Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ

Ashwath Ninasam | ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ
ನಟ ನೀನಾಸಂ ಅಶ್ವತ್ಥ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 17, 2021 | 12:01 PM

ಮಂಡ್ಯ: ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ. ನಾನು ಕೆಲಸಗಾರರಿಗೆ ಸರಿಯಾಗಿ ಸಂಬಳ ನೀಡುತ್ತಿದ್ದೇನೆ. ಸದ್ಯ ಫಾರ್ಮ್‌ಹೌಸ್‌ನಲ್ಲಿ ಬೇರೆ ಕೆಲಸಗಾರರು ಇಲ್ಲ. ಹೀಗಾಗಿ ಬೇರೆ ಕೆಲಸಗಾರರು ಬರುವವರೆಗೆ ಇರಿ ಎಂದಿದ್ದೆ. ಅವರನ್ನು ಊರಿಗೆ ಹೋಗಬೇಡಿ ಎಂದು ನಾನು ಹೇಳಿಲ್ಲ ಎಂದು ಟಿವಿ9ಗೆ ನಟ ನೀನಾಸಂ ಅಶ್ವತ್ಥ್ ತಿಳಿಸಿದ್ದಾರೆ.

ನಟ ಅಶ್ವತ್ಥ್ ವಿರುದ್ಧ ಕೇಳಿ ಬರುತ್ತಿರುವ ಆರೋಪವೇನು? ಮಂಡ್ಯ ಜಿಲ್ಲೆಯ ಯಾಚನಹಳ್ಳಿ ಫಾರ್ಮ್ ಹೌಸ್​ನಲ್ಲಿ ಕೆಲಸಕ್ಕೆ ಸೇರಿರೋ ಎರಡು ಕುಟುಂಬಗಳು ಅಶ್ವತ್ಥ್ ವಿರುದ್ಧ ಆರೋಪ ಮಾಡಿವೆ. ನಮಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಹಾಗೂ ನಮ್ಮ ಊರುಗಳಿಗೆ ಹೋಗಲು ಬಿಡ್ತಿಲ್ಲ ಎಂದು ಕೆಲಸಗಾರರು ಅಶ್ವತ್ಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಮೂರು ತಿಂಗಳಿಂದ ಫಾರ್ಮ್ ಹೌಸ್​ನಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದಾರಂತೆ. ಆದ್ರೆ ಈ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದು ಆರೋಪವನ್ನು ತಳ್ಳಿ ಹಾಕಿದ್ದಾರೆ. ಇನ್ನು 2018ರಲ್ಲೂ ಕೂಡ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಅವರು ತಮ್ಮ ಸ್ನೇಹಿತನಿಗೆ 18 ಲಕ್ಷ ವಂಚನೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸ್ ಠಾನೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Women Empowerment; ನಾನೆಂಬ ಪರಿಮಳದ ಹಾದಿಯಲಿ: ಅದ್ಯಾವ್ದೋ ನಾಟಕ್ ಸಾಲಿಗೆ ಸೇರ್ಕೊಂಡಾಳಂತs ಗಂಡಸರ ಜೊತಿ ಕುಣ್ಯಾಕ

ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ