AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಏರಿ ಕನ್ನಡಕ್ಕೆ ಬಂದಿದ್ದಾರೆ ನಟಿ ಅಕ್ಷಿತಾ: ಈಕೆ ಬಲು ವೇಗದ ‘ರೇಸರ್’

ತೆಲುಗು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಕನ್ನಡತಿ ಅಕ್ಷಿತಾ ಸತ್ಯನಾರಾಯಣ ಈಗ ರೇಸರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

ಬೈಕ್ ಏರಿ ಕನ್ನಡಕ್ಕೆ ಬಂದಿದ್ದಾರೆ ನಟಿ ಅಕ್ಷಿತಾ: ಈಕೆ ಬಲು ವೇಗದ 'ರೇಸರ್'
ಅಕ್ಷಿತಾ ಸತ್ಯನಾರಾಯಣ್
ಮಂಜುನಾಥ ಸಿ.
|

Updated on: Jun 18, 2023 | 10:45 PM

Share

ಕನ್ನಡ ಚಿತ್ರರಂಗಕ್ಕೆ (Sandalwood) ಹೊಸ ನಾಯಕಿ ಪರಿಚಯವಾಗುತ್ತಿದ್ದಾರೆ. ಈ ಹಿಂದೆ ತೆಲುಗು ಧಾರಾವಾಹಿಯಲ್ಲಿ (Serial) ನಟಿಸಿದ್ದ ಆದರೆ ಕನ್ನಡತಿಯೇ ಆಗಿರು ಅಕ್ಷಿತಾ ಸತ್ಯನಾರಾಯಣ್ ರೇಸರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದು, ನಾಯಕಿಯನ್ನು ಪರಿಚಯಿಸುವ ಖಡಕ್ ಆದ ಪ್ರೋಮೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಐಶಾರಾಮಿ ರೇಸ್ ಬೈಕ್ (Bike) ಏರಿ ಮಾದಕ ಲುಕ್​ನಲ್ಲಿ ನಟಿ ಅಕ್ಷಿತಾ ಸತ್ಯನಾರಾಯಣ್ ಕಾಣಿಸಿಕೊಂಡಿದ್ದಾರೆ.

ರೇಸರ್’ ಸಿನಿಮಾ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರು ಆಗಿರುವ ವಿಷ್ಣುಕಾಂತ್ ಅವರ ಪುತ್ರ ಭರತ್ ವಿಷ್ಣುಕಾಂತ್ ನಿರ್ದೇಶನಕ್ಕಿಳಿದಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದ ಹೀರೋಯಿನ್ ಇಂಟ್ರೂಡಕ್ಷನ್ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ತೆಲುಗು ಸೀರಿಯಲ್ ಮೂಲಕ ನಟನಾ ವೃತ್ತಿ ಆರಂಭಿಸಿದ್ದ ಅಕ್ಷಿತಾ ಸತ್ಯನಾರಾಯಣ್ ರೇಸರ್ ಮೂಲಕ ಕನ್ನಡ ಸಿನಿಮಾ ಲೋಕಕ್ಕೆ ಪದಾರ್ಪಣೆ ಮಾಡಿದ್ದಾರೆ. ಮೂಲತಃ ಕನ್ನಡದವರೇ ಆದ ಅಕ್ಷಿತಾ ಮಾಡೆಲ್ ಜಗತ್ತಿಗೆ ಚಿರಪರಿಚಿತರು. 2020ರ VK ನವತಾರೆ ಕಿರೀಟ ಮುಡಿಗೇರಿಸಿಕೊಂಡಿರುವ ಅವರೀಗ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ರೇಸರ್, ಗ್ಯಾರೇಜ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಅದಕ್ಕೆ ಸಿನಿಮ್ಯಾಟಿಕ್ ಟಚ್ ಕೊಟ್ಟು ಕಥೆ ಹೆಣೆಯಲಾಗಿದೆ. ಸಿನಿಮಾಕ್ಕಾಗಿ ನಾಯಕಿ ಅಕ್ಷಿತಾ ಸತ್ಯನಾರಾಯಣ್ ಬೈಕ್ ರೇಸ್ ಕಲಿತಿದ್ದಾರೆ. ದುಬಾರಿ ಬೆಲೆ ಬೈಕ್ ಏರಿ ಅಕ್ಷಿತಾ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿರುವ ಮೋಷನ್ ಪೋಸ್ಟರ್ ಬಿಡುಗಡೆ ಆಗಿದ್ದು ಮೋಷನ್ ಪೋಸ್ಟರ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದಲ್ಲಿ ಅಕ್ಷಿತಾ ಸಿನಿಮಾದಲ್ಲಿ ಬಬ್ಲಿ ಹುಡುಗಿಯ ಪಾತ್ರ ನಿಭಾಯಿಸಿದ್ದಾರೆ.

ಕಳೆದ ಜನವರಿಯಲ್ಲಿ ಸೆಟ್ಟೇರಿದ್ದ ರೇಸರ್ ಸಿನಿಮಾದ 35ರಷ್ಟು ಭಾಗ ಚಿತ್ರೀಕರಣ ಮುಗಿದಿದೆ. ಇದೇ ತಿಂಗಳಾತ್ಯಂತಕ್ಕೆ ಹಾಡುಗಳ ಚಿತ್ರೀಕರಣ ನಡೆಯಲಿದೆ. ಭಾಯ್ ಎಂಬ ದೊಡ್ಡ ಪಾತ್ರಕ್ಕಾಗಿ ಮಲಯಾಳಂ, ಕನ್ನಡದ ಇಬ್ಬರು ದೊಡ್ಡ ಸ್ಟಾರ್ ಗಳನ್ನು ಅಪ್ರೋಚ್ ಮಾಡಲಾಗಿದೆ. ಸಂದೇಶ್ ಪ್ರಸನ್ನ ನಾಯಕನಾಗಿ ನಟಿಸುತ್ತಿದ್ದು, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ, ಬಾಲ ರಾಜ್ವಾಡಿ, ಕಾಮಿಡಿ ಕಿಲಾಡಿ ಸೂರಜ, ಸ್ವಾತಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಮೈಸೂರು ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಭರತ್ ವಿಷ್ಣುಕಾಂತ್ ನಿರ್ದೇಶನದ ಜೊತೆಗೆ ಭರತ್ ಫಿಲಂಸ್ ನಡಿ ತಾವೇ ರೇಸರ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ