‘ಪುನೀತ್ ರಾಜ್ಕುಮಾರ್ ಅವರು ನನಗೆ ಬಹಳ ಕಾಲದಿಂದ ಪರಿಚಯ. ನಮ್ಮ ಮನೆಗೆ ಬರುತ್ತಿದ್ದರು. ಎಷ್ಟೋ ಬಾರಿ ಜೊತೆಯಲ್ಲಿ ಕುಳಿತು ಊಟ ಮಾಡಿದ್ದೆವು. ನಮ್ಮಿಬ್ಬರ ನಡುವೆ ಪರಸ್ಪರ ಪ್ರೀತಿ-ವಿಶ್ವಾಸ ಇತ್ತು. ಒಂದು ಡ್ಯಾನ್ಸ್ ಕಾರ್ಯಕ್ರಮದಲ್ಲಿ ನಾವು ಜಡ್ಜ್ ಆಗಿದ್ದೆವು. ಯಾವಾಗ ಮಾತನಾಡಿದರೂ ಬೆಂಗಳೂರಿಗೆ ಬನ್ನಿ ಎಂದು ಕರೆಯುತ್ತಿದ್ದರು. ಆದರೆ ಇಂದು ಸಡನ್ ಆಗಿ ಅವರು ಇಲ್ಲ ಎಂಬುದನ್ನು ನಂಬಲಾಗುತ್ತಿಲ್ಲ’ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.
‘ಮೊದಲ ಬಾರಿಗೆ ಈ ಸುದ್ದಿ ಕೇಳಿದಾಗ ತುಂಬ ಶಾಕ್ ಆಯಿತು. ಬದುಕು ತೀರಾ ಅನಿಶ್ಚಿತ. ಒಂದು ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಬದುಕಿನಲ್ಲಿ ಯಾವಾಗಲೂ ಖುಷಿಯಾಗಿರಿ. ಎಂಥ ದೊಡ್ಡ ಸೂಪರ್ ಸ್ಟಾರ್ ಆಗಿದ್ದರು ಪುನೀತ್ ರಾಜ್ಕುಮಾರ್. ತುಂಬ ಒಳ್ಳೆಯ ವ್ಯಕ್ತಿ. ಕನ್ನಡ ಚಿತ್ರರಂಗಕ್ಕಾಗಿ ಅವರು ತುಂಬ ಕೊಡುಗೆ ನೀಡಿದ್ದರು. ನಮ್ಮ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಆಗಿದ್ದರು’ ಎಂದು ಅಲ್ಲು ಅರ್ಜುನ್ ಭಾವುಕರಾದರು.
ವಿಜಯ್ ದೇವಕೊಂಡ ಸಹೋದರ ಆನಂದ್ ದೇವರಕೊಂಡ ನಟನೆಯ ‘ಪುಷ್ಪಕ ವಿಮಾನಂ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅಲ್ಲು ಅರ್ಜುನ್ ಭಾಗವಹಿಸಿದ್ದರು. ಆಗ ವೇದಿಕೆಯಲ್ಲಿ ಅಪ್ಪು ಬಗ್ಗೆ ಅವರು ಮಾತನಾಡಿದರು. ‘ಎಲ್ಲರೂ ಎರಡು ನಿಮಿಷ ಎದ್ದು ನಿಂತು ಪುನೀತ್ ರಾಜ್ಕುಮಾರ್ ಅವರಿಗಾಗಿ ಮೌನಾಚರಣೆ ಮಾಡೋಣ’ ಎನ್ನುವ ಮೂಲಕ ಅಪ್ಪು ಆತ್ಮಕ್ಕೆ ಅವರು ಶಾಂತಿ ಕೋರಿದರು.
ಇದನ್ನೂ ಓದಿ:
Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ