AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಂಗೋಟಿ ಮ್ಯಾನ್’ ಸಿನಿಮಾದ ಅಸಲಿ ವಿಷಯ ಏನು? ಸೆ.20ಕ್ಕೆ ತಿಳಿಯುತ್ತೆ ಸತ್ಯ

ಟ್ರೇಲರ್ ನೋಡಿದ ಎಲ್ಲರಿಗೂ ‘ಲಂಗೋಟಿ ಮ್ಯಾನ್’ ಸಿನಿಮಾದ ಕಥೆಯ ಮೇಲೆ ಕೌತುಕ ಹೆಚ್ಚಾಗಿದೆ. ಸೆ.20ರಂದು ಈ ಸಿನಿಮಾ ತೆರೆಕಾಣಲಿದೆ. ‘ತನು ಟಾಕೀಸ್’ ಮೂಲಕ ನಿರ್ಮಾಣವಾದ ಈ ಸಿನಿಮಾಗೆ ನಿರ್ದೇಶಕಿ ಸಂಜೋತಾ ಭಂಡಾರಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಆಕಾಶ್​ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ.

‘ಲಂಗೋಟಿ ಮ್ಯಾನ್’ ಸಿನಿಮಾದ ಅಸಲಿ ವಿಷಯ ಏನು? ಸೆ.20ಕ್ಕೆ ತಿಳಿಯುತ್ತೆ ಸತ್ಯ
ಸ್ನೇಹಾ ಖುಷಿ, ಆಕಾಶ್​, ಸಂಹಿತಾ ವಿನ್ಯಾ, ಸಂಜೋತಾ ಭಂಡಾರಿ
ಮದನ್​ ಕುಮಾರ್​
|

Updated on: Sep 13, 2024 | 10:50 PM

Share

ಟ್ರೇಲರ್​ ಮತ್ತು ಟೈಟಲ್​ ಕಾರಣದಿಂದ ‘ಲಂಗೋಟಿ ಮ್ಯಾನ್​’ ಸಿನಿಮಾ ಒಂದಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಆ ಎಲ್ಲ ಅನುಮಾನಗಳಿಗೆ ಸೆಪ್ಟೆಂಬರ್​ 20ರಂದು ಉತ್ತರ ಸಿಗಲಿದೆ. ಅಂದರೆ, ಈ ಸಿನಿಮಾ ಸೆ.20ರಂದು ಬಿಡುಗಡೆ ಆಗಲಿದ್ದು, ಇದರ ಅಸಲಿ ಕಹಾನಿ ಏನು ಎಂಬುದು ಅಂದೇ ಬಹಿರಂಗ ಆಗಲಿದೆ. ಸದ್ಯಕ್ಕಂತೂ ‘ಲಂಗೋಟಿ ಮ್ಯಾನ್​’ ಟ್ರೇಲರ್ ನೋಡಿದವರು ಸಿಕ್ಕಾಪಟ್ಟೆ ನಗುತ್ತಿದ್ದಾರೆ. ಇನ್ನು, ಪೂರ್ತಿ ಸಿನಿಮಾ ಎಷ್ಟು ಕಾಮಿಡಿಯಾಗಿ ಇರಬಹುದು ಎಂಬ ನಿರೀಕ್ಷೆ ಮೂಡಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

‘ಲಂಗೋಟಿ ಮ್ಯಾನ್​’ ಚಿತ್ರವು ‘ತನು ಟಾಕೀಸ್’ ಮೂಲಕ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಸಂಜೋತಾ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ‘ಈ ಸಿನಿಮಾ ಅನಗತ್ಯ ಕಾರಣದಿಂದ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಸಿನಿಮಾ ನೋಡಿದ ನಂತರ ಈ ಶೀರ್ಷಿಕೆ ಯಾಕೆ ಇಟ್ಟಿದ್ದೇವೆ ಎಂಬುದು ಗೊತ್ತಾಗಲಿದೆ. ಯಾವ ಸಮುದಾಯವನ್ನೂ ನಾವು ಅವಮಾನ ಮಾಡಿಲ್ಲ. ಯಾರನ್ನೂ ನೋಯಿಸುವ ಉದ್ದೇಶ ನಮಗಿಲ್ಲ’ ಎಂದು ನಿರ್ದೇಶಕಿ ಸಂಜೋತಾ ಹೇಳಿದ್ದಾರೆ.

ನಟ ಧರ್ಮೇಂದ್ರ ಕೂಡ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ‘ಲಂಗೋಟಿ ವಿಷಯವನ್ನು ಕೇಂದ್ರವಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ತಾತನಿಗೆ ಸಂಪ್ರದಾಯ, ಆಚಾರ-ವಿಚಾರ ಪಾಲಿಸಬೇಕು ಎನ್ನುವ ನಂಬಿಕೆ. ಆದರೆ ಆ ಸಂಪ್ರದಾಯಗಳ ಹೇರಿಕೆಯಿಂದ ನಾಯಕ ರೆಬೆಲ್ ಆಗುತ್ತಾನೆ. ಈ ಸಿನಿಮಾದ ಕಥೆ ಆಸಕ್ತಿಕರವಾಗಿದೆ. ಇದೊಂದು ಉತ್ತಮ ಕೌಟುಂಬಿಕ ಸಿನಿಮಾ’ ಎಂದು ಅವರು ಹೇಳಿದ್ದಾರೆ.

ಲಂಗೋಟಿ ಮ್ಯಾನ್​ ಟ್ರೇಲರ್:

ಆಕಾಶ್ ರಾಂಬೋ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ‘ತಾತ ಹಾಗೂ ಮೊಮ್ಮಗನ ಸುತ್ತ ನಡೆಯುವ ಕಥೆ ಇದು. ಮೊಮ್ಮಗ ಲಂಗೋಟಿ ಹಾಕಿಕೊಳ್ಳಬೇಕು‌ ಎಂಬುದು ತಾತನ ಬಯಕೆ. ಮೊಮ್ಮಗನಿಗೆ ಅಂಡರ್​ವೇರ್ ಹಾಕಿಕೊಳ್ಳುವ ಆಸೆ. ತಾತಾ ಬದುಕಿರುವ ತನಕ ಅಂಡರ್​ವೇರ್ ಹಾಕಲು ಬಿಡುವುದಿಲ್ಲ. ಈ ರೀತಿಯ ಹಾಸ್ಯಮಯ ಕಥೆ ನಮ್ಮ ಸಿನಿಮಾದಲ್ಲಿದೆ’ ಎಂದು ಆಕಾಶ್​ ಹೇಳಿದ್ದಾರೆ.

ಇದನ್ನೂ ಓದಿ: ‘ಅಮ್ಮಾವ್ರ ಗಂಡ’ ಚಿತ್ರದ ನಟಿ ಭಾಗ್ಯಶ್ರೀ ಪುತ್ರಿಯ ಸಿನಿಮಾಗೆ ನಾಗಶೇಖರ್​ ನಿರ್ದೇಶನ

ಈ ಸಿನಿಮಾದಲ್ಲಿ ಸಂಹಿತಾ ವಿನ್ಯಾ, ಹುಲಿ ಕಾರ್ತಿಕ್​, ಸ್ನೇಹಾ ಖುಷಿ, ಪಲ್ಟಿ ಗೋವಿಂದ್​, ಸಾಯಿ ಪವನ್​ ಕುಮಾರ್​ ಮುಂತಾದವರು ನಟಿಸಿದ್ದಾರೆ. ಪೊಲೀಸ್​ ಪಾತ್ರದಲ್ಲಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ. ‘ಕಾಮಿಡಿ ಸಿನಿಮಾದ ಮೂಲಕ ಕೆಲವು ಗಂಭೀರ ವಿಷಯಗಳನ್ನು ಹೇಳಿದ್ದೇವೆ’ ಎಂದಿದ್ದಾರೆ ನಟ ಹುಲಿ ಕಾರ್ತಿಕ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ