AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೆದರಿ ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ನಟ ಅಜಯ್​ ರಾವ್​ ಮಾತು

ಪ್ರತ್ಯಕ್ಷದರ್ಶಿ ಫೈಟರ್​ ರಂಜಿತ್ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಸೆನ್ಸೇಶನ್​ ಸೃಷ್ಟಿ ಮಾಡಿತ್ತು. ‘ಘಟನೆ ನಡೆದ ಸ್ಥಳದಿಂದ ಅಜಯ್​ ರಾವ್​ ಅವರು ಕೇವಲ 10-20 ಮೀಟರ್​ ಅಂತರದಲ್ಲೇ ಇದ್ದರು’ ಎಂದಿದ್ದರು ರಂಜಿತ್​. 

‘ನಾನು ಹೆದರಿ ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ನಟ ಅಜಯ್​ ರಾವ್​ ಮಾತು
 ‘ನಾನು ಹೆದರಿಕೊಂಡು ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ಅಜಯ್​ ರಾವ್​ ಮಾತು
TV9 Web
| Edited By: |

Updated on: Aug 26, 2021 | 5:25 PM

Share

‘ಲವ್​​ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್​​ ವಿವೇಕ್​ ಮೃತಪಟ್ಟ ಘಟನೆಗೆ ಸಂಬಂಧಿಸಿ ನಟ ಅಜಯ್​ ರಾವ್​ ಅವರು ಇಂದು (ಆಗಸ್ಟ್​ 26) ಬಿಡದಿ ಪೊಲೀಸ್ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ. ನಂತರ ಮಾಧ್ಯಮದ ಜತೆ ಮಾತನಾಡಿದ ಅವರು, ‘ದುರಂತ ನಡೆದ ಬಳಿಕ ನಾನು ಎಲ್ಲೂ ಓಡಿಹೋಗಿಲ್ಲ’ ಎಂದಿದ್ದಾರೆ.

ಪ್ರತ್ಯಕ್ಷದರ್ಶಿ ಫೈಟರ್​ ರಂಜಿತ್ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಸೆನ್ಸೇಶನ್​ ಸೃಷ್ಟಿ ಮಾಡಿತ್ತು. ‘ಘಟನೆ ನಡೆದ ಸ್ಥಳದಿಂದ ಅಜಯ್​ ರಾವ್​ ಅವರು ಕೇವಲ 10-20 ಮೀಟರ್​ ಅಂತರದಲ್ಲೇ ಇದ್ದರು’ ಎಂದಿದ್ದರು ರಂಜಿತ್​.  ವಿಚಾರಣೆ ಮುಗಿಸಿ ಮಾಧ್ಯಮದ ಜತೆ ಮಾತನಾಡಿದ ಅಜಯ್​ ರಾವ್​ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಆಸ್ಪತ್ರೆಯಲ್ಲಿರುವವನಿಗೆ ಸುಳ್ಳು ಮಾಹಿತಿ ನೀಡಿ ಹೇಳಿಕೆ ಕೊಡಿಸಲಾಗಿದೆ. ಸೆಟ್​​ನಲ್ಲಿ ನಾನೊಬ್ಬನೇ ಇದ್ದೆನಾ? ಅಲ್ಲಿ ಎಲ್ಲರೂ ಇದ್ದರು. ಸಹಾಯ ಮಾಡಬೇಕು ಅಂದ್ರೆ ಏನು ಮಾಡಬೇಕು? ಯಾವ ರೀತಿ ಸಹಾಯ ಮಾಡಬೇಕು ಹೇಳಿ’ ಎಂದು ಪ್ರಶ್ನೆ ಮಾಡಿದ್ದಾರೆ ಅವರು.

‘ಪೊಲೀಸರು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ. ನಾನು ಹೆದರಿಕೊಂಡು ಕೋರ್ಟ್​​ಗೆ ಅರ್ಜಿಯನ್ನು ಸಲ್ಲಿಸಿಲ್ಲ. ನನ್ನ ನಂಬಿ ನಿರ್ಮಾಪಕರು ನನ್ನ ಮೇಲೆ ಹಣ ಹೂಡಿರುತ್ತಾರೆ. ನಾನು ಹೆದರಿಕೊಂಡು ಎಲ್ಲೂ ಓಡಿ ಹೋಗಿಲ್ಲ’ ಎಂದಿದ್ದಾರೆ ಅಜಯ್​ ರಾವ್​.

ಮಂಗಳವಾರ (ಆಗಸ್ಟ್​ 24) ಬಿಡದಿ ಪೊಲೀಸ್​​ ಠಾಣೆಗೆ ಹಾಜರಾಗಿ ರಚಿತಾ ರಾಮ್​ ವಿಚಾರಣೆ ಎದುರಿಸಿದ್ದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರೇ ರಚಿತಾ ಅವರನ್ನು 45 ನಿಮಿಷಗಳ ಕಾಲ ಪ್ರಶ್ನೆ ಮಾಡಿದ್ದರು. ಪೊಲೀಸರ ವಿಚಾರಣೆ ಬಳಿಕ ರಚಿತಾ ರಾಮ್​ ಪ್ರತಿಕ್ರಿಯೆ ನೀಡಿದ್ದರು. ‘ನನಗೆ ವಿಷಯ ಗೊತ್ತಾಗಿರಲಿಲ್ಲ. ಮಾಧ್ಯಮಗಳಿಂದ ಈ ವಿವರ ಗೊತ್ತಾಯ್ತು. ಫೈಟರ್​​ ಮೃತಪಟ್ಟಿರುವುದು ಅಷ್ಟೇ ನನಗೆ ಗೊತ್ತು. ಘಟನೆ ನಡೆದಾಗ ನಾನು ಅಲ್ಲಿ ಇರಲಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ, ಏನಾಗುತ್ತದೆ ನೋಡೋಣ. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ’ ಎಂದಿದ್ದರು ರಚಿತಾ.

ಇದನ್ನೂ ಓದಿ: ಫೈಟರ್ ಸಾವು ಕೇಸ್: ಬಂಧನ ಭೀತಿಯಿಂದ ‌ನಿರೀಕ್ಷಣಾ ಜಾಮೀನಿಗೆ ಅಜಯ್ ರಾವ್​ ಅರ್ಜಿ

ಬಿಡದಿ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸಿದ ನಟಿ ರಚಿತಾ ರಾಮ್

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ