AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆಯ ಒತ್ತಾಯಕ್ಕೆ ಲಿವ್-ಇನ್ ರಿಲೇಶನ್​ಶಿಪ್​ನಲ್ಲಿ ಇದ್ದ ಅಕ್ಷಯ್ ಕುಮಾರ್  

ಅಕ್ಷಯ್ ಕುಮಾರ್ ಮತ್ತು ಟ್ವಿಂಕಲ್ ಖನ್ನಾ ಅವರ ಪ್ರೇಮಕಥೆ ಮತ್ತು ವಿವಾಹಕ್ಕೂ ಮುನ್ನ ಡಿಂಪಲ್ ಕಪಾಡಿಯಾ ಅವರು ನೀಡಿದ್ದ ವಿಶೇಷ ಸಲಹೆಯ ಬಗ್ಗೆ ಈ ಲೇಖನ ತಿಳಿಸುತ್ತದೆ. ಟ್ವಿಂಕಲ್ ಅವರ ತಾಯಿ, ಅವರ ಸ್ವಂತ ವಿವಾಹದ ಅನುಭವದ ಆಧಾರದ ಮೇಲೆ, ಅಕ್ಷಯ್ ಮತ್ತು ಟ್ವಿಂಕಲ್ ಲಿವ್-ಇನ್ ಸಂಬಂಧದಲ್ಲಿ ಎರಡು ವರ್ಷಗಳ ಕಾಲ ವಾಸಿಸಲು ಸಲಹೆ ನೀಡಿದ್ದರು.

ಅತ್ತೆಯ ಒತ್ತಾಯಕ್ಕೆ ಲಿವ್-ಇನ್ ರಿಲೇಶನ್​ಶಿಪ್​ನಲ್ಲಿ ಇದ್ದ ಅಕ್ಷಯ್ ಕುಮಾರ್  
ಅಕ್ಷಯ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 09, 2025 | 7:53 AM

Share

ಅಕ್ಷಯ್ ಕುಮಾರ್ (Akshay Kumar) ಮತ್ತು ಟ್ವಿಂಕಲ್ ಖನ್ನಾ ಅವರ ಪ್ರೇಮಕಥೆ ಅನೇಕರಿಗೆ ತಿಳಿದಿರಬಹುದು. ಈ ಮೊದಲು ಟ್ವಿಂಕಲ್ ತಮ್ಮ ಮದುವೆಯ ಬಗ್ಗೆ ಹೊಸ ವಿಚಾರ ಹೇಳಿದ್ದರು. ಟ್ವಿಂಕಲ್ ಅವರ ತಾಯಿ ಡಿಂಪಲ್ ಕಪಾಡಿಯಾ ಮತ್ತು ತಂದೆ ರಾಜೇಶ್ ಖನ್ನಾ ವಿಚ್ಛೇದನ ಪಡೆಯದೆ ಹಲವು ವರ್ಷಗಳ ಕಾಲ ಬೇರೆಯಾಗೇ ವಾಸ ಇದ್ದರು. ಡಿಂಪಲ್ ಕಪಾಡಿಯಾ ಅವರು ಟ್ವಿಂಕಲ್ ಅವರನ್ನು ತುಂಬಾ ರಕ್ಷಿಸುತ್ತಿದ್ದರು. ಮದುವೆಯಾಗುವ ವಿಚಾರ ಬಂದಾಗ ಡಿಂಪಲ್ ಈ ಜೋಡಿಗೆ ಮೊದಲು ಲಿವ್-ಇನ್ ಸಂಬಂಧದಲ್ಲಿ ಇರಲು ಸಲಹೆ ನೀಡಿದರು. ಮದುವೆಗೆ ಮೊದಲು ಇಬ್ಬರೂ ಎರಡು ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿ ವಾಸಿಸಬೇಕು ಮತ್ತು ನಂತರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇಂದು (ಸೆಪ್ಟೆಂಬರ್ 9) ಅಕ್ಷಯ್ ಕುಮಾರ್ ಜನ್ಮದಿನ. ಈ ಸಂದರ್ಭದಲ್ಲಿ ಅವರ ಜೀವನದಲ್ಲಿ ನಡೆದ ಒಂದು ಪ್ರಮುಖ ಘಟನೆ ಬಗ್ಗೆ ತಿಳಿದುಕೊಳ್ಳೋಣ. ಅವರು ಈ ಮೊದಲು ಲಿವ್​-ಇನ್ ರಿಲೇಶನ್​ಶಿಪ್​ನಲ್ಲಿ ಇದ್ದರು.

‘ಅಕ್ಷಯ್ ನನ್ನನ್ನು ಮದುವೆಯಾಗಲು ಬಯಸುತ್ತಾನೆ ಎಂದು ಹೇಳಿದಾಗ, ನನ್ನ ತಾಯಿ ಹೇಳಿದ್ದು ಒಂದೇ ಮಾತು. ನೀವು ಎರಡು ವರ್ಷಗಳ ಕಾಲ ಒಟ್ಟಿಗೆ ಇರಬೇಕು. ಆ ನಂತರವೂ ನೀವು ಮದುವೆಯಾಗಲು ಬಯಸಿದರೆ, ನಂತರ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದರು’ ಎಂದು ಟ್ವಿಂಕಲ್ ವಿವರಿಸಿದ್ದರು.

ಇದನ್ನೂ ಓದಿ
Image
‘ಅದು ನಾನು ಜೀವನದಲ್ಲಿ ತೆಗೆದುಕೊಂಡ ಕೆಟ್ಟ ನಿರ್ಧಾರ’; ಮರುಗಿದ ಚಂದನ್
Image
ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡರಾ ರಶ್ಮಿಕಾ ಮಂದಣ್ಣ? ಗಮನ ಸೆಳೆದ ಉಂಗುರ
Image
‘ಸು ಫ್ರಮ್ ಸೋ’ ಒಟಿಟಿ ದಿನಾಂಕ ರಿವೀಲ್; 45ನೇ ದಿನವೂ ಅಬ್ಬರದ ಕಲೆಕ್ಷನ್
Image
ಸೂರ್ಯವಂಶಿ ನಟ ನಿಧನ; ವಾಯು ಪಡೆಯಲ್ಲಿ ಸೇವೆ ಸಲ್ಲಿಸಿ ಚಿತ್ರರಂಗಕ್ಕೆ ಎಂಟ್ರಿ

‘ನಾನು ಮದುವೆಯಾಗಿದ್ದೇನೆ ಮತ್ತು ಮದುವೆಯ ಅನುಭವ ಹೇಗಿರುತ್ತದೆ ಎಂದು ನನಗೆ ತಿಳಿದಿದೆ ಎಂದು ತಾತು ಹೇಳುತ್ತಿದ್ದರು. ರಾಜೇಶ್ ಖನ್ನಾ ಹಾಗೂ ಡಿಂಪಲ್ ಕಪಾಡಿಯಾ ವಿವಾಹ ಆದರು. ಆದರೆ ಮದುವೆ ಆಗಿ 9 ವರ್ಷಕ್ಕೆ ಇವರು ಬೇರೆ ಆದರು. ಮದುವೆಗೂ ಮೊದಲು ಒಟ್ಟಿಗೆ ವಾಸ ಇದ್ದಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ ಎಂಬ ಅಭಿಪ್ರಾಯ ಡಿಂಪಲ್ ಅವರದ್ದು.

ಇದನ್ನೂ ಓದಿ: ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್ ಜೊತೆಗೆ ಕೆವಿಎನ್ ವೆಂಕಟ್

ಅಕ್ಷಯ್ ಕುಮಾರ್ ಮತ್ತು ಟ್ವಿಂಕಲ್ ಖನ್ನಾ 2001 ರಲ್ಲಿ ವಿವಾಹವಾದರು. ಅಕ್ಷಯ್ ಮತ್ತು ಟ್ವಿಂಕಲ್ ಉದ್ಯಮದ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ಈ ಜೋಡಿ ಹಲವು ಕಾರಣಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತದೆ. ಇವರು ಮಕ್ಕಳನ್ನು ಬೆಳೆಸುತ್ತಿರುವ ರೀತಿಯೂ ಭಿನ್ನವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ