AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಂದು ಒಂದೇ ವರ್ಷಕ್ಕೆ ಡಿವೋರ್ಸ್ ಕಣೋ’; ವಿವಾಹದ ಬಳಿಕ ಅಜಯ್ ರಾವ್ ಕೇಳಿದ ಮಾತಿದು

ಅಜಯ್ ರಾವ್ ಅವರು ತಮ್ಮ ಯಶಸ್ವಿ ಮತ್ತು ವೈಫಲ್ಯದ ಪ್ರಯಾಣದ ಕುರಿತು ಮಾತನಾಡಿದ್ದಾರೆ. ಮುಹೂರ್ತದ ನಂಬಿಕೆಗಳ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆಯೂ ಹೇಳಿದ್ದಾರೆ. ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಅನುಭವಿಸಿದ ಏರಿಳಿತಗಳನ್ನು ಹೇಗೆ ನಿಭಾಯಿಸಿದೆ ಎಂಬುದನ್ನು ಅಜಯ್ ರಾವ್ ಅವರು ವಿವರಿಸಿದ್ದಾರೆ.

‘ನಿಂದು ಒಂದೇ ವರ್ಷಕ್ಕೆ ಡಿವೋರ್ಸ್ ಕಣೋ’; ವಿವಾಹದ ಬಳಿಕ ಅಜಯ್ ರಾವ್ ಕೇಳಿದ ಮಾತಿದು
ಅಜಯ್ ರಾವ್
ರಾಜೇಶ್ ದುಗ್ಗುಮನೆ
|

Updated on: Apr 01, 2025 | 7:32 AM

Share

ಅಜಯ್ ರಾವ್ (Ajay Rao) ಅವರಿಗೆ ಒಂದು ಕಾಲದಲ್ಲಿ ದೊಡ್ಡ ಯಶಸ್ಸು ಸಿಕ್ಕಿತ್ತು. ಆದರೆ, ನಂತರ ಅವರು ಸಾಲು ಸಾಲು ಸೋಲು ಕಂಡರು. ಗೆಲುವು ಕಂಡಗಾ ಅದನ್ನಯ ತಲೆಗೆ ಏರಿಸಿಕೊಂಡಿದ್ದ ಅವರು ನಂತರ ಸೋಲಿನ ಪೆಟ್ಟು ಬಿದ್ದ ಮೇಲೆ ಕಲಿತರು. ತಮ್ಮನ್ನು ತಾವು ತಿದ್ದುಕೊಂಡರು. ಈಗ ಅವರು ಸೋಲು-ಗೆಲುವನ್ನು ಸರಿಯಾಗಿ ಸ್ವೀಕರಿಸುತ್ತಿದ್ದಾರೆ. ಅಜಯ್ ರಾವ್ ಅವರು ಕೆಟ್ಟ ಮುಹೂರ್ತ ಎಂಬುದನ್ನು ನೋಡುವುದಿಲ್ಲ. ಅವರು ಆರಂಭದಲ್ಲಿ ಸಾಕಷ್ಟು ಕೆಟ್ಟ ಮಾತುಗಳನ್ನು ಕೂಡ ಕೇಳಿದ್ದರು. ಈ ಬಗ್ಗೆ ರ‍್ಯಾಪಿಡ್ ರಶ್ಮಿ ಮಾತನಾಡಿದ್ದಾರೆ.

‘ನಾನು ಶಾಸ್ತ್ರಗಳನ್ನು ನಂಬುತ್ತೇನೆ. ಆದರೆ, ಫಾಲೋ ಮಾಡಲ್ಲ. ಇದು ಕೆಟ್ಟ ಮುಹೂರ್ತ ಹೋಗಬೇಡ ಎಂದು ತಾಯಿ ಹೇಳಿದರೆ ನಾನು ಹೋಗಲ್ಲ. ಯಾರ ಮುಖಾಂತರವಾದರೂ ಗೊತ್ತಾದರೆ ನಾನು ಪಾಲಿಸುತ್ತೇನೆ. ನಾನಾಗಿಯೇ ಹುಡುಕಿಕೊಂಡು ಹೋಗಿ ಮಾಡುವವನಲ್ಲ’ ಎಂದು ಅಜಯ್ ರಾವ್ ಅವರು ವಿವರಿಸಿದ್ದಾರೆ.

‘ನಾನು ಮದುವೆ ಆಗಿದ್ದು, ನನ್ನ ಪ್ರೊಡಕ್ಷನ್ ಮೂಲಕ ಬಂದ ಕೃಷ್ಣಲೀಲಾ ಮಾಡಿದ್ದು ತಪ್ಪಾದ ಮುಹೂರ್ತದಲ್ಲಿ. ನನ್ನ ಯುದ್ಧಕಾಂಡ ಸಿನಿಮಾ ಮಾಡಿದ್ದು ಯಾವ ಮುಹೂರ್ತ ಅನ್ನೋದು ಗೊತ್ತಿಲ್ಲ. ಸಿನಿಮಾ ಡಿಸಾಸ್ಟರ್ ಕಣೋ ಅಂದಿದ್ರು. ತಪ್ಪಾದ ಮುಹೂರ್ತದಲ್ಲಿ ವಿವಾಹ ಆಗಿದ್ದೀಯಾ ಹೀಗಾಗಿ, ನಿನ್ನ ಮದುವೆ ಒಂದು ವರ್ಷವೂ ಇರಲ್ಲ, ಡಿವೋರ್ಸ್​ ಆಗುತ್ತದೆ ಎಂದಿದ್ದರು. ನಾನು ಯಾವ ಮುಹೂರ್ತವನ್ನೂ ನೋಡಿಲ್ಲ. ನನಗೆ ಆಸ್ಟ್ರಾಲಜಿ ಬರುತ್ತದೆ. ಕೆಲಸ ಮಾಡಿದ ಬಳಿಕ ನೋಡಿದಾಗ ಅದು ತಪ್ಪಾದ ಮುಹೂರ್ತ ಅಂತ ಗೊತ್ತಾಯ್ತು. ಕೃಷ್ಣಾರ್ಪಣಮಸ್ತು ಅಂದೆ ಅಷ್ಟೇ. ಅವನೇ ಮಾಡಿಸ್ತಾ ಇದಾನೆ’ ಎಂದಿದ್ದಾರೆ ಕೃಷ್ಣ ರಾವ್.

ಇದನ್ನೂ ಓದಿ
Image
ಸಿಕಂದರ್ ಗಳಿಕೆಯಲ್ಲಿ ಏರಿಕೆ; ಆದರೂ ನಿಂತಿಲ್ಲ ಸಲ್ಮಾನ್ ಖಾನ್ ಸಿನಿಮಾ ಪರದಾಟ
Image
ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ
Image
ತೆಲುಗು ಚಿತ್ರರಂಗದಲ್ಲಿ ನೆಪೋಟಿಸಂ ಇಲ್ಲವೇ ಇಲ್ಲ ಎಂದ ಖ್ಯಾತ ನಿರ್ಮಾಪಕ
Image
ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸುವ ಸಮಸ್ಯೆಗಳೇನು?

2014ರಲ್ಲಿ ಅಜಯ್ ರಾವ್ ಅವರು ಸಪ್ನಾ ಅವರನ್ನು ವಿವಾಹ ಆದರು. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇವರದ್ದು ಪ್ರೇಮ ವಿವಾಹ. ಈ ದಂಪತಿಗೆ ಚೆರಿಷ್ಮಾ ಹೆಸರಿನ ಹೆಣ್ಣು ಮಗು ಇದೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸಿದ ಸಮಸ್ಯೆಗಳೇನು? 

ಅಜಯ್ ರಾವ್ ಅವರು ‘ಯುದ್ಧಕಾಂಡ’ ಹೆಸರಿನ ಸಿನಿಮಾ ಮಾಡಿದ್ದಾರೆ. ಇದಕ್ಕೆ ಪವನ್ ಭಟ್ ಅವರ ನಿರ್ದೇಶನ ಇದೆ. ಇದೇ ತಿಂಗಳು ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ಅವರು ಎರಡನೇ ಇನ್ನಿಂಗ್ಸ್ ಆರಂಭಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?