AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್
ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್​ ಕುಮಾರ್
TV9 Web
| Edited By: |

Updated on: Nov 05, 2021 | 9:49 PM

Share

ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಇಂದು (ನವೆಂಬರ್​ 5) ತೆರೆಗೆ ಬಂದಿದೆ. ಕತ್ರಿನಾ ಕೈಫ್ ನಾಯಕಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ರಣವೀರ್​ ಸಿಂಗ್​, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹುದಿನಗಳ ನಂತರದಲ್ಲಿ ಬಾಲಿವುಡ್​ನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ದುರಾದೃಷ್ಟ ಎಂದರೆ ಸಿನಿಮಾ ರಿಲೀಸ್​ ಆದ ಮೊದಲನೇ ದಿನವೇ ಆನ್​ಲೈನ್​ನಲ್ಲಿ ಲೀಕ್​ ಆಗಿದೆ.

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ. ಸಾಹಸಮಯ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅಕ್ಷಯ್​ಕುಮಾರ್​ಗೆ ರೋಹಿತ್​ ಶೆಟ್ಟಿ ಯಾವ ರೀತಿ ನಿರ್ದೇಶನ ಮಾಡಿರಬಹುದು ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ. ‘ಸೂರ್ಯವಂಶಿ’ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಆದರೆ, ಸಿನಿಮಾ ಆನ್​ಲೈನ್​ನಲ್ಲಿ ಲೀಕ್​ ಆಗಿದ್ದು ಚಿತ್ರದ ಕಲೆಕ್ಷನ್​ಗೆ ಹೊಡೆತ ಕೊಡುವ ಸಾಧ್ಯತೆ ಇದೆ.

ಅಕ್ಷಯ್​ ಕುಮಾರ್​ ಸೂರ್ಯವಂಶಿ ಸಿನಿಮಾ ಪೈರಸಿಯ ಹೊಡೆತಕ್ಕೆ ಸಿಲುಕಿದೆ. ಟೆಲಿಗ್ರಾಮ್​ ಹಾಗೂ ತಮಿಳ್​ರಾಕರ್ಸ್​​ ಸೈಟ್​ನಲ್ಲಿ ಈ ಸಿನಿಮಾದ ಎಚ್​ಡಿ ಪ್ರಿಂಟ್​ ಹರಿದಾಡುತ್ತಿದೆ. ನವೆಂಬರ್ 4ರಂದು ರಿಲೀಸ್​ ಆದ ರಜನಿಕಾಂತ್​ ನಟನೆಯ ಅಣ್ಣಾಥೆ ಹಾಗೂ ಒಟಿಟಿಯಲ್ಲಿ ರಿಲೀಸ್ ಆದ ಸೂರ್ಯ ಅಭಿನಿಯದ ‘ಜೈ ಭೀಮ್​’ ಕೂಡ ಪೈರಸಿ ಹೊಡತಕ್ಕೆ ಸಿಲುಕಿದೆ.

‘ಸೂರ್ಯವಂಶಿ’ ಚಿತ್ರಕ್ಕೆ ಅಕ್ಷಯ್​ಕುಮಾರ್​ ನಾಯಕ. ಅವರ ಜೊತೆಗೆ ರಣವೀರ್​ ಸಿಂಗ್​ ಮತ್ತು ಅಜಯ್​ ದೇವಗನ್​ ಕೂಡ ತೆರೆಹಂಚಿಕೊಂಡಿದ್ದಾರೆ. ಮುಖ್ಯವಾದ ಅತಿಥಿ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ