AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್
ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್​ ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 05, 2021 | 9:49 PM

Share

ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಇಂದು (ನವೆಂಬರ್​ 5) ತೆರೆಗೆ ಬಂದಿದೆ. ಕತ್ರಿನಾ ಕೈಫ್ ನಾಯಕಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ರಣವೀರ್​ ಸಿಂಗ್​, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹುದಿನಗಳ ನಂತರದಲ್ಲಿ ಬಾಲಿವುಡ್​ನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ದುರಾದೃಷ್ಟ ಎಂದರೆ ಸಿನಿಮಾ ರಿಲೀಸ್​ ಆದ ಮೊದಲನೇ ದಿನವೇ ಆನ್​ಲೈನ್​ನಲ್ಲಿ ಲೀಕ್​ ಆಗಿದೆ.

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ. ಸಾಹಸಮಯ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅಕ್ಷಯ್​ಕುಮಾರ್​ಗೆ ರೋಹಿತ್​ ಶೆಟ್ಟಿ ಯಾವ ರೀತಿ ನಿರ್ದೇಶನ ಮಾಡಿರಬಹುದು ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ. ‘ಸೂರ್ಯವಂಶಿ’ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಆದರೆ, ಸಿನಿಮಾ ಆನ್​ಲೈನ್​ನಲ್ಲಿ ಲೀಕ್​ ಆಗಿದ್ದು ಚಿತ್ರದ ಕಲೆಕ್ಷನ್​ಗೆ ಹೊಡೆತ ಕೊಡುವ ಸಾಧ್ಯತೆ ಇದೆ.

ಅಕ್ಷಯ್​ ಕುಮಾರ್​ ಸೂರ್ಯವಂಶಿ ಸಿನಿಮಾ ಪೈರಸಿಯ ಹೊಡೆತಕ್ಕೆ ಸಿಲುಕಿದೆ. ಟೆಲಿಗ್ರಾಮ್​ ಹಾಗೂ ತಮಿಳ್​ರಾಕರ್ಸ್​​ ಸೈಟ್​ನಲ್ಲಿ ಈ ಸಿನಿಮಾದ ಎಚ್​ಡಿ ಪ್ರಿಂಟ್​ ಹರಿದಾಡುತ್ತಿದೆ. ನವೆಂಬರ್ 4ರಂದು ರಿಲೀಸ್​ ಆದ ರಜನಿಕಾಂತ್​ ನಟನೆಯ ಅಣ್ಣಾಥೆ ಹಾಗೂ ಒಟಿಟಿಯಲ್ಲಿ ರಿಲೀಸ್ ಆದ ಸೂರ್ಯ ಅಭಿನಿಯದ ‘ಜೈ ಭೀಮ್​’ ಕೂಡ ಪೈರಸಿ ಹೊಡತಕ್ಕೆ ಸಿಲುಕಿದೆ.

‘ಸೂರ್ಯವಂಶಿ’ ಚಿತ್ರಕ್ಕೆ ಅಕ್ಷಯ್​ಕುಮಾರ್​ ನಾಯಕ. ಅವರ ಜೊತೆಗೆ ರಣವೀರ್​ ಸಿಂಗ್​ ಮತ್ತು ಅಜಯ್​ ದೇವಗನ್​ ಕೂಡ ತೆರೆಹಂಚಿಕೊಂಡಿದ್ದಾರೆ. ಮುಖ್ಯವಾದ ಅತಿಥಿ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ