AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಭಾವುಕ ಮಾತು; ತೆಲುಗು ಸಿನಿಮಾ ವೇದಿಕೆಯಲ್ಲಿ ಮೌನಾಚರಣೆ

Allu Arjun: ‘ಪುಷ್ಪಕ ವಿಮಾನಂ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅಲ್ಲು ಅರ್ಜುನ್​ ಭಾಗವಹಿಸಿದ್ದರು. ಆಗ ವೇದಿಕೆಯಲ್ಲಿ ಪುನೀತ್​ ರಾಜ್​ಕುಮಾರ್​ ಬಗ್ಗೆ ಅವರು ಭಾವುಕವಾಗಿ ಮಾತನಾಡಿದರು.

Puneeth Rajkumar: ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಭಾವುಕ ಮಾತು; ತೆಲುಗು ಸಿನಿಮಾ ವೇದಿಕೆಯಲ್ಲಿ ಮೌನಾಚರಣೆ
ಅಲ್ಲು ಅರ್ಜುನ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Oct 31, 2021 | 12:52 PM

Share

ಅಜಾತಶತ್ರು ರೀತಿಯಲ್ಲಿ ಬದುಕಿದ್ದವರು ಪುನೀತ್​ ರಾಜ್​ಕುಮಾರ್​. ಅಂಥವರನ್ನು ದೇವರು ಇಷ್ಟು ಬೇಗ ಕರೆದುಕೊಂಡಿದ್ದನ್ನು ಯಾರಿಂದಲೂ ಸಹಿಸಲಾಗುತ್ತಿಲ್ಲ. ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲೂ ಪುನೀತ್​ಗೆ ಅಪಾರ ಅಭಿಮಾನಿಗಳಿದ್ದರು. ಪರಭಾಷೆಯ ಸಿನಿಮಾರಂಗದಲ್ಲಿ ಅವರು ಬಹಳಷ್ಟು ಸ್ನೇಹಿತರನ್ನು ಸಂಪಾದಿಸಿದ್ದರು. ಅಪ್ಪು ನಿಧನಕ್ಕೆ ಇಡೀ ತೆಲುಗು ಚಿತ್ರರಂಗ ಮರುಗಿದೆ. ಚಿರಂಜೀವಿ, ಜ್ಯೂ. ಎನ್​ಟಿಆರ್​, ವಿಕ್ಟರಿ ವೆಂಕಟೇಶ್​ ಮುಂತಾದ ಘಟಾನುಘಟಿ ಸ್ಟಾರ್​ ಕಲಾವಿದರೆಲ್ಲ ಬಂದು ಅಂತಿಮ ನಮನ ಸಲ್ಲಿಸಿದ್ದಾರೆ. ನಟ ಅಲ್ಲು ಅರ್ಜುನ್​ ಅವರು ಪುನೀತ್​ ಬಗ್ಗೆ ತೆಲುಗಿನ ಸಿನಿಮಾ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮಾತನಾಡಿದ್ದಾರೆ.

‘ಪುನೀತ್​ ರಾಜ್​ಕುಮಾರ್​ ಅವರು ನನಗೆ ಬಹಳ ಕಾಲದಿಂದ ಪರಿಚಯ. ನಮ್ಮ ಮನೆಗೆ ಬರುತ್ತಿದ್ದರು. ಎಷ್ಟೋ ಬಾರಿ ಜೊತೆಯಲ್ಲಿ ಕುಳಿತು ಊಟ ಮಾಡಿದ್ದೆವು. ನಮ್ಮಿಬ್ಬರ ನಡುವೆ ಪರಸ್ಪರ ಪ್ರೀತಿ-ವಿಶ್ವಾಸ ಇತ್ತು. ಒಂದು ಡ್ಯಾನ್ಸ್​ ಕಾರ್ಯಕ್ರಮದಲ್ಲಿ ನಾವು ಜಡ್ಜ್​ ಆಗಿದ್ದೆವು. ಯಾವಾಗ ಮಾತನಾಡಿದರೂ ಬೆಂಗಳೂರಿಗೆ ಬನ್ನಿ ಎಂದು ಕರೆಯುತ್ತಿದ್ದರು. ಆದರೆ ಇಂದು ಸಡನ್​ ಆಗಿ ಅವರು ಇಲ್ಲ ಎಂಬುದನ್ನು ನಂಬಲಾಗುತ್ತಿಲ್ಲ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ.

‘ಮೊದಲ ಬಾರಿಗೆ ಈ ಸುದ್ದಿ ಕೇಳಿದಾಗ ತುಂಬ ಶಾಕ್​ ಆಯಿತು. ಬದುಕು ತೀರಾ ಅನಿಶ್ಚಿತ. ಒಂದು ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಬದುಕಿನಲ್ಲಿ ಯಾವಾಗಲೂ ಖುಷಿಯಾಗಿರಿ. ಎಂಥ ದೊಡ್ಡ ಸೂಪರ್​ ಸ್ಟಾರ್​ ಆಗಿದ್ದರು ಪುನೀತ್​ ರಾಜ್​ಕುಮಾರ್​. ತುಂಬ ಒಳ್ಳೆಯ ವ್ಯಕ್ತಿ. ಕನ್ನಡ ಚಿತ್ರರಂಗಕ್ಕಾಗಿ ಅವರು ತುಂಬ ಕೊಡುಗೆ ನೀಡಿದ್ದರು. ನಮ್ಮ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಆಗಿದ್ದರು’ ಎಂದು ಅಲ್ಲು ಅರ್ಜುನ್​ ಭಾವುಕರಾದರು.

ವಿಜಯ್​ ದೇವಕೊಂಡ ಸಹೋದರ ಆನಂದ್​ ದೇವರಕೊಂಡ ನಟನೆಯ ‘ಪುಷ್ಪಕ ವಿಮಾನಂ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅಲ್ಲು ಅರ್ಜುನ್​ ಭಾಗವಹಿಸಿದ್ದರು. ಆಗ ವೇದಿಕೆಯಲ್ಲಿ ಅಪ್ಪು ಬಗ್ಗೆ ಅವರು ಮಾತನಾಡಿದರು. ‘ಎಲ್ಲರೂ ಎರಡು ನಿಮಿಷ ಎದ್ದು ನಿಂತು ಪುನೀತ್​ ರಾಜ್​ಕುಮಾರ್​ ಅವರಿಗಾಗಿ ಮೌನಾಚರಣೆ ಮಾಡೋಣ’ ಎನ್ನುವ ಮೂಲಕ ಅಪ್ಪು ಆತ್ಮಕ್ಕೆ ಅವರು ಶಾಂತಿ ಕೋರಿದರು.

ಇದನ್ನೂ ಓದಿ:

Puneeth Rajkumar: ‘ಡಾ. ರಾಜ್​ ಸಮಾಧಿ ಮಣ್ಣನ್ನು ಫ್ಯಾನ್ಸ್​ ತೋಡಿದ್ದರು; ಅಂಥ ಸ್ಥಿತಿ ಪುನೀತ್​ಗೆ ಬರಬಾರದು’; ರಾಘಣ್ಣ ಮನವಿ

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ