AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಗತ್ಯಬಿದ್ದರಷ್ಟೇ ಬಾಲಿವುಡ್​​ನಲ್ಲಿ ನಟಿಸ್ತೀನಿ’; ಅಲ್ಲು ಅರ್ಜುನ್ ನೇರ ನುಡಿ

ಕೆಲವರಿಗೆ ಬಾಲಿವುಡ್​​ನಲ್ಲಿ ಮಿಂಚುವುದೇ ಗುರಿ ಆದರೆ, ಇನ್ನೂ ಕೆಲವರಿಗೆ ತಮ್ಮ ಭಾಷೆಯಲ್ಲೇ ಅಭಿಮಾನಿಗಳನ್ನು ರಂಜಿಸಬೇಕು ಎಂಬ ಗುರಿ ಇರುತ್ತದೆ. ಅಲ್ಲು ಅರ್ಜುನ್ ಕೂಡ ಇದೇ ಸಾಲಿಗೆ ಸೇರುತ್ತಾರೆ.

‘ಅಗತ್ಯಬಿದ್ದರಷ್ಟೇ ಬಾಲಿವುಡ್​​ನಲ್ಲಿ ನಟಿಸ್ತೀನಿ’; ಅಲ್ಲು ಅರ್ಜುನ್ ನೇರ ನುಡಿ
ಅಲ್ಲು ಅರ್ಜುನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 18, 2022 | 7:58 PM

Share

ನಟ ಅಲ್ಲು ಅರ್ಜುನ್ (Allu Arjun) ಅವರು ಟಾಲಿವುಡ್ ಬಿಟ್ಟು ಹೊರ ಹೋಗಿಲ್ಲ. ಆದರೆ, ಅವರ ನಟನೆಯ ‘ಪುಷ್ಪ’ ಸಿನಿಮಾ (Pushpa Movie) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂತು. ಈ ಸಿನಿಮಾ ಬಾಲಿವುಡ್​​ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿತು. ಈ ಸಿನಿಮಾದಿಂದ ಅಲ್ಲು ಅರ್ಜುನ್ ಹಿಂದಿ ಬೆಲ್ಟ್​​ನವರಿಗೆ ಹೆಚ್ಚು ಚಿರಪರಿಚಿತರಾದರು. ಈ ಕಾರಣಕ್ಕೆ ಅವರು ಬಾಲಿವುಡ್​ಗೆ ಕಾಲಿಡೋದು ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿದೆ. ಇದಕ್ಕೆ ಅಲ್ಲು ಅರ್ಜುನ್ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಸದ್ಯಕ್ಕಂತೂ ಅವರಿಗೆ ಹಿಂದಿ ಚಿತ್ರರಂಗಕ್ಕೆ ತೆರಳುವ ಆಲೋಚನೆ ಇಲ್ಲ. ಆದರೆ, ಅಗತ್ಯಬಿದ್ದರೆ ಅವರು ಬಾಲಿವುಡ್​ಗೆ ಹೋಗೋಕೆ ರೆಡಿ ಇದ್ದಾರೆ.

ದಕ್ಷಿಣ ಭಾರತದ ಅನೇಕ ಸ್ಟಾರ್ ನಟ/ನಟಿಯರು ಇಲ್ಲಿ ಗೆದ್ದ ಬಳಿಕ ಬಾಲಿವುಡ್​ ಕದ ತಟ್ಟಿದ್ದಾರೆ. ಕೆಲವರಿಗೆ ಬಾಲಿವುಡ್​​ನಲ್ಲಿ ಮಿಂಚುವುದೇ ಗುರಿ ಆದರೆ, ಇನ್ನೂ ಕೆಲವರಿಗೆ ತಮ್ಮ ಭಾಷೆಯಲ್ಲೇ ಅಭಿಮಾನಿಗಳನ್ನು ರಂಜಿಸಬೇಕು ಎಂಬ ಗುರಿ ಇರುತ್ತದೆ. ಅಲ್ಲು ಅರ್ಜುನ್ ಕೂಡ ಇದೇ ಸಾಲಿಗೆ ಸೇರುತ್ತಾರೆ. ಅವರು ಇಲ್ಲಿನ ಅಭಿಮಾನಿಗಳನ್ನು ರಂಜಿಸುವ ಗುರಿ ಹೊಂದಿದ್ದಾರೆ.

‘ಸದ್ಯಕ್ಕಂತೂ ಹಿಂದಿಯಲ್ಲಿ ನಟಿಸೋದು ನನ್ನ ಕಂಫರ್ಟಬಲ್ ಜೋನ್​ನ ಹೊರಗಿರುವ ವಿಚಾರ. ಆದರೆ, ಅಗತ್ಯವಿದ್ದರೆ ನಾನು ಅಲ್ಲಿ ಹೋಗಿ ನಟಿಸುತ್ತೇನೆ’ ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಲ್ಲು ಅರ್ಜುನ್ ಹೇಳಿದ್ದಾರೆ. ಈ ಮೂಲಕ ಸದ್ಯಕ್ಕಂತೂ ಬಾಲಿವುಡ್​ಗೆ ಹೋಗುವ ಆಲೋಚನೆ ಇಲ್ಲ ಎಂದಿದ್ದಾರೆ ಅವರು.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಈ ರೀತಿಯ ಹೇಳಿಕೆ ನೀಡಿ ಮಹೇಶ್ ಬಾಬು ಚರ್ಚೆಗೆ ಗುರಿ ಆಗಿದ್ದರು. ‘ಬಾಲಿವುಡ್​ಗೆ ನನ್ನ ಭರಿಸುವ ಶಕ್ತಿಯೇ ಇಲ್ಲ. ಹೀಗಾಗಿ, ನಾನು ಬಾಲಿವುಡ್​ಗೆ ತೆರಳಲ್ಲ’ ಎಂದು ಹೇಳಿದ್ದರು. ಬಾಲಿವುಡ್​ಗೆ ಹೋಗಿ ಸಿನಿಮಾ ಮಾಡುವುದು ಕಂಫರ್ಟಬಲ್ ಎನಿಸುವುದಿಲ್ಲ ಎಂಬ ಅರ್ಥದಲ್ಲಿ ಅವರು ಈ ರೀತಿ ಹೇಳಿಕೆ ನೀಡಿದ್ದರು. ಆದರೆ, ಅದನ್ನು ಬೇರೆ ರೀತಿಯಲ್ಲಿ ಅರ್ಥೈಸಲಾಗಿತ್ತು. ನಂತರ ಮಹೇಶ್ ಬಾಬು ಇದಕ್ಕೆ ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ತಾಂಜಾನಿಯಾದಲ್ಲಿ ಅಲ್ಲು ಅರ್ಜುನ್ ಫ್ಯಾಮಿಲಿ; ನ್ಯಾಷನಲ್​ ಪಾರ್ಕ್​ನಲ್ಲಿ ಪೋಸ್ ನೀಡಿದ ಕುಟುಂಬ

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕೆ ಇತ್ತೀಚೆಗೆ ಆಡಿಷನ್ ಪೂರ್ಣಗೊಂಡಿದೆ. ಈ ತಿಂಗಳಾಂತ್ಯಕ್ಕೆ ಚಿತ್ರದ ಶೂಟಿಂಗ್ ಆರಂಭ ಆಗುವ ನಿರೀಕ್ಷೆ ಇದೆ. ಈ ಸಿನಿಮಾಗೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ನಾಯಕಿ.

Published On - 7:53 pm, Mon, 18 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ