ಆಂಬುಲೆನ್ಸ್ ಡ್ರೈವರ್ ಕಹಾನಿ; ‘ನಾಟ್ ಔಟ್’ ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್

ಅಜಯ ಪೃಥ್ವಿ, ರಚನಾ ಇಂದರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ‘ನಾಟ್​ ಔಟ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್​ ಬಂದಿದೆ. ವಾಸುಕಿ ವೈಭವ್ ಹಾಡಿದ ಶೀರ್ಷಿಕೆ ಗೀತೆ ಈಗಾಗಲೇ ಬಿಡುಗಡೆ ಆಗಿದೆ. ಜ್ಯೂಡಾ ಸ್ಯಾಂಡಿ ಅವರ ಸಂಗೀತ ಈ ಸಿನಿಮಾಗಿದೆ. ಅದಿತಿ ಸಾಗರ್​ ಹಾಡಿದ ಸಾಂಗ್​ ಕೂಡ ಬಿಡುಗಡೆಗೆ ಸಜ್ಜಾಗಿದೆ.

ಆಂಬುಲೆನ್ಸ್ ಡ್ರೈವರ್ ಕಹಾನಿ; ‘ನಾಟ್ ಔಟ್’ ಹೀರೋ ಜನ್ಮದಿನಕ್ಕೆ ವಿಶೇಷ ಟೀಸರ್
ರಚನಾ ಇಂದರ್, ಅಜಯ ಪೃಥ್ವಿ

Updated on: Jun 25, 2024 | 10:33 PM

ಕನ್ನಡದಲ್ಲಿ ಸ್ಟಾರ್​ ನಟರ ಸಿನಿಮಾಗಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬ ಮಾತು ಒಂದು ಕಡೆ ಇದೆ. ಆದರೆ ಹೊಸ ಪ್ರತಿಭೆಗಳ ಸಿನಿಮಾಗಳು ಸಾಲು ಸಾಲಾಗಿ ಬರುತ್ತಿವೆ. ಡಿಫರೆಂಟ್​ ಆದ ಕಥಾಹಂದರಗಳು ಇರುವಂತಹ ಸಿನಿಮಾಗಳು ಸಿದ್ಧವಾಗುತ್ತಿವೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ನಾಟ್​ ಔಟ್​’ (Not Out) ಸಿನಿಮಾ. ಈ ಸಿನಿಮಾದಲ್ಲಿ ಆಂಬ್ಯುಲೆನ್ಸ್​ ಡ್ರೈವರ್​ ಕಥೆ ಇರಲಿದೆ. ಈ ಚಿತ್ರದಲ್ಲಿ ಅಜಯ ಪೃಥ್ವಿ (Ajaya Prithvi) ಅವರು ಹೀರೋ ಆಗಿ ನಟಿಸಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ವಿಶೇಷ ಟೀಸರ್​ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಅವರ ಹುಟ್ಟುಹಬ್ಬಕ್ಕೆ ವಿಶ್​ ಮಾಡಿದ್ದಾರೆ ಚಿತ್ರತಂಡದವರು. ಅಜಯ ಪೃಥ್ವಿ ಜೊತೆ ರಚನಾ ಇಂದರ್ (Rachana Inder), ರವಿಶಂಕರ್, ಕಾಕ್ರೋಚ್ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಪ್ರಶಾಂತ್ ಸಿದ್ದಿ, ಗೋವಿಂದೇಗೌಡ, ಸಲ್ಮಾನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ನಾನ್​ ಔಟ್​’ ಸಿನಿಮಾವನ್ನು ‘ರಾಷ್ಟ್ರಕೂಟ ಪಿಕ್ಚರ್ಸ್’ ಸಂಸ್ಥೆಯ ಮೂಲಕ ರವಿಕುಮಾರ್ ಮತ್ತು ಶಂಶುದ್ದೀನ್ ಅವರು ನಿರ್ಮಿಸಿದ್ದಾರೆ. ಅಂಬರೀಶ್ ಎಂ. ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜಯ್ ಪೃಥ್ವಿ ಅವರು ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅವರ ಹುಟ್ಟುಹಬ್ಬವನ್ನು ಖುಷಿಯಿಂದ ಆಚರಿಸಲಾಗಿದೆ. ಈ ಸಂಭ್ರಮವನ್ನು ಹೆಚ್ಚಿಸಲು ವಿಶೇಷವಾದ ಟೀಸರ್ ಮತ್ತು ಪೋಸ್ಟರ್ ರಿಲೀಸ್​ ಮಾಡಲಾಗಿದೆ. ಈ ಸಿನಿಮಾದಲ್ಲಿ ಡಾರ್ಕ್ ಹ್ಯೂಮರ್ ಕಥಾಹಂದರ ಇರಲಿದೆ. ಜುಲೈ 4ರಂದು ‘ನಾಟ್ ಔಟ್’ ಸಿನಿಮಾದ ಟ್ರೇಲರ್ ರಿಲೀಸ್​ ಆಗಲಿದೆ.

ಪ್ರಚಾರ ಕಾರ್ಯದಲ್ಲಿ ‘ನಾಟ್​ ಔಟ್​’ ಸಿನಿಮಾ ತಂಡ ನಿರತವಾಗಿದೆ. ಇತ್ತೀಚೆಗೆ ವಾಸುಕಿ ವೈಭವ್ ಅವರು ಹಾಡಿದ ಟೈಟಲ್​ ಟ್ರ್ಯಾಕ್​ ಬಿಡುಗಡೆ ಮಾಡಲಾಯಿತು. ಅದನ್ನು ಕೇಳಿ ಸಿನಿಪ್ರಿಯರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಈಗ ಇದೇ ಸಿನಿಮಾಗಾಗಿ ಅದಿತಿ ಸಾಗರ್ ಹಾಡಿರುವ ಹೊಸ ಹಾಡನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ಜೂನ್ 27ರಂದು ‘ದುಃಖ ದುಗುಡಗಳ..’ ಎಂಬ ಈ ಸಾಂಗ್​ ರಿಲೀಸ್​ ಆಗಲಿದೆ.

ಇದನ್ನೂ ಓದಿ: ‘ನಾ ನಿನ್ನ ಬಿಡಲಾರೆ’ ಶೀರ್ಷಿಕೆಯಲ್ಲಿ ಮತ್ತೊಂದು ಸಿನಿಮಾ; ಈ ಬಾರಿಯೂ ಹಾರರ್​

‘ನಾಟ್​ ಔಟ್​’ ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ದುಃಖ ದುಗುಡಗಳ..’ ಗೀತೆಗೆ ನಿರ್ದೇಶಕ ಅಂಬರೀಷ್​ ಅವರೇ ಸಾಹಿತ್ಯ ರಚಿಸಿದ್ದಾರೆ. ತಮ್ಮ ಜೀವನವನ್ನೇ ಪಣಕ್ಕಿಟ್ಟು ಮತ್ತೊಬ್ಬರ ಜೀವ ಉಳಿಸುವಂತಹ ಕೆಲಸ ಮಾಡುವ ಆಂಬ್ಯುಲೆನ್ಸ್ ಡ್ರೈವರ್​ಗಳ ಜೀವನದ ಬಗ್ಗೆ ವಿವರಿಸುವಂತಹ ಹಾಡು ಇದಾಗಿರಲಿದೆ. ಈ ಹಾಡಿನ ಬಗ್ಗೆ ನಿರ್ದೇಶಕರು ಸಖತ್​ ಭರವಸೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us