AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸಿದ ಸಮಸ್ಯೆಗಳೇನು?

ಅಜಯ್ ರಾವ್ ಅವರು ಸಿನಿಮಾ ಯಶಸ್ಸು ಮತ್ತು ವಿಫಲತೆಯ ಹಿಂದಿನ ನಿಜವಾದ ಚಿತ್ರಣವನ್ನು ಬಹಿರಂಗಪಡಿಸಿದ್ದಾರೆ. ಸಿನಿಮಾ ಹಿಟ್ ಆದರೆ ಇಡೀ ತಂಡಕ್ಕೆ ಹೊಗಳಿಕೆ, ಸೋತರೆ ನಟನಿಗೆ ಮಾತ್ರ ದೂಷಣೆ ಎಂಬ ಸಮಸ್ಯೆಯನ್ನು ಅವರು ಎತ್ತಿ ತೋರಿಸಿದ್ದಾರೆ. ಬರಹಗಾರರು ಮತ್ತು ತಾಂತ್ರಿಕ ವರ್ಗದ ಪಾತ್ರವನ್ನು ಅವರು ಒತ್ತಿಹೇಳಿದ್ದಾರೆ ಮತ್ತು ತಮ್ಮ ದೊಡ್ಡ ಸಾಲದ ಬಗ್ಗೆಯೂ ಮಾತನಾಡಿದ್ದಾರೆ.

ಕನ್ನಡ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸಿದ ಸಮಸ್ಯೆಗಳೇನು?
ಅಜಯ್ ರಾವ್
ರಾಜೇಶ್ ದುಗ್ಗುಮನೆ
|

Updated on: Mar 31, 2025 | 7:35 AM

Share

ಸಿನಿಮಾ ಹಿಟ್ ಆದಾಗ ಇಡೀ ತಂಡವನ್ನು ಹೊಗಳಲಾಗುತ್ತದೆ. ಅದೇ ಸಿನಿಮಾ ಸೋತಾಗ ಹೀರೋನ ಬಯ್ಯಲಾಗುತ್ತದೆ ಎಂಬ ಮಾತಿದೆ. ಅನೇಕರು ಇದನ್ನು ಒಪ್ಪಿಕೊಳ್ಳುತ್ತಾರೆ. ಇನ್ನೂ ಕೆಲವರು ಇದನ್ನು ಅಲ್ಲಗಳೆಯುತ್ತಾರೆ. ಈ ಬಗ್ಗೆ ಕನ್ನಡದ ನಟ ಅಜಯ್ ರಾವ್ (Ajay Rao) ಅವರು ಮಾತನಾಡಿದ್ದಾರೆ. ರ‍್ಯಾಪಿಡ್ ರಶ್ಮಿ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಕರಾಳ ಮುಖವನ್ನು ಅವರು ತೆರೆದಿಟ್ಟಿದ್ದಾರೆ. ಅವರ ಹೇಳಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ.

‘ಆರ್ಟಿಸ್ಟ್​​ಗಳ ದುರಂತ ಏನಿರುತ್ತದೆ ಎಂದರೆ ನಾವು ಏನಾದರೂ ಕೇಳಿದರೆ ಎಲ್ಲದರಲ್ಲೂ ಮಧ್ಯೆ ಮೂಗು ತೂರಿಸುತ್ತಾನೆ ಎಂದು ಭಾವಿಸುತ್ತಾರೆ. ನಟ ಏನು ಸಫರ್ ಮಾಡುತ್ತಾ ಇರುತ್ತಾನೆ ಎಂಬುದು ಆತನಿಗೆ ಮಾತ್ರ ಗೊತ್ತಿರುತ್ತದೆ. ಸಿನಿಮಾ ಸೋತಾಗ ಫ್ಲಾಪ್ ಹೀರೋ. ಸಿನಿಮಾ ಹಿಟ್ ಆದಾಗ ಅದಕ್ಕೆ ಸುಮಾರು ಜನ ತಂದೆ ತಾಯಿಯರು ಸಿಗುತ್ತಾರೆ. ಬರಹಗಾರ ಹಾಗೂ ತಾಂತ್ರಿಕ ವರ್ಗದವರ ಮೇಲೆ ಸಿನಿಮಾ ನಿಂತಿದೆ’ ಎಂದಿದ್ದಾರೆ ಅಜಯ್ ರಾವ್.

ಇದನ್ನೂ ಓದಿ
Image
ಗಳಿಕೆಯಲ್ಲಿ ಮೊದಲ ದಿನವೇ ಮಕಾಡೆ ಮಲಗಿದ ‘ಸಿಕಂದರ್’
Image
ಮೊದಲ ದಿನವೇ ಸಿಕಂದರ್ ಸಿನಿಮಾ ಲೀಕ್; ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಶಾಕ್
Image
‘ಸಿಖಂಧರ್’ ಸಿನಿಮಾ ನೋಡಿದ ಪ್ರೇಕ್ಷಕರು ನೀಡಿದ ತೀರ್ಪೇನು?
Image
ಐಶಾರಾಮಿ ಕಾರು ಖರೀದಿ ಮಾಡಿದ ರಶ್ಮಿಕಾ ಮಂದಣ್ಣ, ಬೆಲೆ ಎಷ್ಟು ಕೋಟಿ?

ಇದನ್ನೂ ಓದಿ: ಒಂದು ಕಾಲದಲ್ಲಿ ಬೇಡಿಕೆಯ ಹೀರೋ ಆಗಿದ್ದ ಅಜಯ್​ ರಾವ್​ಗೆ ಈಗ ಕೋಟಿ ಕೋಟಿ ರೂಪಾಯಿ ಸಾಲ

‘ಸಿನಿಮಾ ಗೆದ್ದಿದೆ ಎಂದರೆ ಆ ಕ್ರೆಡಿಟ್​ನ ನಾನು ಬರಹಗಾರ ಹಾಗೂ ನಿರ್ದೇಶಕನಿಗೆ ಕೊಡುತ್ತೇನೆ. ಏಕೆಂದರೆ ನಾನು ಫ್ಲಾಪ್ ಸಿನಿಮಾಗೂ ಅಷ್ಟೇ ಎಫರ್ಟ್ ಹಾಕಿರುತ್ತೇನೆ, ಗೆದ್ದ ಸಿನಿಮಾಗೂ ಅಷ್ಟೇ ಎಫರ್ಟ್ ಹಾಕಿರುತ್ತೇನೆ. ಅವನ ಬರವಣಿಗೆ, ನಿರ್ದೇಶಕನ ಎಫರ್ಟ್​, ನಿರ್ಮಾಪಕ ಹಣ ಹಾಕಿದ್ದರಿಂದ ಸಿನಿಮಾ ಗೆದ್ದಿದೆ. ನನ್ನ ಎಫರ್ಟ್ ಸಿನಿಮಾದಲ್ಲಿ ಒಂದೇ ರೀತಿ ಇರುತ್ತದೆ. ಕಥೆನ, ಬರಹಗಾರನ ನಂಬಬೇಕು’ ಎಂದು ಅವರು ಹೇಳಿದ್ದಾರೆ.

ಅಜಯ್ ರಾವ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ಅಷ್ಟು ಅಗ್ರೆಸ್ಸಿವ್ ಆಗಿ ಸಿನಿಮಾಗಳನ್ನು ಮಾಡುತ್ತಿಲ್ಲ. ಅದಕ್ಕೆ ಕಾರಣವನ್ನು ಅವರು ವಿವರಿಸಿಲ್ಲ. ಇನ್ನು ಅಜಯ್ ರಾವ್ ಅವರು ತಮಗೆ ಕೋಟಿ ಕೋಟಿ ರೂಪಾಯಿ ಸಾಲ ಇದೆ ಎಂದು ಹೇಳಿಕೊಂಡಿದ್ದಾರೆ. ಈ ಸಾಲ ಹೇಗಾಯಿತು, ಏಕಾಯಿತು ಎಂಬುದನ್ನು ಅವರು ವಿವರಿಸಿಲ್ಲ. ಅಜಯ್ ರಾವ್ ಅವರು ಸದ್ಯ ‘ಯುದ್ಧಕಾಂಡ’ ಹೆಸರಿನ ಸಿನಿಮಾ ಮಾಡಿದ್ದಾರೆ. ಪವನ್ ಭಟ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​