಮಾತು

ಪ್ರತ್ಯಕ್ಷದರ್ಶಿ ಫೈಟರ್​ ರಂಜಿತ್ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಸೆನ್ಸೇಶನ್​ ಸೃಷ್ಟಿ ಮಾಡಿತ್ತು. ‘ಘಟನೆ ನಡೆದ ಸ್ಥಳದಿಂದ ಅಜಯ್​ ರಾವ್​ ಅವರು ಕೇವಲ 10-20 ಮೀಟರ್​ ಅಂತರದಲ್ಲೇ ಇದ್ದರು’ ಎಂದಿದ್ದರು ರಂಜಿತ್​. 

‘ನಾನು ಹೆದರಿ ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ನಟ ಅಜಯ್​ ರಾವ್​ ಮಾತು
 ‘ನಾನು ಹೆದರಿಕೊಂಡು ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ಅಜಯ್​ ರಾವ್​ ಮಾತು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 26, 2021 | 5:25 PM

Share

‘ಲವ್​​ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್​​ ವಿವೇಕ್​ ಮೃತಪಟ್ಟ ಘಟನೆಗೆ ಸಂಬಂಧಿಸಿ ನಟ ಅಜಯ್​ ರಾವ್​ ಅವರು ಇಂದು (ಆಗಸ್ಟ್​ 26) ಬಿಡದಿ ಪೊಲೀಸ್ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ. ನಂತರ ಮಾಧ್ಯಮದ ಜತೆ ಮಾತನಾಡಿದ ಅವರು, ‘ದುರಂತ ನಡೆದ ಬಳಿಕ ನಾನು ಎಲ್ಲೂ ಓಡಿಹೋಗಿಲ್ಲ’ ಎಂದಿದ್ದಾರೆ.

ಪ್ರತ್ಯಕ್ಷದರ್ಶಿ ಫೈಟರ್​ ರಂಜಿತ್ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಸೆನ್ಸೇಶನ್​ ಸೃಷ್ಟಿ ಮಾಡಿತ್ತು. ‘ಘಟನೆ ನಡೆದ ಸ್ಥಳದಿಂದ ಅಜಯ್​ ರಾವ್​ ಅವರು ಕೇವಲ 10-20 ಮೀಟರ್​ ಅಂತರದಲ್ಲೇ ಇದ್ದರು’ ಎಂದಿದ್ದರು ರಂಜಿತ್​.  ವಿಚಾರಣೆ ಮುಗಿಸಿ ಮಾಧ್ಯಮದ ಜತೆ ಮಾತನಾಡಿದ ಅಜಯ್​ ರಾವ್​ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಆಸ್ಪತ್ರೆಯಲ್ಲಿರುವವನಿಗೆ ಸುಳ್ಳು ಮಾಹಿತಿ ನೀಡಿ ಹೇಳಿಕೆ ಕೊಡಿಸಲಾಗಿದೆ. ಸೆಟ್​​ನಲ್ಲಿ ನಾನೊಬ್ಬನೇ ಇದ್ದೆನಾ? ಅಲ್ಲಿ ಎಲ್ಲರೂ ಇದ್ದರು. ಸಹಾಯ ಮಾಡಬೇಕು ಅಂದ್ರೆ ಏನು ಮಾಡಬೇಕು? ಯಾವ ರೀತಿ ಸಹಾಯ ಮಾಡಬೇಕು ಹೇಳಿ’ ಎಂದು ಪ್ರಶ್ನೆ ಮಾಡಿದ್ದಾರೆ ಅವರು.

‘ಪೊಲೀಸರು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ. ನಾನು ಹೆದರಿಕೊಂಡು ಕೋರ್ಟ್​​ಗೆ ಅರ್ಜಿಯನ್ನು ಸಲ್ಲಿಸಿಲ್ಲ. ನನ್ನ ನಂಬಿ ನಿರ್ಮಾಪಕರು ನನ್ನ ಮೇಲೆ ಹಣ ಹೂಡಿರುತ್ತಾರೆ. ನಾನು ಹೆದರಿಕೊಂಡು ಎಲ್ಲೂ ಓಡಿ ಹೋಗಿಲ್ಲ’ ಎಂದಿದ್ದಾರೆ ಅಜಯ್​ ರಾವ್​.

ಮಂಗಳವಾರ (ಆಗಸ್ಟ್​ 24) ಬಿಡದಿ ಪೊಲೀಸ್​​ ಠಾಣೆಗೆ ಹಾಜರಾಗಿ ರಚಿತಾ ರಾಮ್​ ವಿಚಾರಣೆ ಎದುರಿಸಿದ್ದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರೇ ರಚಿತಾ ಅವರನ್ನು 45 ನಿಮಿಷಗಳ ಕಾಲ ಪ್ರಶ್ನೆ ಮಾಡಿದ್ದರು. ಪೊಲೀಸರ ವಿಚಾರಣೆ ಬಳಿಕ ರಚಿತಾ ರಾಮ್​ ಪ್ರತಿಕ್ರಿಯೆ ನೀಡಿದ್ದರು. ‘ನನಗೆ ವಿಷಯ ಗೊತ್ತಾಗಿರಲಿಲ್ಲ. ಮಾಧ್ಯಮಗಳಿಂದ ಈ ವಿವರ ಗೊತ್ತಾಯ್ತು. ಫೈಟರ್​​ ಮೃತಪಟ್ಟಿರುವುದು ಅಷ್ಟೇ ನನಗೆ ಗೊತ್ತು. ಘಟನೆ ನಡೆದಾಗ ನಾನು ಅಲ್ಲಿ ಇರಲಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ, ಏನಾಗುತ್ತದೆ ನೋಡೋಣ. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ’ ಎಂದಿದ್ದರು ರಚಿತಾ.

ಇದನ್ನೂ ಓದಿ: ಫೈಟರ್ ಸಾವು ಕೇಸ್: ಬಂಧನ ಭೀತಿಯಿಂದ ‌ನಿರೀಕ್ಷಣಾ ಜಾಮೀನಿಗೆ ಅಜಯ್ ರಾವ್​ ಅರ್ಜಿ

ಬಿಡದಿ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸಿದ ನಟಿ ರಚಿತಾ ರಾಮ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ