‘ಕಾಂತಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬರಲಿ ಎಂಬುದು ನನ್ನ ಆಶಯವೂ ಆಗಿತ್ತು’; ಅಲ್ಲು ಅರ್ಜುನ್

‘ಮಾರುತಿ ನಗರ ಸುಬ್ರಮಣ್ಯಂ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಅಲ್ಲು ಅರ್ಜುನ್ ಅವರು ಮಾತನಾಡಿದ್ದಾರೆ. ‘ನ್ಯಾಷನಲ್ ಅವಾರ್ಡ್​ ಗೆದ್ದ ಎಲ್ಲರಿಗೂ ಅಭಿನಂದನೆಗಳು’ ಎಂದಿರೋ ಅವರು ‘ಕಾಂತಾರ’ ತಂಡಕ್ಕೆ ಶುಭಾಶಯ ಕೋರಿದ್ದಾರೆ.

‘ಕಾಂತಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬರಲಿ ಎಂಬುದು ನನ್ನ ಆಶಯವೂ ಆಗಿತ್ತು’; ಅಲ್ಲು ಅರ್ಜುನ್
ರಿಷಬ್-ಅಲ್ಲು ಅರ್ಜುನ್
Follow us
|

Updated on:Aug 23, 2024 | 7:05 AM

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾಗೆ ಕನಿಷ್ಠ ಒಂದಾದರೂ ಅವಾರ್ಡ್​ ಸಿಕ್ಕೇ ಸಿಗುತ್ತದೆ ಅನ್ನೋದು ಅನೇಕರ ನಂಬಿಕೆ ಆಗಿತ್ತು. ಅದರಂತೆ ಆಗಿದೆ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಅವಾರ್ಡ್ ಸಿಕ್ಕರೆ, ‘ಕಾಂತಾರ’ ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿದೆ. ಇಡೀ ತಂಡಕ್ಕೆ ಅಲ್ಲು ಅರ್ಜುನ್ ಅವರು ಅಭಿನಂದನೆ ತಿಳಿಸಿದ್ದಾರೆ

ಇತ್ತೀಚೆಗೆ ಹೈದರಾಬಾದ್​ನಲ್ಲಿ ‘ಮಾರುತಿ ನಗರ ಸುಬ್ರಹ್ಮಣ್ಯ’ ಚಿತ್ರದ ಪ್ರೀ ರೀಲೀಸ್ ಇವೆಂಟ್ ನಡೆದಿದೆ. ರಾವ್ ರಮೇಶ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ‘ಕಾಂತಾರ’ ತಂಡಕ್ಕೆ ಶುಭ ಕೋರಿದ್ದಾರೆ.

‘ನ್ಯಾಷನಲ್ ಅವಾರ್ಡ್​ ಗೆದ್ದ ಎಲ್ಲರಿಗೂ ಅಭಿನಂದನೆಗಳು. ನನಗೆ ಹಿಂದಿನ ವರ್ಷ ರಾಷ್ಟ್ರ ಪ್ರಶಸ್ತಿ ಬಂದಾಗ ಮುಂದಿನ ವರ್ಷ ಕಾಂತಾರ ಚಿತ್ರಕ್ಕೆ ಅವಾರ್ಡ್ ಬಂದರೆ ಚೆನ್ನಾಗಿರುತ್ತಿತ್ತು ಎಂದು ಮನಸಾರೆ ಅಂದುಕೊಂಡಿದ್ದೆ. ರಿಷಬ್ ಶೆಟ್ಟಿಗೂ ಅವಾರ್ಡ್ ಸಿಕ್ಕಿದೆ. ಅವರಿಗೂ ಅಭಿನಂದನೆ’ ಎಂದು ಅಲ್ಲು ಅರ್ಜುನ್ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರು ಕಳೆದ ವರ್ಷ ‘ಪುಷ್ಪ’ ಸಿನಿಮಾ ನಟನೆಗೆ ಅತ್ಯುತ್ತಮ ನಟ ಅವಾರ್ಡ್ ಪಡೆದುಕೊಂಡಿದ್ದರು. ಅವರಿಗೆ ಕನ್ನಡಿಗರೂ ಅಭಿನಂದನೆ ತಿಳಿಸಿದ್ದರು. ಈಗ ಕನ್ನಡದವರಿಗೆ ಅವಾರ್ಡ್ ಬಂದಾಗ ಅವರು ಮನಸಾರೆ ಹಾರೈಸಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ.

ಇದನ್ನೂ ಓದಿ: ‘ಬೇರೆಯದೇ ರೀತಿಯಲ್ಲಿ ಸಿನಿಮಾ ಬರ್ತಿದೆ’; ಸುಕುಮಾರ್ ಎದುರೇ ಘೋಷಿಸಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂಬುದನ್ನು ಅವರು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಇನ್ನು ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Fri, 23 August 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ