AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಗತ್ಯಬಿದ್ದರಷ್ಟೇ ಬಾಲಿವುಡ್​​ನಲ್ಲಿ ನಟಿಸ್ತೀನಿ’; ಅಲ್ಲು ಅರ್ಜುನ್ ನೇರ ನುಡಿ

ಕೆಲವರಿಗೆ ಬಾಲಿವುಡ್​​ನಲ್ಲಿ ಮಿಂಚುವುದೇ ಗುರಿ ಆದರೆ, ಇನ್ನೂ ಕೆಲವರಿಗೆ ತಮ್ಮ ಭಾಷೆಯಲ್ಲೇ ಅಭಿಮಾನಿಗಳನ್ನು ರಂಜಿಸಬೇಕು ಎಂಬ ಗುರಿ ಇರುತ್ತದೆ. ಅಲ್ಲು ಅರ್ಜುನ್ ಕೂಡ ಇದೇ ಸಾಲಿಗೆ ಸೇರುತ್ತಾರೆ.

‘ಅಗತ್ಯಬಿದ್ದರಷ್ಟೇ ಬಾಲಿವುಡ್​​ನಲ್ಲಿ ನಟಿಸ್ತೀನಿ’; ಅಲ್ಲು ಅರ್ಜುನ್ ನೇರ ನುಡಿ
ಅಲ್ಲು ಅರ್ಜುನ್
TV9 Web
| Edited By: |

Updated on:Jul 18, 2022 | 7:58 PM

Share

ನಟ ಅಲ್ಲು ಅರ್ಜುನ್ (Allu Arjun) ಅವರು ಟಾಲಿವುಡ್ ಬಿಟ್ಟು ಹೊರ ಹೋಗಿಲ್ಲ. ಆದರೆ, ಅವರ ನಟನೆಯ ‘ಪುಷ್ಪ’ ಸಿನಿಮಾ (Pushpa Movie) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂತು. ಈ ಸಿನಿಮಾ ಬಾಲಿವುಡ್​​ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿತು. ಈ ಸಿನಿಮಾದಿಂದ ಅಲ್ಲು ಅರ್ಜುನ್ ಹಿಂದಿ ಬೆಲ್ಟ್​​ನವರಿಗೆ ಹೆಚ್ಚು ಚಿರಪರಿಚಿತರಾದರು. ಈ ಕಾರಣಕ್ಕೆ ಅವರು ಬಾಲಿವುಡ್​ಗೆ ಕಾಲಿಡೋದು ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿದೆ. ಇದಕ್ಕೆ ಅಲ್ಲು ಅರ್ಜುನ್ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಸದ್ಯಕ್ಕಂತೂ ಅವರಿಗೆ ಹಿಂದಿ ಚಿತ್ರರಂಗಕ್ಕೆ ತೆರಳುವ ಆಲೋಚನೆ ಇಲ್ಲ. ಆದರೆ, ಅಗತ್ಯಬಿದ್ದರೆ ಅವರು ಬಾಲಿವುಡ್​ಗೆ ಹೋಗೋಕೆ ರೆಡಿ ಇದ್ದಾರೆ.

ದಕ್ಷಿಣ ಭಾರತದ ಅನೇಕ ಸ್ಟಾರ್ ನಟ/ನಟಿಯರು ಇಲ್ಲಿ ಗೆದ್ದ ಬಳಿಕ ಬಾಲಿವುಡ್​ ಕದ ತಟ್ಟಿದ್ದಾರೆ. ಕೆಲವರಿಗೆ ಬಾಲಿವುಡ್​​ನಲ್ಲಿ ಮಿಂಚುವುದೇ ಗುರಿ ಆದರೆ, ಇನ್ನೂ ಕೆಲವರಿಗೆ ತಮ್ಮ ಭಾಷೆಯಲ್ಲೇ ಅಭಿಮಾನಿಗಳನ್ನು ರಂಜಿಸಬೇಕು ಎಂಬ ಗುರಿ ಇರುತ್ತದೆ. ಅಲ್ಲು ಅರ್ಜುನ್ ಕೂಡ ಇದೇ ಸಾಲಿಗೆ ಸೇರುತ್ತಾರೆ. ಅವರು ಇಲ್ಲಿನ ಅಭಿಮಾನಿಗಳನ್ನು ರಂಜಿಸುವ ಗುರಿ ಹೊಂದಿದ್ದಾರೆ.

‘ಸದ್ಯಕ್ಕಂತೂ ಹಿಂದಿಯಲ್ಲಿ ನಟಿಸೋದು ನನ್ನ ಕಂಫರ್ಟಬಲ್ ಜೋನ್​ನ ಹೊರಗಿರುವ ವಿಚಾರ. ಆದರೆ, ಅಗತ್ಯವಿದ್ದರೆ ನಾನು ಅಲ್ಲಿ ಹೋಗಿ ನಟಿಸುತ್ತೇನೆ’ ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಲ್ಲು ಅರ್ಜುನ್ ಹೇಳಿದ್ದಾರೆ. ಈ ಮೂಲಕ ಸದ್ಯಕ್ಕಂತೂ ಬಾಲಿವುಡ್​ಗೆ ಹೋಗುವ ಆಲೋಚನೆ ಇಲ್ಲ ಎಂದಿದ್ದಾರೆ ಅವರು.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಈ ರೀತಿಯ ಹೇಳಿಕೆ ನೀಡಿ ಮಹೇಶ್ ಬಾಬು ಚರ್ಚೆಗೆ ಗುರಿ ಆಗಿದ್ದರು. ‘ಬಾಲಿವುಡ್​ಗೆ ನನ್ನ ಭರಿಸುವ ಶಕ್ತಿಯೇ ಇಲ್ಲ. ಹೀಗಾಗಿ, ನಾನು ಬಾಲಿವುಡ್​ಗೆ ತೆರಳಲ್ಲ’ ಎಂದು ಹೇಳಿದ್ದರು. ಬಾಲಿವುಡ್​ಗೆ ಹೋಗಿ ಸಿನಿಮಾ ಮಾಡುವುದು ಕಂಫರ್ಟಬಲ್ ಎನಿಸುವುದಿಲ್ಲ ಎಂಬ ಅರ್ಥದಲ್ಲಿ ಅವರು ಈ ರೀತಿ ಹೇಳಿಕೆ ನೀಡಿದ್ದರು. ಆದರೆ, ಅದನ್ನು ಬೇರೆ ರೀತಿಯಲ್ಲಿ ಅರ್ಥೈಸಲಾಗಿತ್ತು. ನಂತರ ಮಹೇಶ್ ಬಾಬು ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ತಾಂಜಾನಿಯಾದಲ್ಲಿ ಅಲ್ಲು ಅರ್ಜುನ್ ಫ್ಯಾಮಿಲಿ; ನ್ಯಾಷನಲ್​ ಪಾರ್ಕ್​ನಲ್ಲಿ ಪೋಸ್ ನೀಡಿದ ಕುಟುಂಬ

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕೆ ಇತ್ತೀಚೆಗೆ ಆಡಿಷನ್ ಪೂರ್ಣಗೊಂಡಿದೆ. ಈ ತಿಂಗಳಾಂತ್ಯಕ್ಕೆ ಚಿತ್ರದ ಶೂಟಿಂಗ್ ಆರಂಭ ಆಗುವ ನಿರೀಕ್ಷೆ ಇದೆ. ಈ ಸಿನಿಮಾಗೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ನಾಯಕಿ.

Published On - 7:53 pm, Mon, 18 July 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ