AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ.

Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್
ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್​ ಕುಮಾರ್
TV9 Web
| Edited By: |

Updated on: Nov 05, 2021 | 9:49 PM

Share

ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಇಂದು (ನವೆಂಬರ್​ 5) ತೆರೆಗೆ ಬಂದಿದೆ. ಕತ್ರಿನಾ ಕೈಫ್ ನಾಯಕಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ರಣವೀರ್​ ಸಿಂಗ್​, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹುದಿನಗಳ ನಂತರದಲ್ಲಿ ಬಾಲಿವುಡ್​ನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ದುರಾದೃಷ್ಟ ಎಂದರೆ ಸಿನಿಮಾ ರಿಲೀಸ್​ ಆದ ಮೊದಲನೇ ದಿನವೇ ಆನ್​ಲೈನ್​ನಲ್ಲಿ ಲೀಕ್​ ಆಗಿದೆ.

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರೋಹಿತ್​ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಕ್ಷಯ್​ ಕುಮಾರ್​ ಜೊತೆ ಕೈ ಜೋಡಿಸಿದ್ದಾರೆ. ಸಾಹಸಮಯ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅಕ್ಷಯ್​ಕುಮಾರ್​ಗೆ ರೋಹಿತ್​ ಶೆಟ್ಟಿ ಯಾವ ರೀತಿ ನಿರ್ದೇಶನ ಮಾಡಿರಬಹುದು ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ. ‘ಸೂರ್ಯವಂಶಿ’ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಆದರೆ, ಸಿನಿಮಾ ಆನ್​ಲೈನ್​ನಲ್ಲಿ ಲೀಕ್​ ಆಗಿದ್ದು ಚಿತ್ರದ ಕಲೆಕ್ಷನ್​ಗೆ ಹೊಡೆತ ಕೊಡುವ ಸಾಧ್ಯತೆ ಇದೆ.

ಅಕ್ಷಯ್​ ಕುಮಾರ್​ ಸೂರ್ಯವಂಶಿ ಸಿನಿಮಾ ಪೈರಸಿಯ ಹೊಡೆತಕ್ಕೆ ಸಿಲುಕಿದೆ. ಟೆಲಿಗ್ರಾಮ್​ ಹಾಗೂ ತಮಿಳ್​ರಾಕರ್ಸ್​​ ಸೈಟ್​ನಲ್ಲಿ ಈ ಸಿನಿಮಾದ ಎಚ್​ಡಿ ಪ್ರಿಂಟ್​ ಹರಿದಾಡುತ್ತಿದೆ. ನವೆಂಬರ್ 4ರಂದು ರಿಲೀಸ್​ ಆದ ರಜನಿಕಾಂತ್​ ನಟನೆಯ ಅಣ್ಣಾಥೆ ಹಾಗೂ ಒಟಿಟಿಯಲ್ಲಿ ರಿಲೀಸ್ ಆದ ಸೂರ್ಯ ಅಭಿನಿಯದ ‘ಜೈ ಭೀಮ್​’ ಕೂಡ ಪೈರಸಿ ಹೊಡತಕ್ಕೆ ಸಿಲುಕಿದೆ.

‘ಸೂರ್ಯವಂಶಿ’ ಚಿತ್ರಕ್ಕೆ ಅಕ್ಷಯ್​ಕುಮಾರ್​ ನಾಯಕ. ಅವರ ಜೊತೆಗೆ ರಣವೀರ್​ ಸಿಂಗ್​ ಮತ್ತು ಅಜಯ್​ ದೇವಗನ್​ ಕೂಡ ತೆರೆಹಂಚಿಕೊಂಡಿದ್ದಾರೆ. ಮುಖ್ಯವಾದ ಅತಿಥಿ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: Sooryavanshi: ಅಕ್ಷಯ್​ ಕುಮಾರ್​ ಫ್ಯಾನ್ಸ್​ ‘ಸೂರ್ಯವಂಶಿ’ ಸಿನಿಮಾ ಯಾಕೆ ನೋಡಬೇಕು? ಇಲ್ಲಿವೆ 5 ಕಾರಣಗಳು

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ