AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್
ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್​ ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 05, 2021 | 9:49 PM

ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಇಂದು (ನವೆಂಬರ್​ 5) ತೆರೆಗೆ ಬಂದಿದೆ. ಕತ್ರಿನಾ ಕೈಫ್ ನಾಯಕಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ರಣವೀರ್​ ಸಿಂಗ್​, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹುದಿನಗಳ ನಂತರದಲ್ಲಿ ಬಾಲಿವುಡ್​ನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ದುರಾದೃಷ್ಟ ಎಂದರೆ ಸಿನಿಮಾ ರಿಲೀಸ್​ ಆದ ಮೊದಲನೇ ದಿನವೇ ಆನ್​ಲೈನ್​ನಲ್ಲಿ ಲೀಕ್​ ಆಗಿದೆ.

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ. ಸಾಹಸಮಯ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅಕ್ಷಯ್​ಕುಮಾರ್​ಗೆ ರೋಹಿತ್​ ಶೆಟ್ಟಿ ಯಾವ ರೀತಿ ನಿರ್ದೇಶನ ಮಾಡಿರಬಹುದು ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ. ‘ಸೂರ್ಯವಂಶಿ’ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಆದರೆ, ಸಿನಿಮಾ ಆನ್​ಲೈನ್​ನಲ್ಲಿ ಲೀಕ್​ ಆಗಿದ್ದು ಚಿತ್ರದ ಕಲೆಕ್ಷನ್​ಗೆ ಹೊಡೆತ ಕೊಡುವ ಸಾಧ್ಯತೆ ಇದೆ.

ಅಕ್ಷಯ್​ ಕುಮಾರ್​ ಸೂರ್ಯವಂಶಿ ಸಿನಿಮಾ ಪೈರಸಿಯ ಹೊಡೆತಕ್ಕೆ ಸಿಲುಕಿದೆ. ಟೆಲಿಗ್ರಾಮ್​ ಹಾಗೂ ತಮಿಳ್​ರಾಕರ್ಸ್​​ ಸೈಟ್​ನಲ್ಲಿ ಈ ಸಿನಿಮಾದ ಎಚ್​ಡಿ ಪ್ರಿಂಟ್​ ಹರಿದಾಡುತ್ತಿದೆ. ನವೆಂಬರ್ 4ರಂದು ರಿಲೀಸ್​ ಆದ ರಜನಿಕಾಂತ್​ ನಟನೆಯ ಅಣ್ಣಾಥೆ ಹಾಗೂ ಒಟಿಟಿಯಲ್ಲಿ ರಿಲೀಸ್ ಆದ ಸೂರ್ಯ ಅಭಿನಿಯದ ‘ಜೈ ಭೀಮ್​’ ಕೂಡ ಪೈರಸಿ ಹೊಡತಕ್ಕೆ ಸಿಲುಕಿದೆ.

‘ಸೂರ್ಯವಂಶಿ’ ಚಿತ್ರಕ್ಕೆ ಅಕ್ಷಯ್​ಕುಮಾರ್​ ನಾಯಕ. ಅವರ ಜೊತೆಗೆ ರಣವೀರ್​ ಸಿಂಗ್​ ಮತ್ತು ಅಜಯ್​ ದೇವಗನ್​ ಕೂಡ ತೆರೆಹಂಚಿಕೊಂಡಿದ್ದಾರೆ. ಮುಖ್ಯವಾದ ಅತಿಥಿ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್