AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಹಾದಿ ಅನುಸರಿಸಿದ ಅಲ್ಲು ಅರ್ಜುನ್​; ಪುಷ್ಪ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​

‘ಅಲಾ ವೈಕುಂಠಪುರಂಲೋ' ಸಿನಿಮಾ ನಂತರ ಅಲ್ಲು ಅರ್ಜುನ್​ 'ಪುಷ್ಪ' ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ 'ಪುಷ್ಪ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಯಶ್​ ಹಾದಿ ಅನುಸರಿಸಿದ ಅಲ್ಲು ಅರ್ಜುನ್​; ಪುಷ್ಪ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​
ಅಲ್ಲು ಅರ್ಜುನ್​-ಯಶ್​
ರಾಜೇಶ್ ದುಗ್ಗುಮನೆ
|

Updated on:May 06, 2021 | 5:27 PM

Share

ಬಾಹುಬಲಿ ಎರಡು ಭಾಗಗಳಲ್ಲಿ ತೆರೆಗೆ ಬಂದಿತ್ತು. ಯಶ್​ ನಟನೆಯ ಕೆಜಿಎಫ್​ ಕೂಡ ಎರಡು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಕೆಜಿಎಫ್​ ಚಾಪ್ಟರ್​-1 ಈಗಾಗಲೇ ರಿಲೀಸ್​ ಆಗಿದ್ದರೆ, ಜುಲೈನಲ್ಲಿ ಚಾಪ್ಟರ್​-2​ ರಿಲೀಸ್​ ಆಗುತ್ತಿದೆ. ಈಗ ಅಲ್ಲು ಅರ್ಜುನ್​ ಕೂಡ ಇದೇ ಹಾದಿ ಅನುಸರಿಸುತ್ತಿದ್ದಾರಂತೆ. ಪುಷ್ಪ ಸಿನಿಮಾ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ರಂಗಸ್ಥಲಂ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ರಂಗಸ್ಥಳಂ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಇದೇ ಆಗಸ್ಟ್​ 13ರಂದು ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ.

ಕೆಜಿಎಫ್​ ಸಿನಿಮಾವನ್ನು ಎರಡು ಪಾರ್ಟ್​ ಮೂಲಕ ರಿಲೀಸ್​ ಮಾಡಬೇಕು ಎಂಬುದು ಪ್ರಿ-ಪ್ರೊಡಕ್ಷನ್​ ಹಂತದಲ್ಲೇ ನಿರ್ಧಾರ ಮಾಡಲಾಗಿತ್ತು. ಆದರೆ, ಪುಷ್ಪ ಸಿನಿಮಾ ಶೂಟಿಂಗ್​ ವೇಳೆ ನಿರ್ದೇಶಕ ಸುಕುಮಾರ್​ಗೆ ಈ ಆಲೋಚನೆ ಬಂದಿದೆಯಂತೆ. ಹೀಗಾಗಿ, ಈ ಸಿನಿಮಾವನ್ನು ಎರಡು ಪಾರ್ಟ್​ಗಳಲ್ಲಿ ರಿಲೀಸ್​ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದಕ್ಕೆ ಅಲ್ಲು ಅರ್ಜುನ್​ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೊದಲ ಪಾರ್ಟ್​ ಆಗಸ್ಟ್​ನಲ್ಲಿ ತೆರೆಗೆ ಬರಲಿದ್ದು, 2022 ಅಂತ್ಯದ ವೇಳೆಗೆ ಎರಡನೇ ಭಾಗ ತೆರೆಗೆ ಬರಲಿದೆ.

ಅಲ್ಲು ಅರ್ಜುನ್​ ನಟನೆಯ ಆರ್ಯ ಸಿನಿಮಾ ಎರಡು ಎರಡು ಪಾರ್ಟ್​ಗಳಲ್ಲಿ ತೆರೆಗೆ ಬಂದಿತ್ತು. ಆದರೆ, ಎರಡೂ ಪಾರ್ಟ್​ಗಳಿಗೆ ಒಂದಕ್ಕೊಂದು ಸಂಬಂಧ ಇರಲಿಲ್ಲ. ಇದನ್ನು ನಿರ್ದೇಶನ ಮಾಡಿದ್ದು ಸುಕುಮಾರ್​. ಬಾಹುಬಲಿ-1 ಹಾಗೂ ಬಾಹುಬಲಿ-2 ಎರಡೂ ಹಿಟ್​ ಆಗಿದ್ದವು. ಈಗ ಕೆಜಿಎಫ್​-1 ಹಿಟ್​ ಆಗಿದೆ. ಕೆಜಿಎಫ್​-2 ಮೇಲೆ ದೊಡ್ಡ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಪುಷ್ಪ ಸಿನಿಮಾದಲ್ಲಿ ಹೇಳುವ ವಿಚಾರ ಸಾಕಷ್ಟು ಇರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ:  ರಾಕಿಂಗ್ ಸ್ಟಾರ್ ಯಶ್​ಗೆ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆ ಸರಿಪಡಿಸೋ ಭರವಸೆ ನೀಡಿರೊ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

Published On - 5:11 pm, Thu, 6 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!