AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬರಲಿ ಎಂಬುದು ನನ್ನ ಆಶಯವೂ ಆಗಿತ್ತು’; ಅಲ್ಲು ಅರ್ಜುನ್

‘ಮಾರುತಿ ನಗರ ಸುಬ್ರಮಣ್ಯಂ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಅಲ್ಲು ಅರ್ಜುನ್ ಅವರು ಮಾತನಾಡಿದ್ದಾರೆ. ‘ನ್ಯಾಷನಲ್ ಅವಾರ್ಡ್​ ಗೆದ್ದ ಎಲ್ಲರಿಗೂ ಅಭಿನಂದನೆಗಳು’ ಎಂದಿರೋ ಅವರು ‘ಕಾಂತಾರ’ ತಂಡಕ್ಕೆ ಶುಭಾಶಯ ಕೋರಿದ್ದಾರೆ.

‘ಕಾಂತಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬರಲಿ ಎಂಬುದು ನನ್ನ ಆಶಯವೂ ಆಗಿತ್ತು’; ಅಲ್ಲು ಅರ್ಜುನ್
ರಿಷಬ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Aug 23, 2024 | 7:05 AM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾಗೆ ಕನಿಷ್ಠ ಒಂದಾದರೂ ಅವಾರ್ಡ್​ ಸಿಕ್ಕೇ ಸಿಗುತ್ತದೆ ಅನ್ನೋದು ಅನೇಕರ ನಂಬಿಕೆ ಆಗಿತ್ತು. ಅದರಂತೆ ಆಗಿದೆ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಅವಾರ್ಡ್ ಸಿಕ್ಕರೆ, ‘ಕಾಂತಾರ’ ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿದೆ. ಇಡೀ ತಂಡಕ್ಕೆ ಅಲ್ಲು ಅರ್ಜುನ್ ಅವರು ಅಭಿನಂದನೆ ತಿಳಿಸಿದ್ದಾರೆ

ಇತ್ತೀಚೆಗೆ ಹೈದರಾಬಾದ್​ನಲ್ಲಿ ‘ಮಾರುತಿ ನಗರ ಸುಬ್ರಹ್ಮಣ್ಯ’ ಚಿತ್ರದ ಪ್ರೀ ರೀಲೀಸ್ ಇವೆಂಟ್ ನಡೆದಿದೆ. ರಾವ್ ರಮೇಶ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ‘ಕಾಂತಾರ’ ತಂಡಕ್ಕೆ ಶುಭ ಕೋರಿದ್ದಾರೆ.

‘ನ್ಯಾಷನಲ್ ಅವಾರ್ಡ್​ ಗೆದ್ದ ಎಲ್ಲರಿಗೂ ಅಭಿನಂದನೆಗಳು. ನನಗೆ ಹಿಂದಿನ ವರ್ಷ ರಾಷ್ಟ್ರ ಪ್ರಶಸ್ತಿ ಬಂದಾಗ ಮುಂದಿನ ವರ್ಷ ಕಾಂತಾರ ಚಿತ್ರಕ್ಕೆ ಅವಾರ್ಡ್ ಬಂದರೆ ಚೆನ್ನಾಗಿರುತ್ತಿತ್ತು ಎಂದು ಮನಸಾರೆ ಅಂದುಕೊಂಡಿದ್ದೆ. ರಿಷಬ್ ಶೆಟ್ಟಿಗೂ ಅವಾರ್ಡ್ ಸಿಕ್ಕಿದೆ. ಅವರಿಗೂ ಅಭಿನಂದನೆ’ ಎಂದು ಅಲ್ಲು ಅರ್ಜುನ್ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರು ಕಳೆದ ವರ್ಷ ‘ಪುಷ್ಪ’ ಸಿನಿಮಾ ನಟನೆಗೆ ಅತ್ಯುತ್ತಮ ನಟ ಅವಾರ್ಡ್ ಪಡೆದುಕೊಂಡಿದ್ದರು. ಅವರಿಗೆ ಕನ್ನಡಿಗರೂ ಅಭಿನಂದನೆ ತಿಳಿಸಿದ್ದರು. ಈಗ ಕನ್ನಡದವರಿಗೆ ಅವಾರ್ಡ್ ಬಂದಾಗ ಅವರು ಮನಸಾರೆ ಹಾರೈಸಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ.

ಇದನ್ನೂ ಓದಿ: ‘ಬೇರೆಯದೇ ರೀತಿಯಲ್ಲಿ ಸಿನಿಮಾ ಬರ್ತಿದೆ’; ಸುಕುಮಾರ್ ಎದುರೇ ಘೋಷಿಸಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂಬುದನ್ನು ಅವರು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಇನ್ನು ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Fri, 23 August 24

Follow Us
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ನೋಂದಣಿ ಶುಲ್ಕ ಕಟ್ಟಲು ಸಿದ್ಧ ಎಂದ ಸಚಿವ ಖರ್ಗೆ
ನೋಂದಣಿ ಶುಲ್ಕ ಕಟ್ಟಲು ಸಿದ್ಧ ಎಂದ ಸಚಿವ ಖರ್ಗೆ