AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು

‘ಕೊರೊನಾ ಸಮಯದಲ್ಲಿ ನಾನು ಮದುವೆ ಆದೆ. ಆ ಬಳಿಕ ಅಮೆರಿಕ ಹೋದೆ. ನಾನು ಅಲ್ಲಿ ಮ್ಯೂಸಿಕ್ ಕ್ಲಾಸ್ ಮಾಡುತ್ತಿದ್ದೆ. ಅಲ್ಲಿ ಗೆಳೆಯರನ್ನು ಮಾಡಿಕೊಳ್ಳಲು ಆರಂಭಿಸಿದೆ. ನಾನು ಖುಷಿಯಾಗಿದ್ದೆ’ ಎಂದು ದಿ ಪವರ್​ ಹೌಸ್​ ವೈನ್ಸ್​​ಗೆ ನೀಡಿದ ಸಂದರ್ಶನದಲ್ಲಿ ಅಖಿಲಾ ಅವರು ಮಾತನಾಡಿದ್ದಾರೆ.

‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು
ಅಖಿಲಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 26, 2026 | 11:08 AM

Share

ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ವಿವಾಹ ಆಗಿ ಕೆಲವು ವರ್ಷ ಒಟ್ಟಿಗೆ ಇದ್ದರು. ಆ ಬಳಿಕ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಈ ವರೆಗೆ ಅವರು ಈ ಬಗ್ಗೆ ಮಾತನಾಡಿಯೇ ಇರಲಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಈಗ ಅಖಿಲಾ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅವರು ತಮ್ಮ ಬಗ್ಗೆ ಕೇಳಿ ಬಂದ ವದಂತಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಆ ಬಗ್ಗೆ ಇಲ್ಲಿ ನೋಡೋಣ.

‘ಕೊರೊನಾ ಸಮಯದಲ್ಲಿ ನಾನು ಮದುವೆ ಆದೆ. ಆ ಬಳಿಕ ಅಮೆರಿಕ ಹೋದೆ. ನಾನು ಅಲ್ಲಿ ಮ್ಯೂಸಿಕ್ ಕ್ಲಾಸ್ ಮಾಡುತ್ತಿದ್ದೆ. ಅಲ್ಲಿ ಗೆಳೆಯರನ್ನು ಮಾಡಿಕೊಳ್ಳಲು ಆರಂಭಿಸಿದೆ. ನಾನು ಖುಷಿಯಾಗಿದ್ದೆ’ ಎಂದು ದಿ ಪವರ್​ ಹೌಸ್​ ವೈನ್ಸ್​​ಗೆ ನೀಡಿದ ಸಂದರ್ಶನದಲ್ಲಿ ಅಖಿಲಾ ಅವರು ಮಾತನಾಡಿದ್ದಾರೆ.

‘ನನಗೆ ವಿಚ್ಛೇದನ ವಿಷಯವು ಲೀಕ್ ಆಗುವುದು ಇಷ್ಟವೇ ಇರಲಿಲ್ಲ. ನನ್ನ ತಂದೆ ನನ್ನನ್ನು ಪ್ರಿಪ್ಯಾರ್ ಮಾಡಿದ್ರು. ಸೆಲೆಬ್ರಿಟಿಗಳ ವಿಚ್ಛೇದನ ವಿಷಯ ಲೀಕ್ ಆಗುತ್ತದೆ ಎಂದು ನನ್ನ ತಂದೆಗೆ ಗೊತ್ತಿತ್ತು. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರ ಅಲ್ಲವೇ ಅಲ್ಲ. ರಾತ್ರಿ ನಾವು ಡಿವೋರ್ಸ್ ಆಗೋಣ ಎಂದು ನಿರ್ಧರಿಸಿ, ಮರುದಿನ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದವರು ನಾವಲ್ಲ. ನಾವಿಬ್ಬರೂ ಒಂದೂವರೆ ವರ್ಷ ಸಂಬಂಧ ಸರಿದೂಗಿಸಲು ಪ್ರಯತ್ನ ಮಾಡಿದೆವು. ವರ್ಕ್ ಆಗುತ್ತಿಲ್ಲ ಎಂಬುದು ಗೊತ್ತಾದ ಬಳಿಕ ಭಾರತಕ್ಕೆ ಮರಳಿದೆ’ ಎಂದು ಅವರು ಹೇಳಿದರು.

‘ಸುದ್ದಿ ಬರುತ್ತೆ ಹೋಗುತ್ತೆ. ಆದರೆ, ನಾವು ಪಡುವ ಕಷ್ಟ ನನಗೆ ಮಾತ್ರ ಗೊತ್ತು ಎಂದು ನನಗೆ ಅನಿಸಿತು. ಸುದ್ದಿ ಬರುತ್ತೆ-ಹೋಗುತ್ತೆ. ನನಗೆ ರಿಯಾಲಿಶಿಟಿ ಶೋ ಆಫರ್ ಬಂತು ಎಂದು ನಾನು ವಿಚ್ಛೇದನ ನಿರ್ಧಾರ ತೆಗೆದುಕೊಂಡೆ ಎಂದೆಲ್ಲ ಹೇಳಲಾಯಿತು. ಆದರೆ, ಆ ರೀತಿ ಏನು ಇಲ್ಲ’ ಎಂದು ಅವರು ವಿವರಿಸಿದರು.

ಇದನ್ನೂ ಓದಿ:  ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ವಿಚ್ಛೇದನಕ್ಕೆ ಕಾರಣವೇನು ಗೊತ್ತಾ?

ಧನಂಜಯ್ ಅವರು ಅಮೆರಿಕದಲ್ಲಿ ವಾಸವಿದ್ದಾರೆ. ಅವರು ಅಖಿಲಾಗೆ ಕೆಲಸ ಮಾಡುವ ಸ್ವಾತಂತ್ರ್ಯ ಕೊಟ್ಟಿಲ್ಲ ಎಂದೆಲ್ಲ ಹೇಳಲಾಗಿತ್ತು. ಆದರೆ, ಅಖಿಲಾ ಅದೆಲ್ಲವನ್ನೂ ತಳ್ಳಿ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು