AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್
ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್​ ಕುಮಾರ್
TV9 Web
| Edited By: |

Updated on: Nov 05, 2021 | 9:49 PM

Share

ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಇಂದು (ನವೆಂಬರ್​ 5) ತೆರೆಗೆ ಬಂದಿದೆ. ಕತ್ರಿನಾ ಕೈಫ್ ನಾಯಕಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ರಣವೀರ್​ ಸಿಂಗ್​, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹುದಿನಗಳ ನಂತರದಲ್ಲಿ ಬಾಲಿವುಡ್​ನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ದುರಾದೃಷ್ಟ ಎಂದರೆ ಸಿನಿಮಾ ರಿಲೀಸ್​ ಆದ ಮೊದಲನೇ ದಿನವೇ ಆನ್​ಲೈನ್​ನಲ್ಲಿ ಲೀಕ್​ ಆಗಿದೆ.

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ. ಸಾಹಸಮಯ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅಕ್ಷಯ್​ಕುಮಾರ್​ಗೆ ರೋಹಿತ್​ ಶೆಟ್ಟಿ ಯಾವ ರೀತಿ ನಿರ್ದೇಶನ ಮಾಡಿರಬಹುದು ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ. ‘ಸೂರ್ಯವಂಶಿ’ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಆದರೆ, ಸಿನಿಮಾ ಆನ್​ಲೈನ್​ನಲ್ಲಿ ಲೀಕ್​ ಆಗಿದ್ದು ಚಿತ್ರದ ಕಲೆಕ್ಷನ್​ಗೆ ಹೊಡೆತ ಕೊಡುವ ಸಾಧ್ಯತೆ ಇದೆ.

ಅಕ್ಷಯ್​ ಕುಮಾರ್​ ಸೂರ್ಯವಂಶಿ ಸಿನಿಮಾ ಪೈರಸಿಯ ಹೊಡೆತಕ್ಕೆ ಸಿಲುಕಿದೆ. ಟೆಲಿಗ್ರಾಮ್​ ಹಾಗೂ ತಮಿಳ್​ರಾಕರ್ಸ್​​ ಸೈಟ್​ನಲ್ಲಿ ಈ ಸಿನಿಮಾದ ಎಚ್​ಡಿ ಪ್ರಿಂಟ್​ ಹರಿದಾಡುತ್ತಿದೆ. ನವೆಂಬರ್ 4ರಂದು ರಿಲೀಸ್​ ಆದ ರಜನಿಕಾಂತ್​ ನಟನೆಯ ಅಣ್ಣಾಥೆ ಹಾಗೂ ಒಟಿಟಿಯಲ್ಲಿ ರಿಲೀಸ್ ಆದ ಸೂರ್ಯ ಅಭಿನಿಯದ ‘ಜೈ ಭೀಮ್​’ ಕೂಡ ಪೈರಸಿ ಹೊಡತಕ್ಕೆ ಸಿಲುಕಿದೆ.

‘ಸೂರ್ಯವಂಶಿ’ ಚಿತ್ರಕ್ಕೆ ಅಕ್ಷಯ್​ಕುಮಾರ್​ ನಾಯಕ. ಅವರ ಜೊತೆಗೆ ರಣವೀರ್​ ಸಿಂಗ್​ ಮತ್ತು ಅಜಯ್​ ದೇವಗನ್​ ಕೂಡ ತೆರೆಹಂಚಿಕೊಂಡಿದ್ದಾರೆ. ಮುಖ್ಯವಾದ ಅತಿಥಿ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್