AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್ ಡ್ರೈವರ್ ಕಹಾನಿ; ‘ನಾಟ್ ಔಟ್’ ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್

ಅಜಯ ಪೃಥ್ವಿ, ರಚನಾ ಇಂದರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ‘ನಾಟ್​ ಔಟ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್​ ಬಂದಿದೆ. ವಾಸುಕಿ ವೈಭವ್ ಹಾಡಿದ ಶೀರ್ಷಿಕೆ ಗೀತೆ ಈಗಾಗಲೇ ಬಿಡುಗಡೆ ಆಗಿದೆ. ಜ್ಯೂಡಾ ಸ್ಯಾಂಡಿ ಅವರ ಸಂಗೀತ ಈ ಸಿನಿಮಾಗಿದೆ. ಅದಿತಿ ಸಾಗರ್​ ಹಾಡಿದ ಸಾಂಗ್​ ಕೂಡ ಬಿಡುಗಡೆಗೆ ಸಜ್ಜಾಗಿದೆ.

ಆಂಬುಲೆನ್ಸ್ ಡ್ರೈವರ್ ಕಹಾನಿ; ‘ನಾಟ್ ಔಟ್’ ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್
ರಚನಾ ಇಂದರ್, ಅಜಯ ಪೃಥ್ವಿ
ಮದನ್​ ಕುಮಾರ್​
|

Updated on: Jun 25, 2024 | 10:33 PM

Share

ಕನ್ನಡದಲ್ಲಿ ಸ್ಟಾರ್​ ನಟರ ಸಿನಿಮಾಗಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬ ಮಾತು ಒಂದು ಕಡೆ ಇದೆ. ಆದರೆ ಹೊಸ ಪ್ರತಿಭೆಗಳ ಸಿನಿಮಾಗಳು ಸಾಲು ಸಾಲಾಗಿ ಬರುತ್ತಿವೆ. ಡಿಫರೆಂಟ್​ ಆದ ಕಥಾಹಂದರಗಳು ಇರುವಂತಹ ಸಿನಿಮಾಗಳು ಸಿದ್ಧವಾಗುತ್ತಿವೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ನಾಟ್​ ಔಟ್​’ (Not Out) ಸಿನಿಮಾ. ಈ ಸಿನಿಮಾದಲ್ಲಿ ಆಂಬ್ಯುಲೆನ್ಸ್​ ಡ್ರೈವರ್​ ಕಥೆ ಇರಲಿದೆ. ಈ ಚಿತ್ರದಲ್ಲಿ ಅಜಯ ಪೃಥ್ವಿ (Ajaya Prithvi) ಅವರು ಹೀರೋ ಆಗಿ ನಟಿಸಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ವಿಶೇಷ ಟೀಸರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಅವರ ಹುಟ್ಟುಹಬ್ಬಕ್ಕೆ ವಿಶ್​ ಮಾಡಿದ್ದಾರೆ ಚಿತ್ರತಂಡದವರು. ಅಜಯ ಪೃಥ್ವಿ ಜೊತೆ ರಚನಾ ಇಂದರ್ (Rachana Inder), ರವಿಶಂಕರ್, ಕಾಕ್ರೋಚ್ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಪ್ರಶಾಂತ್ ಸಿದ್ದಿ, ಗೋವಿಂದೇಗೌಡ, ಸಲ್ಮಾನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ನಾನ್​ ಔಟ್​’ ಸಿನಿಮಾವನ್ನು ‘ರಾಷ್ಟ್ರಕೂಟ ಪಿಕ್ಚರ್ಸ್’ ಸಂಸ್ಥೆಯ ಮೂಲಕ ರವಿಕುಮಾರ್ ಮತ್ತು ಶಂಶುದ್ದೀನ್ ಅವರು ನಿರ್ಮಿಸಿದ್ದಾರೆ. ಅಂಬರೀಶ್ ಎಂ. ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜಯ್ ಪೃಥ್ವಿ ಅವರು ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅವರ ಹುಟ್ಟುಹಬ್ಬವನ್ನು ಖುಷಿಯಿಂದ ಆಚರಿಸಲಾಗಿದೆ. ಈ ಸಂಭ್ರಮವನ್ನು ಹೆಚ್ಚಿಸಲು ವಿಶೇಷವಾದ ಟೀಸರ್ ಮತ್ತು ಪೋಸ್ಟರ್ ರಿಲೀಸ್​ ಮಾಡಲಾಗಿದೆ. ಈ ಸಿನಿಮಾದಲ್ಲಿ ಡಾರ್ಕ್ ಹ್ಯೂಮರ್ ಕಥಾಹಂದರ ಇರಲಿದೆ. ಜುಲೈ 4ರಂದು ‘ನಾಟ್ ಔಟ್’ ಸಿನಿಮಾದ ಟ್ರೇಲರ್ ರಿಲೀಸ್​ ಆಗಲಿದೆ.

ಪ್ರಚಾರ ಕಾರ್ಯದಲ್ಲಿ ‘ನಾಟ್​ ಔಟ್​’ ಸಿನಿಮಾ ತಂಡ ನಿರತವಾಗಿದೆ. ಇತ್ತೀಚೆಗೆ ವಾಸುಕಿ ವೈಭವ್ ಅವರು ಹಾಡಿದ ಟೈಟಲ್​ ಟ್ರ್ಯಾಕ್​ ಬಿಡುಗಡೆ ಮಾಡಲಾಯಿತು. ಅದನ್ನು ಕೇಳಿ ಸಿನಿಪ್ರಿಯರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಈಗ ಇದೇ ಸಿನಿಮಾಗಾಗಿ ಅದಿತಿ ಸಾಗರ್ ಹಾಡಿರುವ ಹೊಸ ಹಾಡನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ಜೂನ್ 27ರಂದು ‘ದುಃಖ ದುಗುಡಗಳ..’ ಎಂಬ ಈ ಸಾಂಗ್​ ರಿಲೀಸ್​ ಆಗಲಿದೆ.

ಇದನ್ನೂ ಓದಿ: ‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಮತ್ತೊಂದು ಸಿನಿಮಾ; ಈ ಬಾರಿಯೂ ಹಾರರ್​

‘ನಾಟ್​ ಔಟ್​’ ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ದುಃಖ ದುಗುಡಗಳ..’ ಗೀತೆಗೆ ನಿರ್ದೇಶಕ ಅಂಬರೀಷ್​ ಅವರೇ ಸಾಹಿತ್ಯ ರಚಿಸಿದ್ದಾರೆ. ತಮ್ಮ ಜೀವನವನ್ನೇ ಪಣಕ್ಕಿಟ್ಟು ಮತ್ತೊಬ್ಬರ ಜೀವ ಉಳಿಸುವಂತಹ ಕೆಲಸ ಮಾಡುವ ಆಂಬ್ಯುಲೆನ್ಸ್ ಡ್ರೈವರ್​ಗಳ ಜೀವನದ ಬಗ್ಗೆ ವಿವರಿಸುವಂತಹ ಹಾಡು ಇದಾಗಿರಲಿದೆ. ಈ ಹಾಡಿನ ಬಗ್ಗೆ ನಿರ್ದೇಶಕರು ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ