AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?

Kantara Box Office Collection: ಕರಾವಳಿ ನೆಲೆದ ಕಥೆಗೆ ಎಲ್ಲ ಪ್ರದೇಶದ ಜನರೂ ಮನಸೋತಿದ್ದಾರೆ. ರಿಷಬ್​ ಶೆಟ್ಟಿ ಅವರ ನಟನೆ, ನಿರ್ದೇಶನಕ್ಕೆ ತೆಲುಗು ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
ರಿಷಬ್ ಶೆಟ್ಟಿ, ಅಲ್ಲು ಅರವಿಂದ್
TV9 Web
| Updated By: ಮದನ್​ ಕುಮಾರ್​|

Updated on: Oct 18, 2022 | 7:36 AM

Share

ದೇಶವೇ ತಿರುಗಿ ನೋಡುವಂತಹ ಸಿನಿಮಾಗಳನ್ನು ಚಂದನವನದ ನಿರ್ದೇಶಕರು ಮಾಡುತ್ತಿದ್ದಾರೆ. ಹಾಗಾಗಿ ಕನ್ನಡದ ಸಿನಿಮಾಗಳ ಮೇಲೆ ಪರಭಾಷೆ ಮಂದಿಗೆ ಒಂದು ಭರವಸೆ ಮೂಡಿದೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ‘ಕಾಂತಾರ’ (Kantara) ಸಿನಿಮಾ. ಈ ಚಿತ್ರ ಕನ್ನಡದಲ್ಲಿ ಅಬ್ಬರಿಸುತ್ತಿರುವಾಗಲೇ ಪರಭಾಷೆಗಳಿಗೂ ಡಬ್​ ಆಗಿ ಉತ್ತಮ ಪ್ರದರ್ಶನ ನೀಡುತ್ತಿದೆ. ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ವರ್ಷನ್​ನಿಂದ ನಿರೀಕ್ಷೆಗೂ ಮೀರಿದ ಲಾಭ ಆಗುತ್ತಿದೆ. ತೆಲುಗು ಮಂದಿ ಈ ಚಿತ್ರವನ್ನು (Kantara Telugu) ಸಖತ್​ ಇಷ್ಟಪಡುತ್ತಿದ್ದಾರೆ. ಇದರಿಂದ ಅಲ್ಲು ಅರ್ಜುನ್​ ತಂದೆ ಅಲ್ಲು ಅರವಿಂದ್​ ಅವರ ಜೇಬು ತುಂಬುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ತೆಲುಗು ವಿತರಣೆ ಹಕ್ಕುಗಳನ್ನು ಖರೀದಿಸಿದ ಅಲ್ಲು ಅರವಿಂದ್​ (Allu Aravind) ಅವರು ಈ ಚಿತ್ರದಿಂದ ಸಖತ್​ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ, ಅಲ್ಲು ಅರವಿಂದ್​ ಅವರು ‘ಕಾಂತಾರ’ ಚಿತ್ರದ ತೆಲುಗು ವಿತರಣೆ ಹಕ್ಕನ್ನು ಖರೀದಿಸಿದ್ದು ಕೇವಲ 3 ಕೋಟಿ ರೂಪಾಯಿಗೆ. ಈಗಾಗಲೇ ಅವರಿಗೆ ಬಾಕ್ಸ್​ ಆಫೀಸ್​ನಲ್ಲಿ ಅಷ್ಟು ಕಲೆಕ್ಷನ್​ ಆಗಿದೆ. ನಂತರ ಬರುತ್ತಿರುವುದೆಲ್ಲವೂ ಲಾಭದ ಲೆಕ್ಕ. ಹಾಗಾಗಿ, ಅವರ ಮುಖದಲ್ಲಿ ನಗು ಮೂಡಿದೆ ಎಂದು ಹೇಳಲಾಗುತ್ತಿದೆ.

ಕರಾವಳಿ ನೆಲೆದ ಕಥೆಗೆ ಎಲ್ಲ ಪ್ರದೇಶದ ಜನರೂ ಮನಸೋತಿದ್ದಾರೆ. ರಿಷಬ್​ ಶೆಟ್ಟಿ ಅವರ ನಟನೆ, ನಿರ್ದೇಶನಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೆಲುಗು ಮಾತ್ರವಲ್ಲದೇ ಹಿಂದಿಯಲ್ಲೂ ಈ ಸಿನಿಮಾ ಗಮನಾರ್ಹ ಮಟ್ಟದಲ್ಲಿ ಕಲೆಕ್ಷನ್​ ಮಾಡುತ್ತಿದೆ. ಹೊರರಾಜ್ಯಗಳ ಚಿತ್ರಮಂದಿರಗಳು ಹೌಸ್​ಫುಲ್ ಆಗುತ್ತಿವೆ. ಇದು ಸ್ಯಾಂಡಲ್​ವುಡ್​ ಪಾಲಿಗೆ ಹೆಮ್ಮೆ ತಂದಿದೆ.

ಇದನ್ನೂ ಓದಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​
Image
Rishab Shetty: ಐಎಂಡಿಬಿಯಲ್ಲಿ ಗಮ್ಮತ್​ ರೇಟಿಂಗ್​ ಪಡೆದ ‘ಕಾಂತಾರ’; ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ರಿಷಬ್​ ಸಿನಿಮಾ

ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಸಿನಿಮಾ ನೋಡಿ ಬಂದ ಪ್ರೇಕ್ಷಕರು ಪಾಸಿಟಿವ್​ ವಿಮರ್ಶೆ ಹಂಚಿಕೊಳ್ಳುತ್ತಿದ್ದಾರೆ. ಅದರ ಪರಿಣಾಮವಾಗಿ ದಿನದಿಂದ ದಿನಕ್ಕೆ ಚಿತ್ರದ ಕಲೆಕ್ಷನ್​ ಹೆಚ್ಚುತ್ತಿದೆ. ಬಾಯಿ ಮಾತಿನ ಪ್ರಚಾರ ಈ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ವಿಜಯ್​ ಕಿರಗಂದೂರು ಅವರು ನಿರ್ಮಾಣ ಮಾಡಿರುವ ‘ಕಾಂತಾರ’ ಸಿನಿಮಾದಿಂದ ‘ಹೊಂಬಾಳೆ ಫಿಲ್ಸ್ಮ್​’ ಸಂಸ್ಥೆಗೆ ಬಹುಕೋಟಿ ರೂಪಾಯಿ ಲಾಭ ಆಗಿದೆ.

ಈ ಸಿನಿಮಾದಿಂದ ರಿಷಬ್​ ಶೆಟ್ಟಿ ಅವರಿಗೆ ದೇಶಾದ್ಯಂತ ಡಿಮ್ಯಾಂಡ್​ ಹೆಚ್ಚಿದೆ. ಅಚ್ಯುತ್​ ಕುಮಾರ್​, ಕಿಶೋರ್​, ಸಪ್ತಮಿ ಗೌಡ, ಮಾನಸಿ ಸುಧೀರ್​ ಮುಂತಾದವರ ನಟನೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಅಂತಿಮವಾಗಿ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ