AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯ ವಸ್ತು ಬಳಸಿ ರೆಸಾರ್ಟ್ ಮಾಡಿದ ಅಕುಲ್ ಬಾಲಾಜಿ; ಸುದೀಪ್ ತಬ್ಬಿಬ್ಬು

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಬಿಗ್ ಬಾಸ್ ಮನೆಯ ಹಳೆಯ ವಸ್ತುಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಕುಲ್ ಬಾಲಾಜಿ ಅವರು ಆ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಅವುಗಳನ್ನು ಬಳಸಿಕೊಂಡು ಒಂದು ರೆಸಾರ್ಟ್ ನಿರ್ಮಿಸಿದ್ದಾರೆ ಎಂದು ಸುದೀಪ್ ಅವರು ಹೇಳಿದ್ದಾರೆ. ಸುದೀಪ್ ಅವರು ಅಕುಲ್ ಅವರ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಮನೆಯ ವಸ್ತು ಬಳಸಿ ರೆಸಾರ್ಟ್ ಮಾಡಿದ ಅಕುಲ್ ಬಾಲಾಜಿ; ಸುದೀಪ್ ತಬ್ಬಿಬ್ಬು
ಅಕುಲ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 25, 2024 | 12:49 PM

Share

ಬಿಗ್ ಬಾಸ್​ಗಾಗಿ ಕೆಲ ವರ್ಷಗಳ ಹಿಂದೆ ಹೊಸ ಮನೆ ನಿರ್ಮಾಣ ಆಗಿದೆ. ಕಳೆದ ಸೀಸನ್​ನಿಂದ ಹೊಸ ಮನೆಯಲ್ಲೇ ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿದೆ. ಹಳೆಯ ಮನೆ ಈಗಲೂ ಹಾಗೆಯೇ ಇದ್ದು, ಅದನ್ನು ಯಾರೂ ಬಳಸುತ್ತಿಲ್ಲ. ಈ ಕಾರಣಕ್ಕೆ ಭೂತ ಬಂಗಲೆ ರೀತಿ ಆಗಿದೆ. ಹಾಗಾದರೆ ಈ ಮನೆಯ ವಸ್ತುಗಳು ಏನಾದವು? ಈ ಬಗ್ಗೆ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಕುಲ್ ಬಾಲಾಜಿ ಇದನ್ನು ತೆಗೆದುಕೊಂಡು ಹೊಗಿ ರೆಸಾರ್ಟ್ ಮಾಡಿದ್ದಾಗಿ ಸುದೀಪ್ ಹೇಳಿದ್ದಾರೆ.

ಅಕುಲ್ ಬಾಲಾಜಿ ಅವರು ಆ್ಯಂಕರ್ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿದ್ದರು. ಈ ಕಾರಣಕ್ಕೆ ಕಿಚ್ಚ ಸುದೀಪ್ ಜೊತೆ ಅವರಿಗೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅಕುಲ್ ಬಾಲಾಜಿ ಬುದ್ಧಿವಂತಿಕೆಗೆ ಸುದೀಪ್ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಸುದೀಪ್ ಅವರು ‘ಆ್ಯಂಕರ್ ಅನುಶ್ರೀ’ ಯೂಟ್ಯೂಬ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ‘ಅವನ ದುಡ್ಡು ಅಂತ ಬಂದಾಗ ಅಕುಲ್ ಬಜೆಟ್​ನಲ್ಲಿ ಜೀವನ ನಡೆಸುತ್ತಾನೆ. ಕಿಚ್ಚ ಬ್ರೋ ಇದನ್ನು ನೋಡಿದ್ರಾ, ಅದನ್ನು ನೋಡಿದ್ರಾ ಎಂದು ಕೇಳ್ತಾನೆ. ಅವನು ಹೇಳೋದು ಹೇಗಿರುತ್ತದೆ ಎಂದರೆ ಅವರೇ ವಸ್ತುವನ್ನು ಕಳುಹಿಸಿಕೊಟ್ಟು ಬಿಡ್ತಾನೇನೋ ಎಂಬ ರೀತಿ ಇರುತ್ತದೆ’ ಎಂದಿದ್ದಾರೆ ಸುದೀಪ್.

‘ಒಂದು ರೆಸಾರ್ಟ್ ಮಾಡಿದೀನಿ ಎಂದು ಅಕುಲ್ ಫೋಟೋ ತೋರಿಸಿದ. ಅದನ್ನು ನೋಡಿದಾಗ ಬಿಗ್ ಬಾಸ್ ಪ್ರಾಪರ್ಟಿಗಳು ಕಂಡವು. ನಾನು ಆ ಬಗ್ಗೆ ಕೇಳಿದೆ’ ಎಂದಿದ್ದಾರೆ ಸುದೀಪ್. ‘ಬಿಗ್ ಬಾಸ್ ಮನೆಗೆ ಹೋದೆ. ಹಳೆಯ ಪ್ರಾಪರ್ಟಿಗಳನ್ನು ಬಳಸುವುದಿಲ್ಲ ಎಂದು ಗೊತ್ತಾದಾಗ ಅಲ್ಲಿ ಹೋಗಿ ಕಡಿಮೆ ಮೊತ್ತಕ್ಕೆ ತೆಗೆದುಕೊಂಡು ಬಂದೆ’ ಎಂದು ಅಕುಲ್ ಉತ್ತರಿಸಿದರಂತೆ.

‘ಇಡೀ ಪ್ರಾಪರ್ಟಿನ ತೆಗೆದುಕೊಂಡು ಹೋಗಿ ರೆಸಾರ್ಟ್​ಗೆ ಹಾಕಿದ್ದಾನೆ. ನಮ್ಮ ಬುಡದಿಂದ ತೆಗೆದುಕೊಂಡು ಹೋಗಿ ರೆಸಾರ್ಟ್​ನೇ ಮಾಡಿದ್ದೀಯಲ್ಲೋ, ನಮಗೆ ಈ ರೀತಿಯ ಐಡಿಯಾಗಳು ಬರಲ್ವಲ್ಲ ಎಂದು ಕೇಳಿದೆ. ಅವನು ಸೂಪರ್ ಸ್ಮಾರ್ಟ್​. ನಂದೇ ಐಟಂ ನಂಗೆ ಮಾರಿ ಹೊಗಿಲ್ಲ ಎಂಬುದು ಖುಷಿಯ ವಿಚಾರ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ‘ಮ್ಯಾಕ್ಸ್’ ದರ್ಶನ; ಹೇಗಿದೆ ಸುದೀಪ್ ಸಿನಿಮಾದ ಫಸ್ಟ್ ಹಾಫ್?

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಖುಷಿಯಲ್ಲಿ ಇದ್ದಾರೆ.  ಈ ಚಿತ್ರಕ್ಕೆ ಫ್ಯಾನ್ಸ್ ಕಡೆಯಿಂದ ಹಾಗೂ ವಿಮರ್ಶಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ಈ ಚಿತ್ರದ ಪ್ರಚಾರಕ್ಕಾಗಿ ಸುದೀಪ್ ಅವರು ಹಲವು ಕಡೆಗಳಲ್ಲಿ ಸಂದರ್ಶನ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ