ಆಂಬುಲೆನ್ಸ್ ಡ್ರೈವರ್ ಕಹಾನಿ; ‘ನಾಟ್ ಔಟ್’ ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್

ಅಜಯ ಪೃಥ್ವಿ, ರಚನಾ ಇಂದರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ‘ನಾಟ್​ ಔಟ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್​ ಬಂದಿದೆ. ವಾಸುಕಿ ವೈಭವ್ ಹಾಡಿದ ಶೀರ್ಷಿಕೆ ಗೀತೆ ಈಗಾಗಲೇ ಬಿಡುಗಡೆ ಆಗಿದೆ. ಜ್ಯೂಡಾ ಸ್ಯಾಂಡಿ ಅವರ ಸಂಗೀತ ಈ ಸಿನಿಮಾಗಿದೆ. ಅದಿತಿ ಸಾಗರ್​ ಹಾಡಿದ ಸಾಂಗ್​ ಕೂಡ ಬಿಡುಗಡೆಗೆ ಸಜ್ಜಾಗಿದೆ.

ಆಂಬುಲೆನ್ಸ್ ಡ್ರೈವರ್ ಕಹಾನಿ; ‘ನಾಟ್ ಔಟ್’ ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್
ರಚನಾ ಇಂದರ್, ಅಜಯ ಪೃಥ್ವಿ
Follow us
|

Updated on: Jun 25, 2024 | 10:33 PM

ಕನ್ನಡದಲ್ಲಿ ಸ್ಟಾರ್​ ನಟರ ಸಿನಿಮಾಗಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬ ಮಾತು ಒಂದು ಕಡೆ ಇದೆ. ಆದರೆ ಹೊಸ ಪ್ರತಿಭೆಗಳ ಸಿನಿಮಾಗಳು ಸಾಲು ಸಾಲಾಗಿ ಬರುತ್ತಿವೆ. ಡಿಫರೆಂಟ್​ ಆದ ಕಥಾಹಂದರಗಳು ಇರುವಂತಹ ಸಿನಿಮಾಗಳು ಸಿದ್ಧವಾಗುತ್ತಿವೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ನಾಟ್​ ಔಟ್​’ (Not Out) ಸಿನಿಮಾ. ಈ ಸಿನಿಮಾದಲ್ಲಿ ಆಂಬ್ಯುಲೆನ್ಸ್​ ಡ್ರೈವರ್​ ಕಥೆ ಇರಲಿದೆ. ಈ ಚಿತ್ರದಲ್ಲಿ ಅಜಯ ಪೃಥ್ವಿ (Ajaya Prithvi) ಅವರು ಹೀರೋ ಆಗಿ ನಟಿಸಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ವಿಶೇಷ ಟೀಸರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಅವರ ಹುಟ್ಟುಹಬ್ಬಕ್ಕೆ ವಿಶ್​ ಮಾಡಿದ್ದಾರೆ ಚಿತ್ರತಂಡದವರು. ಅಜಯ ಪೃಥ್ವಿ ಜೊತೆ ರಚನಾ ಇಂದರ್ (Rachana Inder), ರವಿಶಂಕರ್, ಕಾಕ್ರೋಚ್ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಪ್ರಶಾಂತ್ ಸಿದ್ದಿ, ಗೋವಿಂದೇಗೌಡ, ಸಲ್ಮಾನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ನಾನ್​ ಔಟ್​’ ಸಿನಿಮಾವನ್ನು ‘ರಾಷ್ಟ್ರಕೂಟ ಪಿಕ್ಚರ್ಸ್’ ಸಂಸ್ಥೆಯ ಮೂಲಕ ರವಿಕುಮಾರ್ ಮತ್ತು ಶಂಶುದ್ದೀನ್ ಅವರು ನಿರ್ಮಿಸಿದ್ದಾರೆ. ಅಂಬರೀಶ್ ಎಂ. ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜಯ್ ಪೃಥ್ವಿ ಅವರು ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅವರ ಹುಟ್ಟುಹಬ್ಬವನ್ನು ಖುಷಿಯಿಂದ ಆಚರಿಸಲಾಗಿದೆ. ಈ ಸಂಭ್ರಮವನ್ನು ಹೆಚ್ಚಿಸಲು ವಿಶೇಷವಾದ ಟೀಸರ್ ಮತ್ತು ಪೋಸ್ಟರ್ ರಿಲೀಸ್​ ಮಾಡಲಾಗಿದೆ. ಈ ಸಿನಿಮಾದಲ್ಲಿ ಡಾರ್ಕ್ ಹ್ಯೂಮರ್ ಕಥಾಹಂದರ ಇರಲಿದೆ. ಜುಲೈ 4ರಂದು ‘ನಾಟ್ ಔಟ್’ ಸಿನಿಮಾದ ಟ್ರೇಲರ್ ರಿಲೀಸ್​ ಆಗಲಿದೆ.

ಪ್ರಚಾರ ಕಾರ್ಯದಲ್ಲಿ ‘ನಾಟ್​ ಔಟ್​’ ಸಿನಿಮಾ ತಂಡ ನಿರತವಾಗಿದೆ. ಇತ್ತೀಚೆಗೆ ವಾಸುಕಿ ವೈಭವ್ ಅವರು ಹಾಡಿದ ಟೈಟಲ್​ ಟ್ರ್ಯಾಕ್​ ಬಿಡುಗಡೆ ಮಾಡಲಾಯಿತು. ಅದನ್ನು ಕೇಳಿ ಸಿನಿಪ್ರಿಯರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಈಗ ಇದೇ ಸಿನಿಮಾಗಾಗಿ ಅದಿತಿ ಸಾಗರ್ ಹಾಡಿರುವ ಹೊಸ ಹಾಡನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ಜೂನ್ 27ರಂದು ‘ದುಃಖ ದುಗುಡಗಳ..’ ಎಂಬ ಈ ಸಾಂಗ್​ ರಿಲೀಸ್​ ಆಗಲಿದೆ.

ಇದನ್ನೂ ಓದಿ: ‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಮತ್ತೊಂದು ಸಿನಿಮಾ; ಈ ಬಾರಿಯೂ ಹಾರರ್​

‘ನಾಟ್​ ಔಟ್​’ ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ದುಃಖ ದುಗುಡಗಳ..’ ಗೀತೆಗೆ ನಿರ್ದೇಶಕ ಅಂಬರೀಷ್​ ಅವರೇ ಸಾಹಿತ್ಯ ರಚಿಸಿದ್ದಾರೆ. ತಮ್ಮ ಜೀವನವನ್ನೇ ಪಣಕ್ಕಿಟ್ಟು ಮತ್ತೊಬ್ಬರ ಜೀವ ಉಳಿಸುವಂತಹ ಕೆಲಸ ಮಾಡುವ ಆಂಬ್ಯುಲೆನ್ಸ್ ಡ್ರೈವರ್​ಗಳ ಜೀವನದ ಬಗ್ಗೆ ವಿವರಿಸುವಂತಹ ಹಾಡು ಇದಾಗಿರಲಿದೆ. ಈ ಹಾಡಿನ ಬಗ್ಗೆ ನಿರ್ದೇಶಕರು ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ